Homeಮುಖಪುಟಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

- Advertisement -
- Advertisement -

ರಾಜಕೀಯ ಸೌಜನ್ಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪಕ್ಷವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಸ್ಪರ್ಧಿಸುತ್ತಿರುವ ಯುಪಿಯ ಕರ್ಹಾಲ್ (ಮೈನ್‌ಪುರಿ) ಮತ್ತು ಜಸ್ವಂತ್ ನಗರ (ಇಟಾವಾ) ಕ್ಷೇತ್ರಗಳಿಂದ ಯಾವುದೆ ನಾಮಪತ್ರವನ್ನು ಸಲ್ಲಿಸಲಿಲ್ಲ.

ಈ ಎರಡು ಕ್ಷೇತ್ರಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ಮೂರನೇ ಹಂತದ ಮತದಾನ ಫೆಬ್ರವರಿ 20 ರಂದು ನಡೆಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

ಯುಪಿಯಲ್ಲಿ ಕಳೆದ ಕೆಲವು ಚುನಾವಣೆಗಳಲ್ಲಿ ಎರಡು ಪಕ್ಷಗಳು ಇತರ ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. 2019 ರ ಲೋಕಸಭಾ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಕರ್ಹಾಲ್ ಕ್ಷೇತ್ರದಿಂದ ಜ್ಞಾನವತಿ ಯಾದವ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ಪಕ್ಷವು ಈ ಹಿಂದೆ ಘೋಷಿಸಿತ್ತು. ಆದರೆ ಅಖಿಲೇಶ್‌ ಅವರು ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು ಘೋಷಿಸಿದ ನಂತರ ಕಾಂಗ್ರೆಸ್‌ ತನ್ನ ಸ್ಪರ್ಧಿಯನ್ನು ಹಿಂದೆ ಸರಿಸಿದೆ. ಕಾಂಗ್ರೆಸ್ ಜಸ್ವಂತ್ ನಗರದಿಂದ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಈ ಕ್ಷೇತ್ರದಲ್ಲಿ ಅಲ್ಲಿ ಶಿವಪಾಲ್ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಮೈನ್‌ಪುರಿಯ ಕಾಂಗ್ರೆಸ್‌ ಸಂಯೋಜಕ ಮನೀಷ್ ಶಾ, ಇತರ ಪಕ್ಷಕ್ಕೆ ಗೌರವ ನೀಡುವ ಸಲುವಾಗಿ ಕಾಂಗ್ರೆಸ್ ಪಕ್ಷವು ಈ ಕ್ಷೇತ್ರಗಳನ್ನು ತೊರೆಯಲಿದೆ ಎಂದು ಖಚಿತಪಡಿಸಿದ್ದಾರೆ. “ನಾವು ಇಲ್ಲಿಂದ ನಾಮಪತ್ರ ಸಲ್ಲಿಸಬಾರದು ಎಂದು ನಮಗೆ ಹೈಕಮಾಂಡ್‌ನಿಂದ ಸೂಚನೆ ಬಂದಿದೆ. ಹೀಗಾಗಿ ನಾವು ಹಾಗೆ ಮಾಡಿದ್ದೇವೆ. ಇದು ರಾಜಕೀಯ ಸೌಜನ್ಯದ ಭಾಗವಾಗಿದೆ” ಮನೀಷ್‌ ಶಾ ಹೇಳಿದ್ದಾರೆ.

ಎಸ್‌ಪಿ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧರಿ ಕೂಡ ಇದನ್ನು “ರಾಜಕೀಯ ಸೌಜನ್ಯ” ಎಂದು ಕರೆದಿದ್ದಾರೆ. “ಈ ಹಿಂದೆಯೂ ಇದು ಸಂಭವಿಸಿದೆ. ಎರಡೂ ಪಕ್ಷಗಳು ಜಾತ್ಯಾತೀತ ಶಕ್ತಿಯಾಗಿದ್ದು, ಬಿಜೆಪಿಯ ವಿರೋಧಿಗಳಾಗಿದ್ದೇವೆ. ಹಾಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವುದು ರಾಜಕೀಯ ಸೌಜನ್ಯದ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...