Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...