Homeಚಳವಳಿ‘ಖಾಸಗೀಕರಣ’: ಒಕ್ಕೂಟ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಿರುವ ವಿದ್ಯುತ್ ವಲಯದ ನೌಕರರು

‘ಖಾಸಗೀಕರಣ’: ಒಕ್ಕೂಟ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಿರುವ ವಿದ್ಯುತ್ ವಲಯದ ನೌಕರರು

- Advertisement -
- Advertisement -

ಖಾಸಗೀಕರಣ ನೀತಿಗಳ ವಿರುದ್ಧ ವಿದ್ಯುತ್ ವಲಯದ ಕಾರ್ಮಿಕರು ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಆಲ್ ಇಂಡಿಯಾ ಪವರ್ ಎಂಜಿನಿಯರ್ಸ್ ಫೆಡರೇಶನ್ (AIPEF) ತಿಳಿಸಿದೆ. “ವಿದ್ಯುತ್ ನೌಕರರು ಮತ್ತು ಎಂಜಿನಿಯರ್‌ಗಳ ರಾಷ್ಟ್ರೀಯ ಸಮನ್ವಯ ಸಮಿತಿಯ (NCCOEEE) ಕರೆ ಮೇರೆಗೆ ದೇಶಾದ್ಯಂತ ವಿದ್ಯುತ್ ನೌಕರರು ಮತ್ತು ಇಂಜಿನಿಯರ್‌ಗಳು ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗಳ ವಿರುದ್ಧ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಲಿದ್ದಾರೆ” ಎಂದು AIPEF ತನ್ನ ಹೇಳಿಕೆಯನ್ನು ತಿಳಿಸಿದೆ.

ಫೆಡರೇಶನ್ ಹೇಳಿಕೆಯ ಪ್ರಕಾರ, NCCOEEE ಕೋರ್ ಕಮಿಟಿ ನಾಯಕರು ಫೆಬ್ರವರಿ 1 ರಂದು ಪಂಜಾಬ್ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಮತ್ತು ಚಂಡೀಗಢ ಯುಟಿ ವಿದ್ಯುತ್ ಇಲಾಖೆಯ ಖಾಸಗೀಕರಣದ ವಿರುದ್ಧ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಜೊತೆಗೆ NCCOEEE ಕೋರ್ ಕಮಿಟಿ ಪದಾಧಿಕಾರಿಗಳು ಫೆಬ್ರವರಿ 2 ರಂದು ಪುದುಚೇರಿಯಲ್ಲಿ ಪುದುಚೇರಿ ವಿದ್ಯುತ್ ನೌಕರರ ಮುಷ್ಕರ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

AIPEF ಅಧ್ಯಕ್ಷ ಶೈಲೇಂದ್ರ ದುಬೆ ಮಾತನಾಡಿ, “ದೇಶಾದ್ಯಂತ ಸುಮಾರು 1.5 ಮಿಲಿಯನ್ ಪವರ್ ಎಂಪ್ಲಾಯೀಸ್ ಮತ್ತು ಇಂಜಿನಿಯರ್‌ಗಳು NCCOEEEಯ ಕರೆ ಮೇರೆಗೆ ಫೆಬ್ರವರಿ 1 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗಳ ವಿರುದ್ಧ ಮತ್ತು ಯೋಜನೆಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.

ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ-2021 ಹಿಂಪಡೆಯಬೇಕು ಎಂಬುವುದು ವಿದ್ಯುತ್ ನೌಕರರು ಮತ್ತು ಇಂಜಿನಿಯರ್‌ಗಳ ಪ್ರಮುಖ ಬೇಡಿಕೆಯಾಗಿದೆ.

ಖಾಸಗೀಕರಣದ ವಿರುದ್ಧ ಯುಟಿ ಪವರ್ ನೌಕರರ ಮುಷ್ಕರವನ್ನು ಬೆಂಬಲಿಸಲು NCCOEEE ಕೋರ್ ಕಮಿಟಿ ನಾಯಕರು ಫೆಬ್ರವರಿ 1 ರಂದು ಚಂಡೀಗಢವನ್ನು ತಲುಪಲಿದ್ದಾರೆ ಎಂದು ಶೈಲೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ ಪ್ರಚಾರ ಪ್ರಾರಂಭಿಸಿದ ಎಎಪಿ: 300 ಯೂನಿಟ್‌‌ವರೆಗೆ ಉಚಿತ ವಿದ್ಯುತ್‌ ಭರವಸೆ!

ಲಾಭ ಗಳಿಸುತ್ತಿರುವ ಚಂಡೀಗಢದ ವಿದ್ಯುತ್ ಇಲಾಖೆಯ ಖಾಸಗೀಕರಣದ ವಿರುದ್ಧ ಫೆ.1ರಂದು ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಲಿದ್ದಾರೆ. ಚಂಡೀಗಢ ವಿದ್ಯುತ್ ಇಲಾಖೆ ಕಳೆದ ಏಳು ವರ್ಷಗಳಿಂದ ಲಾಭ ಗಳಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

2020-2021 ರ ವರ್ಷದ ಲಾಭವು 257 ಕೋಟಿ ರೂ.ಗಳಷ್ಟಿತ್ತು ಮತ್ತು ಚಂಡೀಗಢದಲ್ಲಿ ಲೈನ್ ನಷ್ಟಗಳು ಕೇವಲ 09.2% ಮಾತ್ರವಾಗಿದೆ. ಪಂಜಾಬ್ ಮತ್ತು ಹರಿಯಾಣಕ್ಕೆ ಹೋಲಿಸಿದರೆ ಚಂಡೀಗಢದ ಸುಂಕವೂ ಅಗ್ಗವಾಗಿದೆ. ಅಂತಹ ಲಾಭದಾಯಕ ಉದ್ಯಮಗಳನ್ನು ಖಾಸಗೀಕರಣ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದ್ದಾರೆ.

ಲಾಭ ಗಳಿಸುತ್ತಿರುವ ಪುದುಚೇರಿ ವಿದ್ಯುತ್ ಇಲಾಖೆಗಳ ಖಾಸಗೀಕರಣದ ವಿರುದ್ಧ ಪುದುಚೇರಿ ವಿದ್ಯುತ್ ನೌಕರರು ಮತ್ತು ಇಂಜಿನಿಯರ್‌ಗಳು ಫೆಬ್ರವರಿ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಫೆಡರೇಶನ್ ಹೇಳಿದೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...