Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...