Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...