Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...