Homeಮುಖಪುಟಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

ಇಬ್ಬರು ವಯಸ್ಕರು ಸ್ವಇಚ್ಛೆಯಿಂದ ಒಟ್ಟಿಗಿದ್ದರೆ ನೈತಿಕ ಪೊಲೀಸ್‌ಗಿರಿ ಸಲ್ಲದು: ಮಧ್ಯಪ್ರದೇಶ ಹೈಕೋರ್ಟ್

- Advertisement -
- Advertisement -

ವಯಸ್ಕ ಅಂತರ್‌ಧರ್ಮೀಯ ಜೋಡಿ ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಒಟ್ಟಿಗೆ ಇರುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್‌ಪುರ ಪೀಠವು ಎತ್ತಿಹಿಡಿದಿದೆ. ಇಬ್ಬರು ವ್ಯಕ್ತಿಗಳು ಇಚ್ಛೆಯಿಂದ ಜೊತೆಗಿದ್ದರೆ ಈ ವಿಚಾರದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಜಬಲ್‌ಪುರದ ಗೋರಖ್‌ಪುರದ ನಿವಾಸಿ 27 ವರ್ಷದ ಗುಲ್ಜಾರ್ ಖಾನ್ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಂದಿತಾ ದುಬೆ ಈ ಅಭೀಪ್ರಾಯ ವ್ಯಕ್ತಪಡಿಸಿದ್ದಾರೆ.

ಜಬಲ್ಪುರ್ ನಿವಾಸಿ ಗುಲ್ಜಾರ್ ಖಾನ್ ಅವರು ಮಹಾರಾಷ್ಟ್ರದಲ್ಲಿ 19 ವರ್ಷದ ಆರತಿ ಸಾಹು ಎಂಬುವವರನ್ನು ಡಿಸೆಂಬರ್ 28 ರಂದು ಬಾಂದ್ರಾ ನ್ಯಾಯಾಲಯದಲ್ಲಿ ವಿವಾಹವಾಗಿದ್ದರು. ಬಳಿಕ ಆಕೆಯು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಈಗ ಆರತಿ ಸಾಹು ಅವರನ್ನು ಆಕೆಯ ಪೋಷಕರು ಬಲವಂತವಾಗಿ ವಾರಣಾಸಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಗುಲ್ಜಾರ್ ಖಾನ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಜನವರಿ 28 ರಂದು ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆರತಿ ಸಾಹು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಯುವತಿಯು ತಾನು ಅರ್ಜಿದಾರನನ್ನು ಮದುವೆಯಾಗಿದ್ದು, ಆತನೊಂದಿಗೆ ಇರಲು ಬಯಸುತ್ತೇನೆ . ನಾನು ಇಷ್ಟಪಟ್ಟು ಮತಾಂತರವಾಗಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ರ ನಿಬಂಧನೆಗಳ ದೃಷ್ಟಿಯಿಂದ ರಾಜ್ಯವು ಆಕ್ಷೇಪಣೆಯನ್ನು ಎತ್ತಿತ್ತು. ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯ ಸೆಕ್ಷನ್ 3 ರನ್ನು ಈ ವಿವಾಹ ಉಲ್ಲಂಘಿಸಿದೆ. ಹೀಗಾಗಿ ಈ ವಿವಾಹವನ್ನು ಅನೂರ್ಜಿತವೆಂದು ಪರಿಗಣಿಸಬೇಕು ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಆದರೆ, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಮದುವೆಯ ಉದ್ದೇಶಕ್ಕಾಗಿ ಮತಾಂತರಗೊಂಡಿಲ್ಲ ಎಂದಿರುವ ನ್ಯಾಯಾಲಯ, ’ವಿವಾಹದ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಇಬ್ಬರು ವ್ಯಕ್ತಿಗಳು ಸ್ವಇಚ್ಛೆಯಿಂದ ಒಟ್ಟಿಗೆ ಇರಲು ಸಿದ್ಧರಿದ್ದರೆ, ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

“ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ್ನ ಜೀವನವನ್ನು ಅವರ ಸ್ವಂತ ಇಚ್ಛೆಯಂತೆ ಬದುಕಲು ಸಂವಿಧಾನವು ಹಕ್ಕನ್ನು ನೀಡಿದೆ” ಎಂದು ಹೈಕೋರ್ಟ್ ತಿಳಿಸಿದೆ.

ಯುವತಿಯನ್ನು ಆಕೆಯ ಪತಿಗೆ ಹಸ್ತಾಂತರಿಸುವಂತೆ ಮತ್ತು ಇಬ್ಬರೂ ಸುರಕ್ಷಿತವಾಗಿ ತಮ್ಮ ಮನೆಗೆ ತಲುಪುವಂತೆ ನೋಡಿಕೊಳ್ಳುವಂತೆ ರಾಜ್ಯ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಭವಿಷ್ಯದಲ್ಲಿ ಇಬ್ಬರಿಗೂ ಯುವತಿಯ ಪೋಷಕರಿಂದ ಬೆದರಿಕೆ ಬರದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ‘ಖಾಸಗೀಕರಣ’: ಒಕ್ಕೂಟ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಿರುವ ವಿದ್ಯುತ್ ವಲಯದ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...