Homeಮುಖಪುಟದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ದೆಹಲಿ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಆತ್ಮಹತ್ಯೆ ವದಂತಿ- ಮತ್ತೆ 3 FIR ದಾಖಲು

ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿದ್ದ ನೆರೆಹೊರೆಯವರು ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು.

- Advertisement -
- Advertisement -

ಕಳೆದ ವಾರ ದೆಹಲಿಯಲ್ಲಿ 20 ವರ್ಷದ ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ತನ್ನ ನೆರೆಹೊರೆಯವರೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಮತ್ತೆ ಮೂವರು ಎಫ್‌ಐಆರ್‌ ದಾಖಲಾಗಿವೆ. ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡಿದವರ ವಿರುದ್ಧ ದೆಹಲಿಯ ಶಹದಾರಾ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವದಂತಿಗಳನನ್ನು ಹಬ್ಬಿದ್ದ ಪೋಸ್ಟ್‌ಗಳು ಹಿಂಸಾಚಾರವನ್ನು ಪ್ರಚೋದಿಸುವ ಯತ್ನದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಪ್ರಯತ್ನಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಯೂಟ್ಯೂಬ್ ಚಾನೆಲ್ ಒಂದು  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿತ್ತು ಎಂದು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಶಹದಾರಾ) ಆರ್ ಸತ್ಯಸುಂದರಂ ನೀಡಿರುವ ವೀಡಿಯೊ ಹೇಳಿಕೆಯಲ್ಲಿ, “ಕೆಲವರು ಲೈಂಗಿಕ ದೌರ್ಜನ್ಯ ಘಟನೆಯ ಬಗ್ಗೆ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದರು. ಅವರು ಸಂತ್ರಸ್ತೆಯ ಗುರುತನ್ನು ಹಂಚಿಕೊಳ್ಳುತ್ತಿದ್ದರು. ಜೊತೆಗೆ ಘಟನೆಗೆ ಕೋಮುಬಣ್ಣ ನೀಡಲು ಪ್ರಯತ್ನಿಸುತ್ತಿದ್ದರು. ಇಂತಹ ವದಂತಿಗಳನ್ನು ಹರಡಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಗುರುತಿಸಿದ್ದೇವೆ. ಸುಳ್ಳು, ತಪ್ಪು ಮಾಹಿತಿ ಪ್ರಚಾರಕ್ಕಾಗಿ ಅವರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ಇನ್ನು ಅಪಹರಣ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 20 ವರ್ಷದ ಯುವತಿ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದು, ತನ್ನ ಕುಟುಂಬ ಮತ್ತು  ಮೂರು ವರ್ಷದ ಮಗನಿಂದ ದೂರವಾಗಿದ್ದಾರೆ. ಆಕೆ ತನ್ನ ಮಗುವನ್ನು ನೋಡಿಕೊಳ್ಳುವ ಮಾನಸಿಕ ಸ್ಥಿತಿಯಲ್ಲಿಲ್ಲ ಎಂದು ಆಕೆಯ ಕುಟುಂಬದವರು ಹೇಳುತ್ತಾರೆ.

ಕಳೆದ ಬುಧವಾರ (ಜ.26) ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಬಳಿಕ ಆಕೆಯ ನೆರೆಹೊರೆಯವರು ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಹರ್ಷೋದ್ಗಾರದ ನಡುವೆ ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದರು. ಈ ಬಗ್ಗೆ ದೆಹಲಿ ಮಹಿಳಾ ಆಯೋಗ ತಿಳಿಸಿತ್ತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ 14 ವರ್ಷದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಸಂತ್ರಸ್ತೆಯ ಸಹೋದರಿ ಹೇಳಿದ್ದಾರೆ.

ಬುಧವಾರ ಆಕೆಯ ಮೇಲೆ ನಡೆದ ದಾಳಿಯಲ್ಲಿ ಹೆಚ್ಚಾಗಿ ಮೃತ ಹುಡುಗನ ಕುಟುಂಬದ ಮಹಿಳೆಯರು ಮತ್ತು ಯುವಕರು ಸೇರಿದ್ದರು. ಇವರೆಲ್ಲಾ ಕಸ್ತೂರ್ಬಾ ನಗರದಲ್ಲಿ ಯುವತಿಯ ನೆರೆಹೊರೆಯವರು. ಸದ್ಯ ಪೊಲೀಸರು ನೆರೆಹೊರೆಯಿಂದ ಎಂಟು ಮಹಿಳೆಯರು ಮತ್ತು ನಾಲ್ವರು ಪುರುಷರನ್ನು (12 ಮಂದಿ) ಬಂಧಿಸಿದ್ದಾರೆ.

 

“ಯಾವುದೇ ಯುವತಿ, ಯಾವುದೇ ಮಗಳಿಗೂ ಇಂತಹ ಸ್ಥಿತಿ ಬರಬಾರದು. ಆಕೆಯ ಮೇಲೆ ಹಲ್ಲೆ ಮಾಡಿರುವ ರೀತಿ, ಆಕೆಯನ್ನು ತಪ್ಪಾಗಿ ತೋರಿಸಿದ್ದು, ಆಕೆಯನ್ನು ಆಘಾತಕ್ಕೆ ತಳ್ಳಿದ್ದು… ಓ ನನಗೆ ನ್ಯಾಯ ಸಿಗುವ ಬಗ್ಗೆ ನಂಬಿಕೆ ಇಲ್ಲ. ನನಗೆ ನನ್ನ ಮಗಳು ಮನೆಗೆ ಮರಳಬೇಕು ಅಷ್ಟೇ” ಎಂದು ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿರುವ ಸಂತ್ರಸ್ತ ಯುವತಿಯ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...