Homeಫ್ಯಾಕ್ಟ್‌ಚೆಕ್BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

- Advertisement -
- Advertisement -

ಜನವರಿ 29 ರಂದು, ಟಿವಿ9 ಭಾರತವರ್ಷವು ‘ದಿ ಎಂ ಫ್ಯಾಕ್ಟರ್’ ಎಂಬ ವಿಶೇಷ ವರದಿಯನ್ನು ಪ್ರಸಾರ ಮಾಡಿತು. ಈ ವರದಿಯ ಆರಂಭಿಕ ಹೇಳಿಕೆಗಳಲ್ಲಿ ಆಂಕರ್ ಸಮೀರ್ ಅಬ್ಬಾಸ್ ಅವರು, ‘ಈ ವರದಿಯು ಪಶ್ಚಿಮ ಯುಪಿಯ ಬಿಜ್ನೋರ್ ಜಿಲ್ಲೆಯಲ್ಲಿ ಯಾವ ಪಕ್ಷವು ಮುಸ್ಲಿಂ ಮತಗಳನ್ನು ಸೆಳೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಗ್ರೌಂಡ್‌ ಟೆಸ್ಟ್‌ ನಡೆಸುತ್ತಿದೆ’ ಎಂದು ಹೇಳುತ್ತಾರೆ. ಈ ವರದಿಗೂ ಒಂದು ದಿನ ಮೊದಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬಿಜ್ನೋರ್‌ನಲ್ಲಿ ಮನೆ-ಮನೆ ಪ್ರಚಾರ ನಡೆಸಿದ್ದರು.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರು ಈ ಪ್ರಸಾರದ 47 ಸೆಕೆಂಡುಗಳ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಮಹಿಳೆಯೊಬ್ಬರು ಬಿಜೆಪಿ ಮತ್ತು ಸಿಎಂ ಆದಿತ್ಯನಾಥ್ ಅವರನ್ನು ಅನುಮೋದಿಸುವುದನ್ನು ತೋರಿಸುತ್ತದೆ. ಇದೇ ವಿಡಿಯೊವನ್ನು ಬಿಜೆಪಿ ಉತ್ತರ ಪ್ರದೇಶ ಟ್ವಿಟರ್‌ ಹ್ಯಾಂಡಲ್‌ ಕೂಡಾ ಹಂಚಿಕೊಂಡಿದೆ. ಎರಡೂ ಖಾತೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೆ?

ವಿಡಿಯೋದಲ್ಲಿರುವ ಮಹಿಳೆಯನ್ನು “ನೂರ್‌ಪುರದ ಮುಸ್ಲಿಂ ಮತದಾರ” ಎಂದು ಗುರುತಿಸಲಾಗಿದೆ. ನೂರ್‌ಪುರ ಬಿಜ್ನೋರ್‌ನಲ್ಲಿರುವ ಒಂದು ನಗರವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಟಿವಿ9 ಈ ವರದಿಯಲ್ಲಿ ಜನಾಭಿಪ್ರಾಯ ಎಂದು 11 ಮುಸ್ಲಿಂ ವ್ಯಕ್ತಿಗಳನ್ನು ಸಂದರ್ಶಿಸಿದ್ದು, ಅವರಲ್ಲಿ 10 ಮಂದಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಟಿವಿ9 ನ ವ್ಯವಸ್ಥಾಪಕ ಸಂಪಾದಕ ಸಂತ ಪ್ರಸಾದ್ ರೈ ಅವರು ಸಂಬಿತ್‌ ಪತ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಖುಷಿಯಿಂದ ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್‌ನಲ್ಲಿ ಅವರು, ಟಿವಿ9ಭಾರತವರ್ಷ ಮಾಡಿರುವ ಕಾರ್ಯಕ್ರಮ ‘ಭಾರಿ ವೈರಲ್’ ಆಗಿದೆ ಎಂದು ಬರೆದಿದ್ದು, ‘ವಾಸ್ತವ ವರದಿಯನ್ನು’ ಪ್ರಸ್ತುತಪಡಿಸಿದ್ದಕ್ಕಾಗಿ ವರದಿಗಾರ ಶ್ರೀನಿವಾಸ್ ಅವರನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಪ್ರೊಪಗಾಂಡವನ್ನು ಸುದ್ದಿಯಾಗಿ ಪ್ರಸಾರ ಮಾಡಲಾಗಿದೆಯೆ?

