Homeಮುಖಪುಟ‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು ನ್ಯಾ.ಇಂದಿರಾ ಬ್ಯಾನರ್ಜಿ ನೇತೃತ್ವದ ಪೀಠವು ಹೇಳಿದ್ದು, ಇತರ ದೂರುಗಳಿದ್ದಲ್ಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ಕಲ್ಪಿಸಿದೆ.

ಮೂಲಭೂತ ಹಕ್ಕುಗಳ ಉಲ್ಲಂಘನೆಯ ಪ್ರಶ್ನೆಯಿದ್ದಾಗ ಮಾತ್ರ ಕಲಂ 32ರಡಿ ರಿಟ್‌ ಅರ್ಜಿ ಸಲ್ಲಿಸಬಹುದು. ಇಲ್ಲಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ತೋರುತ್ತಿಲ್ಲ. ಹೀಗಾಗಿ ಮನವಿ ಪರಿಗಣಿಸಲಾಗುವುದಿಲ್ಲ. ಆದರೆ ಅರ್ಜಿದಾರರಿಗೆ ಗಂಭೀರ ಕಳವಳ ಇದ್ದಲ್ಲಿ 226ರ ಅಡಿ ಹೈಕೋರ್ಟ್ ಮೊರೆ ಹೋಗಬಹುದು ಎಂದು ನ್ಯಾಯಾಲಯ ಹೇಳಿದೆ.

“ಈ ಚಲನಚಿತ್ರವು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವರ್ಚಸ್ಸಿಗೆ ಕಳಂಕ ತರಲು, ಹಂತಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಲು ಮತ್ತು ಮಹಾತ್ಮಾ ಗಾಂಧಿ ಹತ್ಯೆಯ ಸಂಭ್ರಮಾಚಣೆ ಮಾಡಲು ಉದ್ದೇಶಿಸಿದೆ” ಎಂದು ಅರ್ಜಿ ಸಲ್ಲಿಕೆಯಾಗಿತ್ತು.

ಕೋಮು ಸಾಮರಸ್ಯ ಕದಡುವುದು, ದ್ವೇಷ ಹರಡುವುದು, ಅಶಾಂತಿ ನಿರ್ಮಿಸುವ ಗುರಿಯನ್ನು ಈ ಚಲನಚಿತ್ರ ಹೊಂದಿದೆ. ಸೆನ್ಸಾರ್ ಮಂಡಳಿ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡದೆ ಇರುವುದರಿಂದ ಜನವರಿ 30 ರಂದು ಒಟಿಟಿ ಪ್ಲಾಟ್ ಫಾರ್ಮ್ ‘ಲೈಮ್ ಲೈಟ್’ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಸ್ತುತ ಸೆನ್ಸಾರ್ ಮಂಡಳಿಯ ವ್ಯಾಪ್ತಿಯಿಂದ ಹೊರಗುಳಿದ ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವುದು, ಮತ್ತು ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿಅನಿಯಂತ್ರಿತ, ಸೆನ್ಸಾರ್ ಮಾಡದ ವಿಷಯವನ್ನು ಪ್ರಕಟಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದರು.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದರು.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧಿ ಹಂತಕ ಗೋಡ್ಸೆ

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ. ಈ ಕುರಿತ ಲೇಖನವನ್ನು ಇಲ್ಲಿ ಓದಬಹುದು.


ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...