Homeಮುಖಪುಟ‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು ನ್ಯಾ.ಇಂದಿರಾ ಬ್ಯಾನರ್ಜಿ ನೇತೃತ್ವದ ಪೀಠವು ಹೇಳಿದ್ದು, ಇತರ ದೂರುಗಳಿದ್ದಲ್ಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ಕಲ್ಪಿಸಿದೆ.

ಮೂಲಭೂತ ಹಕ್ಕುಗಳ ಉಲ್ಲಂಘನೆಯ ಪ್ರಶ್ನೆಯಿದ್ದಾಗ ಮಾತ್ರ ಕಲಂ 32ರಡಿ ರಿಟ್‌ ಅರ್ಜಿ ಸಲ್ಲಿಸಬಹುದು. ಇಲ್ಲಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ತೋರುತ್ತಿಲ್ಲ. ಹೀಗಾಗಿ ಮನವಿ ಪರಿಗಣಿಸಲಾಗುವುದಿಲ್ಲ. ಆದರೆ ಅರ್ಜಿದಾರರಿಗೆ ಗಂಭೀರ ಕಳವಳ ಇದ್ದಲ್ಲಿ 226ರ ಅಡಿ ಹೈಕೋರ್ಟ್ ಮೊರೆ ಹೋಗಬಹುದು ಎಂದು ನ್ಯಾಯಾಲಯ ಹೇಳಿದೆ.

“ಈ ಚಲನಚಿತ್ರವು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವರ್ಚಸ್ಸಿಗೆ ಕಳಂಕ ತರಲು, ಹಂತಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಲು ಮತ್ತು ಮಹಾತ್ಮಾ ಗಾಂಧಿ ಹತ್ಯೆಯ ಸಂಭ್ರಮಾಚಣೆ ಮಾಡಲು ಉದ್ದೇಶಿಸಿದೆ” ಎಂದು ಅರ್ಜಿ ಸಲ್ಲಿಕೆಯಾಗಿತ್ತು.

ಕೋಮು ಸಾಮರಸ್ಯ ಕದಡುವುದು, ದ್ವೇಷ ಹರಡುವುದು, ಅಶಾಂತಿ ನಿರ್ಮಿಸುವ ಗುರಿಯನ್ನು ಈ ಚಲನಚಿತ್ರ ಹೊಂದಿದೆ. ಸೆನ್ಸಾರ್ ಮಂಡಳಿ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡದೆ ಇರುವುದರಿಂದ ಜನವರಿ 30 ರಂದು ಒಟಿಟಿ ಪ್ಲಾಟ್ ಫಾರ್ಮ್ ‘ಲೈಮ್ ಲೈಟ್’ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಸ್ತುತ ಸೆನ್ಸಾರ್ ಮಂಡಳಿಯ ವ್ಯಾಪ್ತಿಯಿಂದ ಹೊರಗುಳಿದ ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವುದು, ಮತ್ತು ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿಅನಿಯಂತ್ರಿತ, ಸೆನ್ಸಾರ್ ಮಾಡದ ವಿಷಯವನ್ನು ಪ್ರಕಟಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದರು.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದರು.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧಿ ಹಂತಕ ಗೋಡ್ಸೆ

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ. ಈ ಕುರಿತ ಲೇಖನವನ್ನು ಇಲ್ಲಿ ಓದಬಹುದು.


ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....