Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...