Homeಮುಖಪುಟಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

- Advertisement -
- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಸೋಮವಾರ ವರದಿಯಾಗಿದೆ.

ಮಧುಗಿರಿ ಮೋದಿ ಮತ್ತು ಪುನೀತ್ ಕೆರೆಹಳ್ಳಿ ಎಂಬ ಹಿಂದುತ್ವ ಕಾರ್ಯಕರ್ತರು ರೈಲ್ವೆ ಕೂಲಿಗಳ ಕೋಣೆಗೆ ನುಗ್ಗಿ ಗಲಾಟೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ರೀತಿಯಾಗಿ ಅನಧಿಕೃತವಾಗಿ ಕೋಣೆಗೆ ನುಗ್ಗಿ ಗದ್ದಲವೆಬ್ಬಿಸಿ ಸೌಹಾರ್ಧತೆ ಕೆಡಿಸುತ್ತಿರುವ ಈ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಲವಾರು ಹಿಂದೂ ದೇವಾಲಯಗಳು ಮತ್ತು ಚರ್ಚ್ ಸಹ ನಿಲ್ದಾಣದಲ್ಲಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಹಿಂದುತ್ವವಾದಿ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವ ನಿಟ್ಟಿನಲ್ಲಿ ನಮಾಝ್ ಗೆ ಮೀಸಲಿರಿಸಿದ್ದ ಕೋಣೆಗೆ ದಾಳಿ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದು-ಮುಸ್ಲಿಮರ ನಡುವೆ ಒಡಕುಂಟು ಮಾಡಲು ಸಂಘಪರಿವಾರದ ಮತಾಂಧ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿವೆ. ಇದೀಗ ರೈಲ್ವೇ ನಿಲ್ದಾಣದಲ್ಲಿ ನಡೆದಿರುವ ಘಟನೆಯೂ ಸಂಘಪರಿವಾರದ ಹೀನ ಮನೋಸ್ಥಿತಿಯ ಭಾಗವಾಗಿದೆ. ಸಂಘಪರಿವಾರದ ದುಷ್ಕೃತ್ಯಗಳ ವಿರುದ್ಧ ಆಡಳಿತ ವ್ಯವಸ್ಥೆಯ ಮೃದು ಧೋರಣೆಯೂ ಇಂತಹ ಘಟನೆಗಳಿಗೆ ನೇರ ಕಾರಣವಾಗಿದೆ. ನಮಾಝ್ ಕೊಠಡಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಗೂಂಡಾಗಳ ವಿರುದ್ಧ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ, ಅದು ಸಂಪೂರ್ಣ ಸುಳ್ಳು. ಇಲ್ಲಿ ಎಲ್ಲಾ ಧರ್ಮದ ಹಮಾಲಿ ಕೂಲಿಗಳು ಇದ್ದು ಅವರಿಗೆ ಕೆಲವು ಕೊಠಡಿಗಳನ್ನು ನೀಡಿದ್ದೇವೆ. ಅಲ್ಲಿ ಎಲ್ಲಾ ಧರ್ಮದ ಪೂಜೆಗೆ, ಪ್ರಾರ್ಥನೆಗೆ ಅವಕಾಶ ನೀಡಿದ್ದೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಫ್ಲಾಟ್‌ಫಾರಂ ನಂಬರ್ 07 ರಲ್ಲಿ ಹಿಂದೂ ದೇವಾಲಯವಿದ್ದು ಅಲ್ಲಿ ಪೂಜೆಗಳು ನಡೆಯುತ್ತಿವೆ. ಹಾಗಾಗಿ ಇಲ್ಲಿ ಒಂದು ಧರ್ಮದ ಆಚರಣೆ ಮಾತ್ರ ನಡೆಯುತ್ತಿದೆ ಎಂಬುದು ಸುಳ್ಳು ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹಿಂದೂಜನಜಾಗೃತಿ ಸಮಿತಿಯ ಗೂಂಡಾಗಳು ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿರುವುದು ಸರ್ಕಾರ ಸತ್ತು ಹೋಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಬೆಂಗಳೂರು ಪೊಲೀಸರು
ಕೂಡಲೇ ಗೂಂಡಾಗಳನ್ನು ಬಂಧಿಸಿ.‌ ಮುಖ್ಯಮಂತ್ರಿಗಳೆ, ಪದೇ ಪದೇ ನಡೆಯುತ್ತಿರುವ ಇಂತಹ ಗೂಂಡಾಗಿರಿಯನ್ನು ತಡೆಯಲಾಗದ ನಿಮ್ಮ ಆಡಳಿತಕ್ಕೆ ಧಿಕ್ಕಾರ ಎಂದು ದಲಿತ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮೂರು ಹಿಂದೂ ದೇವಾಲಯಗಳಿವೆ. ಅಲ್ಲಿ ಹಿಂದಿನಿಂದಲೂ ಪೂಜೆ ನಡೆದುಕೊಂಡು ಬಂದಿದೆ. ಚರ್ಚ್ ಇದ್ದು ಅಲ್ಲಿಯೂ ಪ್ರಾರ್ಥನೆ ನಡೆಯುತ್ತಿದೆ. ಅದೇ ರೀತಿ ಕೂಲಿಗಳು ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಿದರೆ ತಪ್ಪೇನು? ಇದರಲ್ಲಿ ತಪ್ಪು ಹುಡುಕುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗಿದೆ.


ಇದನ್ನೂ ಓದಿ: ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. These beggars dosent have any better job to do. Spoiling and destroying people peace and creating voilence in the name of religion.police and the government should book and punish them severely.

  2. ರೈಲ್ ನಿಲ್ದಾಣದಲ್ಲಿ ಮಸೀದಿ ಹೇಗೆ ಸಾಧ್ಯ? ಮುಂದೆ ಪೂರ್ತಿ ನಿಲ್ದಾಣ ಮಸೀದಿ ವ್ಯಾಪ್ತಿಗೆ ಬರುತ್ತೆ ಅಂತ ಪಿಸ್ ಫುಲ್ ಗಳು ಕೋರ್ಟಿಗೆ ಹೋದರು ಹೋಗಬಹುದು.ಸರ್ಕಾರ ಎಚ್ಚೆತ್ತು ಮಂದಿರ ಮಸೀದಿ ಚರ್ಚ್ ಎಲ್ಲ ಕಿತ್ತು ಹಾಕಿ ಭಾರತದ ಸಂವಿಧಾನ ಕಾಪಾಡಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...