Homeಕರ್ನಾಟಕಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ...

ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ ಟಿವಿ!

- Advertisement -
| ನಾನುಗೌರಿ ಡೆಸ್ಕ್ |
ಕಳೆದ ನಾಲ್ಕೈದು ವರ್ಷಗಳಿಂದ ಮಾಧ್ಯಮಗಳು ಬಿಜೆಪಿ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿರುವುದು ಸರ್ವೇಸಾಮಾನ್ಯವಾಗೊ ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕನ್ನಡ ಮಾಧ್ಯಮಗಳಂತೂ ತಮಗೆ ಸರಿಸಾಟಿ ಯಾರು ಇಲ್ಲವೆಂಬಂತೆ ಮೋದಿಯ ಗುಣಗಾನ ಮಾಡುವುದಕ್ಕೆ ಪೈಪೋಟಿಗೆ ಬಿದ್ದಿವೆ. ಬೆಳಗ್ಗೆಯ ಸಮಯದಲ್ಲಿ ಸುಪ್ರಭಾತ, ಭಕ್ತಿದೇಗುಲಗಳಂತ ಮೌಢ್ಯತುಂಬುವ ಕಾರ್ಯಕ್ರಮ ಕೊಡುತ್ತಿದ್ದ ಮಾಧ್ಯಮಗಳು ಈಗ ಮೋದಿಯ ಮೌಢ್ಯವನ್ನು ತುಂಬಲು ಶುರುವಿಟ್ಟಿವೆ. ಇದರಲ್ಲಿ ಸುವರ್ಣ ಟಿವಿಯಂತೂ ಮೋದಿಯ ಹೆಸರನೇ ಜಪಿಸುವುದರಲ್ಲಿ ತಲ್ಲೀನವಾಗಿವೆ.
ಅಂದಹಾಗೆ ಮೊನ್ನೆ ಸುವರ್ಣ ನ್ಯೂಸ್‍ನಲ್ಲಿ ರಾತ್ರಿಯ ಸುವರ್ಣ ಫೋಕಸ್ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ಇಂದಲೇ ಜಾಹೀರಾತು ನೀಡಲು ಆರಂಭಿಸಿದ್ದರು. ಅಂತದ್ದೇನಿದೆ ಎಂದು ನೋಡಿದ್ರೆ ಅದರ ಟೈಟಲ್ ‘ಬಾಹುಬಲಿ ಮೋದಿ’ ಎಂದಿತ್ತು.
ಅಬ್ಬಾ… ನಮ್ ಪ್ರಧಾನಿ ಮೋದಿ ಏನಾದ್ರು ಬಾಹುಬಲಿ 3 ಸಿನಿಮಾ ಏನಾದ್ರು ಮಾಡಿದ್ದಾರ ಅಥವಾ ಬಂಡೆ ಮೇಲೆ ಮಲಗಿ ಯೋಗ ಮಾಡ್ತಿದ್ದೋರು ಆ ಬಂಡೆನೇನಾದ್ರು ಎತ್ತಿ ಹೆಗಲ ಮೇಲೆ ಇಟ್ಕೊಬಿಟ್ರಾ ಅಂತ ರಾತ್ರಿವರೆಗೆ ಕಾದು ನೋಡಿದ್ವಿ. ಅಲ್ಲಿ ನೋಡಿದ್ರ ಆ ವಿಷ್ಯಕ್ಕೂ ಮೋದಿಗೂ ಸಂಬಂಧನೇ ಇರಲಿಲ್ಲ. ಆದ್ರು ಮೋದಿ ಕಾರ್ಯಕ್ರಮದ ಹೀರೋ ಆಗಿದ್ದು ಸೋಜಿಗ.
ಆ ಕಾರ್ಯಕ್ರಮದ ವಿಷಯ ಬಾಹ್ಯಾಕಾಶ ಸಮರದ ಬಗ್ಗೆ ಇತ್ತು. ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ. ಸೂಪರ್ ಸುಪ್ರಿಂ ರಾಷ್ಟ್ರಗಳಿಗೆ ಮೋದಿ ಹಾಕ್ತಿದ್ದಾರೆ ಚಾಲೆಂಜ್ ಎಂದೆಲ್ಲಾ ಬಿಲ್ಡಪ್ ಕೊಡಲಾಗುತ್ತಿತ್ತು. ನೋಡುಗರಲ್ಲಿ ಅದೆಂತಾ ಬಟನ್ ಇರಬಹುದು ಅದು, ಮೋದಿ ಏನಾದ್ರು ಕಂಡುಹಿಡಿದ್ರಾ ಎಂಬ ಕುತೂಹಲ ಕೆರಳಿಸಿತ್ತು.
ಮೊದಲನೆಯದಾಗಿ ಇಂದು ಎಲ್ಲಾ ದೇಶಗಳು ಯುದ್ಧ ಸಾಮಗ್ರಿಗಳಿಗೆ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದು ಗೊತ್ತೇ ಇದೆ. ಅದರಲ್ಲಿ ಭಾರತವೂ ಒಂದು. ಭಾರತವು ಪ್ರಾನ್ಸ್, ರಷ್ಯಾದಂತಹ ದೇಶಗಳಿಂದ ಯುದ್ಧ ವಿಮಾನಗಳು, ತಂತ್ರಜ್ಞಾನಗಳನ್ನು ಪಡೆದುಕೊಳ್ಳುತ್ತಿದೆ. ಅಂತದ್ದೇ ವಿಮಾನ ಖರೀದಿಯ ಡೀಲ್‍ನಲ್ಲಿ ಮೋದಿ ಸಾಹೇಬರ ಪಾತ್ರ ಎಂತದ್ದು ಅಂತ ಇಡೀ ಜಗತ್ತೇ ನೋಡಿದೆ.
