Homeಮುಖಪುಟಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

ಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

- Advertisement -
- Advertisement -

ವಯಸ್ಕ ಅಂತರ್‌ಧರ್ಮೀಯ ಜೋಡಿ ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಒಟ್ಟಿಗೆ ಇರುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್‌ಪುರ ಪೀಠವು ಎತ್ತಿಹಿಡಿದಿದೆ. ಇಬ್ಬರು ವ್ಯಕ್ತಿಗಳು ಇಚ್ಛೆಯಿಂದ ಜೊತೆಗಿದ್ದರೆ ಈ ವಿಚಾರದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಜಬಲ್‌ಪುರದ ಗೋರಖ್‌ಪುರದ ನಿವಾಸಿ 27 ವರ್ಷದ ಗುಲ್ಜಾರ್ ಖಾನ್ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಂದಿತಾ ದುಬೆ ಈ ಅಭೀಪ್ರಾಯ ವ್ಯಕ್ತಪಡಿಸಿದ್ದಾರೆ.

ಜಬಲ್ಪುರ್ ನಿವಾಸಿ ಗುಲ್ಜಾರ್ ಖಾನ್ ಅವರು ಮಹಾರಾಷ್ಟ್ರದಲ್ಲಿ 19 ವರ್ಷದ ಆರತಿ ಸಾಹು ಎಂಬುವವರನ್ನು ಡಿಸೆಂಬರ್ 28 ರಂದು ಬಾಂದ್ರಾ ನ್ಯಾಯಾಲಯದಲ್ಲಿ ವಿವಾಹವಾಗಿದ್ದರು. ಬಳಿಕ ಆಕೆಯು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಈಗ ಆರತಿ ಸಾಹು ಅವರನ್ನು ಆಕೆಯ ಪೋಷಕರು ಬಲವಂತವಾಗಿ ವಾರಣಾಸಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಗುಲ್ಜಾರ್ ಖಾನ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಜನವರಿ 28 ರಂದು ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆರತಿ ಸಾಹು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಯುವತಿಯು ತಾನು ಅರ್ಜಿದಾರನನ್ನು ಮದುವೆಯಾಗಿದ್ದು, ಆತನೊಂದಿಗೆ ಇರಲು ಬಯಸುತ್ತೇನೆ . ನಾನು ಇಷ್ಟಪಟ್ಟು ಮತಾಂತರವಾಗಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ರ ನಿಬಂಧನೆಗಳ ದೃಷ್ಟಿಯಿಂದ ರಾಜ್ಯವು ಆಕ್ಷೇಪಣೆಯನ್ನು ಎತ್ತಿತ್ತು. ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯ ಸೆಕ್ಷನ್ 3 ರನ್ನು ಈ ವಿವಾಹ ಉಲ್ಲಂಘಿಸಿದೆ. ಹೀಗಾಗಿ ಈ ವಿವಾಹವನ್ನು ಅನೂರ್ಜಿತವೆಂದು ಪರಿಗಣಿಸಬೇಕು ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಆದರೆ, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಮದುವೆಯ ಉದ್ದೇಶಕ್ಕಾಗಿ ಮತಾಂತರಗೊಂಡಿಲ್ಲ ಎಂದಿರುವ ನ್ಯಾಯಾಲಯ, ’ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಇಬ್ಬರು ವ್ಯಕ್ತಿಗಳು ಸ್ವಇಚ್ಛೆಯಿಂದ ಒಟ್ಟಿಗೆ ಇರಲು ಸಿದ್ಧರಿದ್ದರೆ, ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

“ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ್ನ ಜೀವನವನ್ನು ಅವರ ಸ್ವಂತ ಇಚ್ಛೆಯಂತೆ ಬದುಕಲು ಸಂವಿಧಾನವು ಹಕ್ಕನ್ನು ನೀಡಿದೆ” ಎಂದು ಹೈಕೋರ್ಟ್ ತಿಳಿಸಿದೆ.

ಯುವತಿಯನ್ನು ಆಕೆಯ ಪತಿಗೆ ಹಸ್ತಾಂತರಿಸುವಂತೆ ಮತ್ತು ಇಬ್ಬರೂ ಸುರಕ್ಷಿತವಾಗಿ ತಮ್ಮ ಮನೆಗೆ ತಲುಪುವಂತೆ ನೋಡಿಕೊಳ್ಳುವಂತೆ ರಾಜ್ಯ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಭವಿಷ್ಯದಲ್ಲಿ ಇಬ್ಬರಿಗೂ ಯುವತಿಯ ಪೋಷಕರಿಂದ ಬೆದರಿಕೆ ಬರದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ‘ಖಾಸಗೀಕರಣ’: ಒಕ್ಕೂಟ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಿರುವ ವಿದ್ಯುತ್ ವಲಯದ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...