Homeಮುಖಪುಟಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚಾರಿಕೆ ಮಾಡಲಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯು ದಿ ನ್ಯೂಯಾರ್ಕ್ ಟೈಮ್ಸ್‌ನ ತನಿಖಾ ವರದಿಯನ್ನೂ ಪರಿಶೀಲಿಸಬೇಕು ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಒತ್ತಾಯಿಸಿದೆ.

ಭಾರತ ಸರ್ಕಾರವು 2017ರಲ್ಲಿ ಇಸ್ರೇಲ್‌ನಿಂದ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್‌ ವರದಿ ಮಾಡಿದೆ. ಸುಮಾರು 2 ಶತಕೋಟಿ ಡಾಲರ್‌‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್‌ನ ಭಾಗವಾಗಿ ಭಾರತವು ಸ್ಪೈವೇರ್ ಖರೀದಿಸಿದೆ ಎಂದು ವರದಿ ಉಲ್ಲೇಖಿಸಿದೆ.

NSO ಗ್ರೂಪ್ ಅಭಿವೃದ್ಧಿಪಡಿಸಿದ ಪೆಗಾಸಸ್ ಬಳಕೆಯ ಕುರಿತು ಪ್ರಪಂಚದಾದ್ಯಂತದ ಹಲವಾರು ಮಾಧ್ಯಮ ಸಂಸ್ಥೆಗಳು ವರದಿ ಮಾಡಿದ್ದವು. ಭಾರತದಲ್ಲಿಯೂ ಅನೇಕ ಗಣ್ಯರ ಮೇಲೆ ಗೂಢಚಾರಿಕೆ ಮಾಡಲಾಗುತ್ತಿದೆ ಎಂಬ ವರದಿಯನ್ನು ಸುದ್ದಿಜಾಲತಾಣ, ‘ದಿ ವೈರ್‌‌’ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್‌ ಅವರಿಗೆ ಪತ್ರ ಬರೆದಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಯಾರ್ಕ್ ಟೈಮ್ಸ್‌ ವರದಿಯನ್ನು ಉಲ್ಲೇಖೀಸಿದೆ. ಕೇಂದ್ರ ಸರ್ಕಾರ, ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ ಮತ್ತು ಆಪಾದಿತ ಸಚಿವಾಲಯಗಳ ಕಾರ್ಯದರ್ಶಿಗಳಿಂದ ಪ್ರತಿಕ್ರಿಯೆ ಕೇಳುವಂತೆ ಸಮಿತಿಗೆ ಮನವಿ ಮಾಡಿದೆ.

ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ಮಾಡಲು ಅಕ್ಟೋಬರ್ 27ರಂದು ಸುಪ್ರೀಂ ಕೋರ್ಟ್ ನೇಮಿಸಿದ ಮೂವರು ಸದಸ್ಯರ ತಾಂತ್ರಿಕ ಸಮಿತಿಗೆ ನ್ಯಾಯಮೂರ್ತಿ ರವೀಂದ್ರನ್ ಮುಖ್ಯಸ್ಥರಾಗಿದ್ದಾರೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ನ್ಯೂಯಾರ್ಕ್ ಟೈಮ್ಸ್‌ ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಲಾಗಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಬಜೆಟ್ ಅಧಿವೇಶನ: ಪೆಗಾಸಸ್‌‌ ಗೂಢಚಾರಿಕೆ ಪ್ರಶ್ನಿಸಲು ಪ್ರತಿಪಕ್ಷಗಳು ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...