ಇತ್ತೀಚೆಗೆ ಯುದ್ದ ತಂತ್ರಜ್ಞಾನಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು ಸಾವಿರಾರು ಕಿಲೋ ಮೀಟರ್ ದೂರದ ಸ್ಥಳಗಳಿಗೆ ತಾವಿರುವ ಜಾಗದಿಂದಲೇ ಬಾಂಬ್ ಉಡಾಯಿಸುವ ತಂತ್ರಜ್ಞಾನ ಬಂದು ವರ್ಷಗಳೇ ಕಳೆದಿವೆ. ಅಂತಹ ತಂತ್ರಜ್ಞಾನವನ್ನು ಭಾರತ ಕೂಡ ಪಡೆದುಕೊಂಡಿದೆ. ಇದರಲ್ಲಿ ಅಂತಹ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ ಅದರ ಕ್ರೆಡಿಟ್ ಕೊಡುವುದು ಸಾಮಾನ್ಯ. ಆದರೆ ಒಂದು ಬಟನ್ ಒತ್ತಿದ್ರೆ ಸಾಕು ಅಂತ ಹೇಳುವಾಗ ಅಲ್ಲಿ ಮೋದಿಯ ಪಾತ್ರವೇನೂ ಇಲ್ಲ. ಅದರ ಕ್ರೆಡಿಟ್ ಅಂತಹ ತಂತ್ರ ಸಂಶೋಧಿಸಿದವರಿಗೆ ಸೇರಿದ್ದು.
ಇನ್ನು ಸುಪ್ರಿಂ ರಾಷ್ಟ್ರಗಳಿಗೆ ಚಾಲೆಂಜ್ ಹಾಕ್ತಿದ್ದಾರೆ ಮೋದಿ ಎಂದು ಬೇರೆ ಹೇಳಲಾಗಿತ್ತು. ಇಂದಿಗೂ ನೆರೆ ರಾಷ್ಟ್ರಗಳಿಂದ ಯುದ್ದ ಅಸ್ತ್ರಗಳನ್ನ ಕೊಂಡುಕೊಳ್ಳುತ್ತಿರುವಾಗ, ಇಡೀ ವಿಶ್ವಕ್ಕೆ ಯುದ್ದಾಸ್ತ್ರಗಳನ್ನ ಸಪ್ಲೇ ಮಾಡುತ್ತಿರುವ ರಾಷ್ಟ್ರಗಳಲ್ಲಿ ಅಂತಹ ಅಸ್ತ್ರಗಳು ಅದೆಷ್ಟಿರಬಹುದು ಎಂಬ ಅರಿವೂ ಈ ಸುವರ್ಣ ಚಾನೆಲ್‍ನವರಿಗೆ ಇದ್ದಂತಿಲ್ಲ.
ಯುದ್ದ ವಿಚಾರ ನೋಡುವುದಾದರೆ ಅದರಲ್ಲಿ ಸೈನ್ಯದ ಪಾತ್ರದ ಮಹತ್ವದ್ದು, ಯುದ್ದ ಮಾಡಿ ಎಂದು ಹೇಳುವಷ್ಟು ಸುಲಭವಾಗಿ ಯುದ್ದ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಯುದ್ದವನ್ನು ಗೆಲ್ಲುವ ಸೈನಿಕರಿಗೆ ಆ ಕಾರ್ಯಕ್ರಮದಲ್ಲಿ ಯಾವ ಕ್ರೆಡಿಟ್ಟೂ ಇರಲಿಲ್ಲ.
ಇಷ್ಟೆಲ್ಲಾ ಇದ್ದರೂ ಕೂಡ ಸುವರ್ಣ ಚಾನೆಲ್ ಮೋದಿಯೇ ಯುದ್ಧಭೂಮಿಯಲ್ಲಿ ನಿಂತು ಯುದ್ಧ ಮಾಡಿ ಗೆದ್ದಿರುವಂತೆ, ಮೋದಿಯೇ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಂತೆ ಮೋದಿಯ ಬಗ್ಗೆ ಬಿಲ್ಡಪ್ ಕೊಡುತ್ತಿರುವುದು ಸೈನ್ಯಕ್ಕೆ ಮಾಡುವ ಅವಮಾನವೂ ಹೌದು. ವಿಶ್ಲೇಷಣೆ, ಮೌಲ್ಯಮಾಪನ, ಪ್ರತಿಕಾ ನೀತಿಗಳನ್ನೇ ಮರೆತಿರುವ ಇಂತಹ ನ್ಯೂಸ್ ಚಾನೆಲ್‍ಗಳು ಇನ್ನೆಂಥಾ ಸುದ್ದಿಯನ್ನು ಬಿತ್ತರಿಸಲು ಸಾಧ್ಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Super news from Nanu gouri it is an excellent news paper and it should cover all district of karnataka because other papers baise papers and TV channels…..

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...