Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...