Homeಮುಖಪುಟಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿಗೆ ಸೇರ್ಪಡೆಗೊಂಡಿರುವ 10 ಮಂದಿ ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ

- Advertisement -
- Advertisement -

ಈ ತಿಂಗಳು ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಟಿಕೆಟ್ ಆಕಾಂಕ್ಷಿಗಳಿಗೆ ಭಾರಿ ನಿರಾಸೆ ಉಂಟು ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ನಡೆದಿವೆ. ಜೊತೆಗೆ ಹಲವು ಬಿಜೆಪಿ ಮುಖಂಡರ ರಾಜೀನಾಮೆಗೆ ಕಾರಣವಾಗಿದೆ.

ಬಿಜೆಪಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ, ರಸ್ತೆಗಿಳಿದು ಕಲ್ಲುತೂರಾಟ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ವಿವಿಧೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆಯಾಗಿ ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಬಿಗಿ ಭದ್ರತೆ  ಮಾಡಲಾಗಿದೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

bgg96808

ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಬಿಜೆಪಿಗೆ ಸೇರ್ಪಡೆಗೊಂಡ ಕನಿಷ್ಠ 10 ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಮಣಿಪುರ ಬಿಜೆಪಿ ಮೂರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯವರ ಬಹುತೇಕ ನಿಷ್ಠಾವಂತರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಭಟನೆ ನಂತರ ಟಿಕೆಟ್ ಸಿಗದೆ ನಿರಾಶೆಗೊಂಡವರು ಬಿಜೆಪಿಗೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಿರುವ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಆಸಕ್ತಿ ತೋರಿದ್ದಾರೆ. ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ.

ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಪಿ.ಶರತ್ ಚಂದ್ರ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ. ಸೆಕ್ಮೈ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ನಿಂಗ್‌ತೋಜಮ್ ಬಿರೆನ್ ಮತ್ತು ನಿಂಗ್‌ತೋಜಮ್ ಜೋಯ್‌ಕುಮಾರ್ ಸಿಂಗ್ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಬಿಜೆಪಿ ವಿರುದ್ಧ ಅಸಮಾಧಾನವಿರುವ ಇನ್ನೂ 12 ಬಿಜೆಪಿ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಬಿಜೆಪಿಯಿಂದ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಮಣಿಪುರ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ವಕ್ತಾರ ಕೆ.ಎಚ್.ದೇವಭ್ರತ ತಿಳಿಸಿದ್ದಾರೆ.

2017ರ ನಂತರ ಪಕ್ಷಕ್ಕೆ ಸೇರ್ಪಡೆಯಾದ ನಾಯಕರಿಗೆ ಬಿಜೆಪಿ ಮನ್ನಣೆ ನೀಡಿ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ 16 ಮಂದಿ ಕಾಂಗ್ರೆಸ್‌ ನಾಯಕರಲ್ಲಿ ಹತ್ತು ಮಂದಿ ಕಾಂಗ್ರೆಸ್‌ನವರಿಗೆ ಟಿಕೆಟ್ ನೀಡಲಾಗಿದೆ. 4 ಮಂದಿ ಇತರ ಪಕ್ಷಗಳಿಂದ ಬಂದವರಿಗೂ ಟಿಕೆಟ್ ನೀಡಲಾಗಿದೆ.

2017 ರ ಚುನಾವಣೆಯಲ್ಲಿ, ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ಸರ್ಕಾರ ರಚಿಸಿತು. ಈ ಪೈಕಿ 19 ಶಾಸಕರಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು, ಮೂವರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...