Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....