ಜನಾಭಿಪ್ರಾಯವು ಪತ್ರಿಕೋದ್ಯಮದ ಒಂದು ರೂಪವಾಗಿದ್ದು, ಜನರ ಅಭಿಪ್ರಾಯವನ್ನು ಪ್ರಸ್ತುತಪಡಿಸಲು ವರದಿಗಾರ ಸಾರ್ವಜನಿಕರೊಂದಿಗೆ ಕಿರು ಸಂದರ್ಶನಗಳನ್ನು ನಡೆಸುತ್ತಾನೆ. ಜನಾಭಿಪ್ರಾಯದ ಪ್ರಮುಖ ವೈಶಿಷ್ಟ್ಯವೆಂದರೆ, ಮಾಧ್ಯಮಗಳು ಸಾಮಾನ್ಯ ಜನರನ್ನು ಸಂದರ್ಶಿಸುವುದಾಗಿದೆ. ಇದಕ್ಕೆ ಯಾವುದೆ ಪೂರ್ವಾಭ್ಯಾಸ ಇರುದಿಲ್ಲ. ಜನರು ಯಾರ ಪರವಾಗಿ ಇದ್ದಾರೆ ಎಂದು ತಿಳಿದುಕೊಳ್ಳಲು ಯಾದೃಚ್ಛಿಕವಾಗಿ ಜನರನ್ನು ಸಂದರ್ಶನ ನಡೆಸಲಾಗುತ್ತದೆ.

ಆದಾಗ್ಯೂ, TV9ನ ಈ ಜನಾಭಿಪ್ರಾಯದ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಸುವವರಿದ್ದರು. ಯಾಕೆಂದರೆ ಅವರು ಸಂದರ್ಶಿಸಿದ ಹೆಚ್ಚಿನ ಜನರು ಬಿಜೆಪಿಯ ಸದಸ್ಯರು, ಕಾರ್ಯಕರ್ತರು ಮತ್ತು ಬೆಂಬಲಿಗರಾಗಿದ್ದರು!.

ಟಿವಿ9 ಕಾರ್ಯಕ್ರಮವನ್ನು ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೈಬ್‌ಸೈಟ್‌ ಆಲ್ಟ್ ನ್ಯೂಸ್‌‌ ಪರಿಶೀಲಿಸಿದ್ದು, ಚಾನೆಲ್‌ ಸಂದರ್ಶಿಸಿದ ಹಲವು ಜನರು ಬಿಜೆಪಿಯದ್ದೇ ಜನರು ಎಂದು ಅದು ಕಂಡುಕೊಂಡಿದೆ.

ಟಿವಿ9 ಕಾರ್ಯಕ್ರಮದ 8:45 ನಿಮಿಷದಲ್ಲಿ, ಅಲಿಶಾ ಸಿದ್ದಿಕಿ ಎಂಬವರನ್ನು ಸಂದರ್ಶಿಸಿದ್ದು, ಅವರು ಯುಪಿಯಲ್ಲಿ ಮುಂಬರುವ ಚುನಾವಣೆಗಳ ಕುರಿತು ಮಾತನಾಡುತ್ತಾ, “ಈ ಬಾರಿ ಯೋಗಿ ಜಿ ಆಯ್ಕೆಯಾಗುತ್ತಾರೆ ಎಂದು ನಾನು ಭಾವಿಸುತ್ತೇನೆ…” ಎಂದು ಹೇಳುತ್ತಾರೆ. TV9 ಅವರನ್ನು “ನೂರ್‌‌ಪುರದ ಮುಸ್ಲಿಂ ಮತದಾರ” ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಆದರೆ, ಫೇಸ್‌ಬುಕ್‌ನಲ್ಲಿ ಅವರ ಹೆಸರನ್ನು ಹುಡುಕಿದಾಗ, ಅವರು ಬಿಜೆಪಿ ಸದಸ್ಯೆ ಎಂದು ತಿಳಿದು ಬಂದಿದೆ. ಪರಾಕ್ರಮ್ ದಿವಸ್ (ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ) ಸಂದರ್ಭದಲ್ಲಿ ಅಲಿಶಾ ಸಿದ್ದೀಕಿ ಅವರು ಬಿಜೆಪಿಯ ಪೋಸ್ಟರ್‌‌ ಅನ್ನು ತನ್ನ ಭಾವಚಿತ್ರದೊಂದಿಗೆ ಹಂಚಿಕೊಂಡಿದ್ದಾರೆ. ಅವರ ಪ್ರೊಫೈಲ್‌ನಲ್ಲಿ ಅವರು ಬಿಜೆಪಿ ಸದಸ್ಯೆ ಎಂದು ತಿಳಿಯಲು ಹಲವು ಚಿತ್ರಗಳಿವೆ. (1 ಮತ್ತು 2)

