Homeಕರೋನಾ ತಲ್ಲಣಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

- Advertisement -
- Advertisement -

ಹಲವು ರಾಜ್ಯ ಸರ್ಕಾರಗಳು ಹೊರಡಿಸಿರುವ ಕಡ್ಡಾಯ ಕೋವಿಡ್‌ ಲಸಿಕೆ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಒಕ್ಕೂಟ ಸರ್ಕಾರವು ವಿರೋಧಿಸಿದ್ದು, ‘ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ’ ಎಂದು ಸೋಮವಾರ ಪ್ರತಿಪಾದಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಹಲವಾರು ರಾಜ್ಯಗಳು ಮತ್ತು ಅಧಿಕಾರಿಗಳ ಆದೇಶದಿಂದ ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಲಸಿಕೆಯನ್ನು ಕಡ್ಡಾಯ ಮಾಡಿರುವುದರ ತುರ್ತು ಏನಿತ್ತು ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಗೆ ಒಂದು ಪೈಸೆಯು ಕೊಡದ ಪಿಎಂ ಕೇರ್‌!

“ಇದೀಗ, ಲಸಿಕೆಯನ್ನು ಕಡ್ಡಾಯ ಮಾಡುವುದರ ತುರ್ತು ಏನಿದೆ? ಇದರಿಂದಾಗಿ ಜನರು ತಮ್ಮ ಉದ್ಯೋಗವನ್ನು ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಲಸಿಕೆ ಕಡ್ಡಾಯ  ಆದೇಶಗಳ ಪರಿಣಾಮವಾಗಿ ಜನರು ಮುಕ್ತವಾಗಿ ತಿರುಗಾಡಲು ಕೂಡಾ ಸಾಧ್ಯವಾಗುತ್ತಿಲ್ಲ” ಎಂದು ಪ್ರಶಾಂತ್‌‌ ಭೂಷಣ್ ಹೇಳಿದ್ದಾರೆ.

ಈ ವಾದವನ್ನು ವಿರೋಧಿಸಿದ, ಒಕ್ಕೂಟ ಸರ್ಕಾರದ ಪ್ರತಿನಿಧಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಲಸಿಕೆ ಹಾಕದ ಕಾರಣ ಯಾರೂ ಉದ್ಯೋಗ ಕಳೆದುಕೊಳ್ಳುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಮುಂದೆ ಹೇಳಿದ್ದಾರೆ.

ಕೋವಿಡ್‌ ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ದತ್ತಾಂಶದ ಬಹಿರಂಗಪಡಿಸುವಿಕೆಗೆ ಮತ್ತು ಲಸಿಕೆ ಕಡ್ಡಾಯ ಆದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಗಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ಪೀಠವು ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

“ಕಡ್ಡಾಯ ಲಸಿಕೆಯಿಂದಾಗಿ ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ ಮತ್ತು ಈ ಬಗ್ಗೆ ಯಾರೂ ನ್ಯಾಯಾಲಯದ ಮುಂದೆ ಬಂದಿಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಒಬ್ಬ ವ್ಯಕ್ತಿಗೆ ಸೋಂಕು ತಗುಲಿದ್ದರೆ, ಈ ಸೋಂಕಿನಿಂದ ಅವರನ್ನು ರಕ್ಷಿಸಲು ಲಸಿಕೆಗಿಂತ ಉತ್ತಮವಾದ ಬೇರೆ ಮಾರ್ಗಗಳಿವೆ ಎಂದು ಸಾಬೀತಾಗಿದೆ ಎಂದು ಪ್ರಶಾಂತ್‌ ಭೂಷಣ್ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

ಕಡ್ಡಾಯ ಲಸಿಕೆ ಆದೇಶಗಳು ನಾಗರಿಕರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುತ್ತಿವೆ ಎಂದು ಅವರು ವಾದಿಸಿದ್ದಾರೆ. ತನಗೆ ಲಸಿಕೆ ಬೇಕೇ ಅಥವಾ ಬೇಡವೇ ಎಂದು ನಿರ್ಧರಿಸುವುದು ವ್ಯಕ್ತಿಯೊಬ್ಬರ ಮೂಲಭೂತ ಹಕ್ಕು ಎಂದು ಅವರು ಹೇಳಿದ್ದಾರೆ.

ವಾದಗಳನ್ನು ಆಲಿಸಿದ ನಂತರ, ಪ್ರಕರಣದ ಅಂತಿಮ ವಿಚಾರಣೆಗೆ ದಿನಾಂಕ ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...