Homeಮುಖಪುಟಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

- Advertisement -
- Advertisement -

ಮಂಗಳವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ಜನಸಾಮಾನ್ಯರು, ಮಧ್ಯಮ ವರ್ಗದವರಿಗೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಯೋಚಿಸದೆ, ಪೆಗಾಸಸ್ ವಿವಾದ ಮರೆಮಾಚುತ್ತಿರುವ ಬಜೆಟ್” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

“ನಿರುದ್ಯೋಗ ಮತ್ತು ಹಣದುಬ್ಬರದಿಂದ ನಲುಗಿ ಹೋಗುತ್ತಿರುವ ಜನಸಾಮಾನ್ಯರಿಗೆ ಬಜೆಟ್ ಒದಗಿಸಿರುವುದು ಶೂನ್ಯ. ಸರ್ಕಾರವು ದೊಡ್ಡ-ದೊಡ್ಡ ಮಾತುಗಳ ಮೂಲಕ ಬೊಗಳೆ ಬಿಡುತ್ತಿದೆ. ಇದು ಪೆಗಾಸೆಸ್ ಮರೆಮಾಚುತ್ತಿರುವ ಬಜೆಟ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಮೋದಿ ಸರ್ಕಾರದ ಶೂನ್ಯ ಮೊತ್ತದ ಬಜೆಟ್ ಇದಾಗಿದೆ ಎಂದಿದ್ದಾರೆ. “ಮೋದಿ ಸರ್ಕಾರದ ಶೂನ್ಯ ಮೊತ್ತದ ಬಜೆಟ್! ಸಂಬಳ ಪಡೆಯುವ ವರ್ಗ, ಮಧ್ಯಮ ವರ್ಗ, ಬಡವರು ಮತ್ತು ವಂಚಿತರು, ಯುವಕರು, ರೈತರು ಹಾಗೂ ಎಂಎಸ್ಎಂಇಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ” ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಸಿಪಿಎಂ ಪಕ್ಷದ ಸೀತಾರಾಮ್ ಯೆಚೂರಿ ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ಬಜೆಟ್ ಮಂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಜನವಿರೋಧಿ ಬಜೆಟ್. ಕಳೆದ ಎರಡು ವರ್ಷಗಳಲ್ಲಿ ಜನರು ಸಂಕಷ್ಟಲ್ಲಿರುವಾಗ ಆಹಾರ, ರಸಗೊಬ್ಬರ ಮತ್ತು ಪೆಟ್ರೋಲಿಯಂ ಮೇಲಿನ ಸಬ್ಸಿಡಿಗಳನ್ನು ಕಡಿತಗೊಳಿಸಲಾಯಿತು. ಇದು ಜನರ ಜೀವನೋಪಾಯದ ಮೇಲೆ ಸರ್ಕಾರ ಮಾಡಿದ ಕ್ರೂರ ದಾಳಿ” ಎಂದು ತಿಳಿಸಿದ್ದಾರೆ.

ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್‌ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. “ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆಯವರು ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ರಾಜ್ಯಕ್ಕೆ ಯಾವುದೇ ನೆರವು ದೊರೆತಿಲ್ಲ ಎಂಬುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಿಂದ ಆಯ್ಕೆಯಾಗಿ, ರಾಜ್ಯಕ್ಕೆ 2022-23ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆ/ವಿಶೇಷ ನೆರವು ಒದಗಿಸದೇ ನಿರ್ಮಲಾ ಸೀತಾರಾಮನ್ ವಂಚಿಸಿದ್ದಾರೆ. ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಗಳ ತಲೆ ಮೇಲೆ 1 ಲಕ್ಷ ಕೋಟಿ ಸಾಲ ಕಟ್ಟಿರುವುದೇ ಈ ಬಜೆಟ್ ನ ಸಾಧನೆಯಾಗಿದೆ. ಸ್ಟಾರ್ಟ್ ಅಪ್ ಉತ್ತೇಜಿಸಲು ಯಾವುದೇ ಕ್ರಮವಿಲ್ಲ. ಆದಾಯ ತೆರಿಗೆ ಕಡಿಮೆ ಆಗಿಲ್ಲ. ಫಸಲ್ ಭೀಮಾ ಯೋಜನೆ ನಿಯಮಗಳಲ್ಲಿ ಬದಲಾವಣೆ ಇಲ್ಲ. ಕೃಷಿ ಕನಿಷ್ಠ ಬೆಂಬಲ ಬೆಲೆ ಕೂಡಾ ಇಳಿಸಲಾಗಿದೆ. ಮೂಲಸೌಕರ್ಯಕ್ಕೆ ಇತಿಹಾಸದಲ್ಲೇ ಅತ್ಯಂತ ಕಡಿಮೆ ಹಣ. ಹೀಗಿರುವಾಗ ಇದನ್ನು ಜನಪರ ಎನ್ನುವುದಾದರೂ ಹೇಗೆ?” ಎಂದು ಪ್ರಿಯಾಂಕ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಬಜೆಟ್‌‌ 2022: ಒಕ್ಕೂಟ ಸರ್ಕಾರದ ಮೇಲೆ ಜನರ ನಿರೀಕ್ಷೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...