ವಿಡಿಯೊದ 7:05 ನಿಮಿಷದಲ್ಲಿ, ಹೆಸರಿಲ್ಲದ ವ್ಯಕ್ತಿಯನ್ನು “ನೂರ್‌ಪುರದ ಮುಸ್ಲಿಂ ಮತದಾರ” ಎಂದು ಪರಿಚಯಿಸಲಾಗಿದೆ. “ದ್ವೇಷವನ್ನು ಪ್ರೀತಿಯಾಗಿ ಪರಿವರ್ತಿಸುವವರು ಯಾರು?” ಎಂದು ವರದಿಗಾರರು ಕೇಳಿದಾಗ ಅವರು ಬಿಜೆಪಿಯ ಬಿಜ್ನೋರ್ ಮೂಲದ ನಾಯಕ ಸಿಪಿ ಸಿಂಗ್ ಎಂದು ಹೆಸರಿಸಿದರು. ಇದಕ್ಕೆ ವರದಿಗಾ “ಸಿಪಿ ಸಿಂಗ್ ಯಾರು?” ಎಂದು ಕೇಳುತ್ತಾರೆ. ಆಗ ಆ ಮುಸ್ಲಿಂ ವ್ಯಕ್ತಿ, “ಅವರು ನಮ್ಮ ಶಾಸಕರು… ಬಿಜೆಪಿ ಅಭ್ಯರ್ಥಿ” ಎಂದು ಹೇಳುತ್ತಾರೆ. ಈ ಹೊತ್ತಲ್ಲಿ ವರದಿಗಾರ ಆ ವ್ಯಕ್ತಿಯನ್ನು ಹಲವು ಬಾರಿ ಕೇಳುತ್ತಾರೆ, “ನೀವು ಬಿಜೆಪಿಯವರೇ?” ಅದಕ್ಕೆ ಆ ವ್ಯಕ್ತಿ ‘ಹೌದು’ ಎಂದು ಉತ್ತರಿಸುತ್ತಾರೆ.

ಆಲ್ಟ್‌‌‌ ನ್ಯೂಸ್‌‌‌ ಅಲ್ಲಿನ ಸ್ಥಳೀಯ ಪತ್ರಕರ್ತ ನರೇಂದ್ರ ಪ್ರತಾಪ್ ಅವರನ್ನು ಸಂಪರ್ಕಿಸಿದ್ದು, ಅವರು TV9 ಕಾರ್ಯಕ್ರಮದಲ್ಲಿನ ಹಲವು ಜನರನ್ನು ಗುರುತಿಸಿದ್ದಾರೆ.

14:36 ನಿಮಿಷದಲ್ಲಿ, ಅಮ್ಜದ್ ಅಲಿ ಅನ್ಸಾರಿ ಎಂಬವರನ್ನು ಸಂದರ್ಶಿಸಲಾಗಿದೆ. ಅನ್ಸಾರಿ ಅವರು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ನಾಯಕ ಎಂದು ನರೇಂದ್ರ ಪ್ರತಾಪ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಅಮ್ಜದ್ ಅಲಿ ಅನ್ಸಾರಿ ಅವರ ಚಿತ್ರವಿರುವ ಬಿಜೆಪಿಯ ರಾಜಕೀಯ ಪೋಸ್ಟರ್ ಅನ್ನು ಸಹ ಪ್ರತಾಪ್ ಹಂಚಿಕೊಂಡಿದ್ದಾರೆ.

16:12 ನಿಮಿಷಕ್ಕೆ, ಧರ್ಮಪುರದ “ಮುಸ್ಲಿಂ ಮತದಾರ” ಎಂದು ಸಂದರ್ಶಿಸಲಾಗಿದೆ. ಆದರೆ TV9 ಈ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಲಿಲ್ಲ.

