Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...