Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...