Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...