Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...