Homeಮುಖಪುಟಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಗೋಶಾಲೆಯ ಮುಖ್ಯಸ್ಥರ ಮೇಲೆ ಹಸುಗಳನ್ನು ಕೊಂದು, ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ಆರೋಪ ಕೇಳಿಬಂದಿದೆ.

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಬಳಿಯ ಬೆರಾಸಿಯಾ ಪಟ್ಟಣದಲ್ಲಿ ಬಿಜೆಪಿ ನಾಯಕಿ ನಡೆಸುತ್ತಿರುವ ಗೋಶಾಲೆಯಲ್ಲಿ ಸಾವಿಗೀಡಾದ 100 ಕ್ಕೂ ಹೆಚ್ಚು ಹಸುಗಳ ಸಾವಿನ ಸಂಖ್ಯೆ ಜನರಲ್ಲಿ ಆತಂಕ ಮೂಡಿಸಿದೆ. ಆದರೂ, ಗೋವುಗಳ ವಿಷಯವಿಟ್ಟುಕೊಂಡು ರಾಜಕೀಯ ಮಾಡುವ ಬಿಜೆಪಿಯವರು ಮತ್ತು ಇಲ್ಲಿನ ಸರ್ಕಾರ ಈ ಬಗ್ಗೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೋಪಾಲ್ ಬಳಿಯ ಬೆರಾಸಿಯಾದಲ್ಲಿ ಬಿಜೆಪಿ ನಾಯಕಿ ನಿರ್ಮಲಾ ದೇವಿ ಶಾಂಡಿಲ್ಯ ಅವರ ಗೋಶಾಲೆಯಲ್ಲಿ ಈ ಸಾವುಗಳು ಸಂಭವಿಸಿವೆ. ಭಾನುವಾರ (ಜ.30) ಗೋಶಾಲೆಯ ಬಾವಿಯಲ್ಲಿ 20 ಹಸುಗಳ ಶವ ಪತ್ತೆಯಾಗಿದ್ದವು. ಬಳಿಕ ಗೋಶಾಲೆಯ ಪಕ್ಕದ ಖಾಲಿ ಜಾಗದಲ್ಲಿ  80ಕ್ಕೂ ಹೆಚ್ಚು ಹಸುಗಳ ಶವ ಹಾಗೂ ಅಸ್ಥಿಪಂಜರಗಳು ಪತ್ತೆಯಾಗಿವೆ.

ಇಚ್ಟೊಂದು ಹಸುಗಳು ಸಾವನ್ನಪ್ಪಿರುವ ಕುರಿತು ಗೋಶಾಲೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ಗೋರಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಗೋಶಾಲೆಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಶಾಲೆಯ ಬಾವಿಯಲ್ಲಿನ ಹಸುಗಳ ಮೃತದೇಹಗಳು ಮತ್ತು ಗೋಶಾಲೆ ಪಕ್ಕದ ಖಾಲಿ ಸ್ಥಳದಲ್ಲಿ ಬಿದ್ದಿರುವ ಮೃತದೇಹಗಳು, ಅಸ್ಥಿಪಂಜರಗಳ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಹಸುಗಳ ಈ ದಾರುಣ ಸ್ಥಿತಿಯನ್ನು ಕಂಡು ಜನ ಆಕ್ರೋಶಗೊಂಡು, ಗೋಶಾಲೆ ಮುಖ್ಯಸ್ಥೆ ನಿರ್ಮಲಾದೇವಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಿಜೆಪಿ ನಾಯಕಿ ನಿರ್ಮಲಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭೋಪಾಲ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆರಸಿಯಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 269 (ನಿರ್ಲಕ್ಷ್ಯದ ಕ್ರಿಯೆಯಿಂದ ಜೀವಕ್ಕೆ ಅಪಾಯಕಾರಿ ರೋಗವನ್ನು ಹರಡುವ ಸಾಧ್ಯತೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕಿ ನಿರ್ಮಲಾ ದೇವಿ ಕಳೆದ 18 ವರ್ಷಗಳಿಂದಲೂ ಗೋಶಾಲೆ ನಡೆಸುತ್ತಿದ್ದಾರೆ.

ಹಸುಗಳ ಸಾವು ಪ್ರಕರಣದಲ್ಲಿ  ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತು ಜಿಲ್ಲಾಧಿಕಾರಿ ಅವಿನಾಶ್ ಲಾವಾನಿಯಾ ಮತ್ತು ಹಲವಾರು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಜನರ ಪ್ರತಿಭಟನೆ, ಆಕ್ರೋಶದಿಂದಾಗಿ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಹಸುಗಳ ಸಾವಿನ ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಹಸುಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಸಂಬಂಧಪಟ್ಟ ಗೋಶಾಲೆಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಬೆರಸಿಯಾ ಅಭಿವೃದ್ಧಿ ಬ್ಲಾಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಥಳೀಯ ನಿವಾಸಿ ಘನಶ್ಯಾಮ್ ಗುಪ್ತಾ ಅವರು ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಕೊಂದು ನಂತರ ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಸ್ಥಳೀಯ ವಿಎಚ್‌ಪಿ ನಾಯಕ ಜನಕ್ ಸಿಂಗ್ ರಜಪೂತ್, “ಗೋಶಾಲಾ ಮತ್ತು ಅದರ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋಶಾಲೆಯಲ್ಲಿ ಹಸುವಿನ ಚರ್ಮ ಮತ್ತು ಮೂಳೆಗಳ ವ್ಯಾಪಾರ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತನಿಖೆ ನಡೆಸುವಂತೆ  ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಆದರೆ, ಗೋಶಾಲೆ ಮುಖ್ಯಸ್ಥೆ ನಿರ್ಮಲಾ ದೇವಿ ಶಾಂಡಿಲ್ಯ, ಸ್ಥಳೀಯ ನಿವಾಸಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. “ಜನರು ತಮ್ಮ ಅನಾರೋಗ್ಯದ ಹಸುಗಳನ್ನು ಇಲ್ಲಿ ಬಿಡುತ್ತಾರ. ನೀವು ನೋಡುತ್ತಿರುವ ಶವಗಳು ಅನಾರೋಗ್ಯದಿಂದ ಸತ್ತ ಹಸುಗಳವು. ಈ ಹಸುಗಳು ನಮ್ಮ ಗೋಶಾಲೆಗೆ ಸೇರಿದವುಗಳಲ್ಲ. ನಾನು ಇಲ್ಲಿ ಜೂಜು ಮತ್ತು ಕಳ್ಳತನವನ್ನಿ ನಿಲ್ಲಿಸಿರುವ ಕಾರಣ ಗ್ರಾಮಸ್ಥರು ನನ್ನ ಗೋಶಾಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಯಾವುದೇ ತನಿಖೆ, ಪ್ರಕರಣವನ್ನು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...