Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...