Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

- Advertisement -
- Advertisement -

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ.

ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 2017 ರಲ್ಲಿ ಪತ್ರಿಕಾಗೋಷ್ಠಿಯಲ್ಲಿಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ. ಕ್ರಿಕೆಟ್‌ ಮಂಡಳಿ ಯಾರನ್ನೇ ತಂಡದ ನಾಯಕನೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಂಡದ ವಿಕೆಟ್-ಕೀಪರ್ ಉಪನಾಯಕನಂತೆಯೇ ಕಾರ್ಯನಿರ್ವಹಿಸುತ್ತಾನೆ. ಪಂದ್ಯದ ಸಮಯದಲ್ಲಿ ಮೈದಾನ ಸಿದ್ಧಪಡಿಸುವ ಜವಾಬ್ದಾರಿ ವಿಕೆಟ್-ಕೀಪರ್‌ ಮೇಲಿರುತ್ತದೆ. ನಾಯಕನ ಸಲಹೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಆತನೇ ಮಾಡುತ್ತಾನೆ ಎಂದು ಧೋನಿ ಹೇಳಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ವೆಸ್ಟ್ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯ ಆಡಲು ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಆದರೆ 2ನೇ ಏಕದಿನ ಪಂದ್ಯದಿಂದ ರಾಹುಲ್‌ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯದಲ್ಲಿ ನಾಯಕತ್ವದ ಭಾಗವಾಗಿ ಪಂತ್‌ರನ್ನು ಪರಿಗಣಿಸಿರುವುದು ತಾತ್ಕಾಲಿಕ ನಿರ್ಧಾರವಾದರೂ, ಭವಿಷ್ಯದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ಬಲವಾಗಿ ನಡೆಯುತ್ತಿವೆ.

ಕ್ರಿಕೆಟ್‌ ಅಭಿಮಾನಿಗಳು ಮತ್ತು ಪರಿಣಿತರ ಅಭಿಪ್ರಾಯದಂತೆ ತಂಡದ ನಾಯಕ ಸ್ಥಾನವನ್ನುಅಲಂಕರಿಸುವ ಓಟದಲ್ಲಿ ರೋಹಿತ್‌ ಶರ್ಮಾ ಮೊದಲ ಸ್ಥಾನದಲ್ಲಿದ್ದಂತೆ, ಮುಂದಿನ ದಿನಗಳಲ್ಲಿ ಪಂತ್‌ ಸಹ ಸ್ಥಾನ ಗಿಟ್ಟಿಸುವ ಸಾಲಿನಲ್ಲಿ ಪ್ರಮುಖರಾಗಲಿರುವ ಕಾಲ ದೂರವಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಅನೇಕ ಕ್ರಿಕೆಟ್‌ ವಿಶ್ಲೇಷಕರ ಅಭಿಪ್ರಾಯದಂತೆ ಮುಂದಿನ ಏಪ್ರಿಲ್‌ಗೆ ರೋಹಿತ್‌ ಶರ್ಮಾ ಅವರಿಗೆ 35 ವರ್ಷವಾಗಲಿದ್ದು, ಕೆಲ ವರ್ಷಗಳವರೆಗೆ ಅವರು ಕ್ಯಾಪ್ಟನ್‌ ಸ್ಥಾನದಲ್ಲಿರಬಹುದು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರುಗಳನ್ನು ಹಿಂದಿಕ್ಕುವ ಸಾಮರ್ಥ್ಯವಿರುವ, ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ಮುನ್ನೆಡೆಸುವಂಥ ನಾಯಕನನ್ನುಗುರುತಿಸುವ ಜವಾಬ್ದಾರಿಯೂ ಬಿಸಿಸಿಐ ಮುಂದಿದೆ. ಇದೇ ಕಾರಣಕ್ಕೆ 25 ವರ್ಷದ ಪಂತ್‌ರಂತಹ ಯುವ ಆಟಗಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 2021 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸಿದ ಅನುಭವ ರಿಷಬ್‌ ಪಂತ್‌ಗಿದೆ. ದೆಹಲಿ ತಂಡವನ್ನು ಅಂಕಪಟ್ಟಿಯಲ್ಲಿ ನಂಬರ್‌ 1 ಆಗಿ ಪ್ಲೇ ಆಫ್‌ಗೆ ತಂದು ನಿಲ್ಲಿಸಿದ್ದರು.

ಮಾರ್ಚ್ 27 ರಲ್ಲಿ ಪ್ರಸಕ್ತ ಸಾಲಿನ ಕ್ರಿಕೆಟ್‌ ಸೀಸನ್ ಆರಂಭವಾಗುವ ನಿರೀಕ್ಷೆ ಇದ್ದು, ಪಂತ್ ನಾಯಕ ಸ್ಥಾನಕ್ಕೆ ಹಿಂದಿರುಗುವ ಹಾಗೂ ಮತ್ತೊಮ್ಮೆ ದೆಹಲಿಗೆ ಟ್ರೋಫಿ ತರಲು ಪ್ರಯತ್ನಿಸುವ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...