Homeಕರ್ನಾಟಕಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಆರೋಪ ಮಾಡಿದವರ ವಿರುದ್ಧ ಮೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರವಿ ಡಿ.ಚನ್ನಣ್ಣನವರ್‌ ತಿಳಿಸಿದ್ದಾರೆ.

- Advertisement -
- Advertisement -

“ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಆಧಾರ ರಹಿತ ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ” ಎಂದು ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದಾಗಿವೆ. ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಜರುಗಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ. ನಾನು ಈ ಕುರಿತು ಸಂಬಂಧಪಟ್ಟ ನ್ಯಾಯಾಲಯದಲ್ಲಿ, ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ ಎಂದು ಅವರು ಎಚ್ಚರಿಸಿದ್ದಾರೆ.

ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...