Homeಮುಖಪುಟಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿಗೆ ಸೇರ್ಪಡೆಗೊಂಡಿರುವ 10 ಮಂದಿ ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ

- Advertisement -
- Advertisement -

ಈ ತಿಂಗಳು ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಟಿಕೆಟ್ ಆಕಾಂಕ್ಷಿಗಳಿಗೆ ಭಾರಿ ನಿರಾಸೆ ಉಂಟು ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ನಡೆದಿವೆ. ಜೊತೆಗೆ ಹಲವು ಬಿಜೆಪಿ ಮುಖಂಡರ ರಾಜೀನಾಮೆಗೆ ಕಾರಣವಾಗಿದೆ.

ಬಿಜೆಪಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ, ರಸ್ತೆಗಿಳಿದು ಕಲ್ಲುತೂರಾಟ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ವಿವಿಧೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆಯಾಗಿ ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಬಿಗಿ ಭದ್ರತೆ  ಮಾಡಲಾಗಿದೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

bgg96808

ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಬಿಜೆಪಿಗೆ ಸೇರ್ಪಡೆಗೊಂಡ ಕನಿಷ್ಠ 10 ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಮಣಿಪುರ ಬಿಜೆಪಿ ಮೂರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯವರ ಬಹುತೇಕ ನಿಷ್ಠಾವಂತರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಭಟನೆ ನಂತರ ಟಿಕೆಟ್ ಸಿಗದೆ ನಿರಾಶೆಗೊಂಡವರು ಬಿಜೆಪಿಗೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಿರುವ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಆಸಕ್ತಿ ತೋರಿದ್ದಾರೆ. ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ.

ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಪಿ.ಶರತ್ ಚಂದ್ರ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ. ಸೆಕ್ಮೈ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ನಿಂಗ್‌ತೋಜಮ್ ಬಿರೆನ್ ಮತ್ತು ನಿಂಗ್‌ತೋಜಮ್ ಜೋಯ್‌ಕುಮಾರ್ ಸಿಂಗ್ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಬಿಜೆಪಿ ವಿರುದ್ಧ ಅಸಮಾಧಾನವಿರುವ ಇನ್ನೂ 12 ಬಿಜೆಪಿ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಬಿಜೆಪಿಯಿಂದ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಮಣಿಪುರ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ವಕ್ತಾರ ಕೆ.ಎಚ್.ದೇವಭ್ರತ ತಿಳಿಸಿದ್ದಾರೆ.

2017ರ ನಂತರ ಪಕ್ಷಕ್ಕೆ ಸೇರ್ಪಡೆಯಾದ ನಾಯಕರಿಗೆ ಬಿಜೆಪಿ ಮನ್ನಣೆ ನೀಡಿ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ 16 ಮಂದಿ ಕಾಂಗ್ರೆಸ್‌ ನಾಯಕರಲ್ಲಿ ಹತ್ತು ಮಂದಿ ಕಾಂಗ್ರೆಸ್‌ನವರಿಗೆ ಟಿಕೆಟ್ ನೀಡಲಾಗಿದೆ. 4 ಮಂದಿ ಇತರ ಪಕ್ಷಗಳಿಂದ ಬಂದವರಿಗೂ ಟಿಕೆಟ್ ನೀಡಲಾಗಿದೆ.

2017 ರ ಚುನಾವಣೆಯಲ್ಲಿ, ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ಸರ್ಕಾರ ರಚಿಸಿತು. ಈ ಪೈಕಿ 19 ಶಾಸಕರಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು, ಮೂವರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...