Homeಕರ್ನಾಟಕಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಆರೋಪ ಮಾಡಿದವರ ವಿರುದ್ಧ ಮೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರವಿ ಡಿ.ಚನ್ನಣ್ಣನವರ್‌ ತಿಳಿಸಿದ್ದಾರೆ.

- Advertisement -
- Advertisement -

“ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಆಧಾರ ರಹಿತ ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ” ಎಂದು ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದಾಗಿವೆ. ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಜರುಗಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ. ನಾನು ಈ ಕುರಿತು ಸಂಬಂಧಪಟ್ಟ ನ್ಯಾಯಾಲಯದಲ್ಲಿ, ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ ಎಂದು ಅವರು ಎಚ್ಚರಿಸಿದ್ದಾರೆ.

ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....