Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...