Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ ವಿವಾದ: ವಿಇಎಸ್‌ ಶಾಲೆ ತಪ್ಪೊಪ್ಪಿಗೆ

ಆರು ಅಂಶಗಳನ್ನು ಪತ್ರದಲ್ಲಿ ಪ್ರಸ್ತಾಪಿಸಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮ ಆಯೋಜಿಸುವುದಾಗಿಯೂ, ಪ್ರತಿದಿನ ಚಾಚೂತಪ್ಪದೇ ಪ್ರಸ್ತಾವನೆಯನ್ನು ಓದುವುದಾಗಿಯೂ ತಿಳಿಸಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಕೊನೆಗೂ ತಪ್ಪೊಪ್ಪಿಕೊಂಡಿದೆ.

ಈ ಸಂಬಂಧ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿರುವ ಶಾಲೆಯು, ‘ಸಂವಿಧಾನ ಅರಿವು’ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು.

ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್‌ ಚರ್ಚಾ ಸ್ಪರ್ಧೆಯಲ್ಲಿ ಸಂವಿಧಾನಕ್ಕೆ ಅಗೌರವ, ಅಪನಂಬಿಕೆ ತೋರುವ ರೀತಿಯಲ್ಲಿ ವಿಷಯವನ್ನು ನೀಡಲಾಗಿತ್ತು. ‘72 years of Bharathiya Samvidhana/Indian Constitution has reached expiry Date’ (72 ವರ್ಷಗಳ ಭಾರತ ಸಂವಿಧಾನದ ಅವಧಿ ಮುಗಿದಿದೆ) ಎಂಬ ವಿಷಯವನ್ನು ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿವಾದದ ಕುರಿತು ಶಾಲೆಯ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಶಾಲೆಯ ವತಿಯಿಂದ ಬಂದಿರಲಿಲ್ಲ. ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ರಾಯಚೂರು ಪ್ರಕರಣದ ಜೊತೆಗೆ ವಿಇಎಸ್ ಶಾಲೆಯಲ್ಲಾದ ಸಂವಿಧಾನ ವಿರೋಧಿ ಕೆಲಸವು ಟೀಕೆಗೆ ಒಳಗಾದ ಬೆನ್ನಲ್ಲೇ ಶಾಲೆಯ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ (ಕರ್ನಾಟಕ) ಪ್ರಧಾನ ಸಂಚಾಲಕರಿಗೆ, ರಾಜ್ಯ ಸಂಚಾಲಕರುಗಳಿಗೆ, ಪತ್ರ ಬರೆದಿರುವ ಶಾಲೆಯು ಆರು ಅಂಶಗಳನ್ನು ಪ್ರಸ್ತಾಪಿಸಿದೆ.

“ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ “72 years of Bharathiya Samvidana/Indian Constitution has it reached expiry date” ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ” ಎಂದು ತಿಳಿಸಿದೆ.

“ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ” ಎಂದು ಹೇಳಿದೆ.

“ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ” ಎಂದು ಸ್ಪಷ್ಟನೆ ನೀಡಲಾಗಿದೆ.

“ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ” ಎಂದು ತಿಳಿಸಿದೆ.

“ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ” ಎಂದು ಸ್ಪಷ್ಟಪಡಿಸಲಾಗಿದೆ.

ಕ್ಷಮೆಯಾಚನೆಯ ಬಳಿಕ ಮತ್ತೊಂದು ಹೇಳಿಕೆ: ಕ್ಷಮೆಯಾಚನೆಯ ಹೇಳಿಕೆ ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿಯು ನೀಡಿರುವ ಹೇಳಿಕೆಯು ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ.

“ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ” ಎಂದು ಶಾಲೆ ಆರೋಪಿಸಿದೆ. ಹೀಗಾಗಿ ರಾಮನಗರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಒಂದು ಕಡೆ ಕ್ಷಮೆಯಾಚಿಸಿ, ಮತ್ತೊಂದು ಕಡೆ ಪಿತೂರಿಯ ಆರೋಪ ಹೊರಿಸಲಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...