ಈ ವ್ಯಕ್ತಿಯ ಹೆಸರು ಜಾವೇದ್ ಮುಲ್ತಾನಿ ಎಂದು ಪತ್ರಕರ್ತ ನರೇಂದ್ರ ಪ್ರತಾಪ್ ಬಹಿರಂಗಪಡಿಸಿದ್ದಾರೆ. ಅವರ ಚಿತ್ರವಿರುವ ಬಿಜೆಪಿಯ ಪೋಸ್ಟರ್‌‌ ಅನ್ನು ಪ್ರತಾಪ್ ಅವರು ಹಂಚಿಕೊಂಡಿದ್ದಾರೆ. ಕೆಳಗಿನ ಪೋಸ್ಟರ್‌ನಲ್ಲಿ, ಮುಲ್ತಾನಿ ಬಲಭಾಗದಲ್ಲಿದ್ದರೆ, ಬಿಜೆಪಿಯ ಧಂಪುರ್ ಶಾಸಕ ಅಶೋಕ್ ರಾಣಾ ಎಡಭಾಗದಲ್ಲಿದ್ದಾರೆ.

ಮುಲ್ತಾನಿಯ ಫೇಸ್‌ಬುಕ್ ಪ್ರೊಫೈಲ್ ಅಲ್ಲಿ ಕೂಡಾ ಈ ಪೋಸ್ಟರ್‌ ಇರುವುದು ಕಾಣುತ್ತದೆ.

ಇದರ ಜೊತೆಗೆ ಸಿಎಂ ಆದಿತ್ಯನಾಥ್ ಜೊತೆ ಮುಲ್ತಾನಿ ಕ್ಲಿಕ್ಕಿಸಿಕೊಂಡ ಸೆಲ್ಫಿಯನ್ನೂ ಪ್ರತಾಪ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

17:18 ನಿಮಿಷದಲ್ಲಿ, ದಾವುದ್‌ ಅಲಿ ಎಂಬವರನ್ನು ಸಂದರ್ಶಿಸಲಾಗಿದೆ. ಈ ವ್ಯಕ್ತಿ ಬಿಜೆಪಿ ಶಾಸಕ ಅಶೋಕ್ ರಾಣಾ ಅವರ ವೈಯಕ್ತಿಕ ಅಂಗರಕ್ಷಕ ಎಂದು ಪ್ರತಾಪ್ ಗುರುತಿಸಿಸಿದ್ದಾರೆ.

ಆದರೆ ಬಿಜೆಪಿ ಶಾಸಕ ಅಶೋಕ್‌ ರಾಣಾ ಈ ಹೇಳಿಕೆಯನ್ನು ನಿರಾಕರಿಸಿದ್ದು, “ದಾವುದ್ ಅಲಿ ಮತ್ತು ನಾನು ಬಹಳ ಸಮಯದಿಂದ ಸಹವರ್ತಿಯಾಗಿದ್ದೇವೆ. ಬಿಜೆಪಿಗೆ ಸಂಬಂಧಿಸಿದ ಎಲ್ಲಾ ಸಭೆಗಳಲ್ಲಿ ಅವರು ಹಾಜರಿರುತ್ತಾರೆ” ಎಂದು ಹೇಳಿದ್ದಾರೆ.

“ಸಂದರ್ಶನದಲ್ಲಿ ಹೆಚ್ಚಿನ ಜನರು ಬಿಜೆಪಿ ಜೊತೆಗೆ ಸಂಬಂಧ ಹೊಂದಿದ್ದಾರೆ” ಎಂದು ದಾವುದ್‌ ಅಲಿ ತಿಳಿಸಿದ್ದಾರೆ ಎಂದು ಆಲ್ಟ್‌ ನ್ಯೂಸ್‌ ವರದಿ ಮಾಡಿದೆ.

13:56 ನಿಮಿಷದಲ್ಲಿ, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ನಾಯಕ ಅಮ್ಜದ್ ಅಲಿ ಅನ್ಸಾರಿ ಸಂದರ್ಶನ ಮಾಡುವ ಮೊದಲು, ಟಿವಿ9 ನಜಾಕತ್ ಹುಸಿಯಾನ್ ಅವರ ಬೈಟ್ ಅನ್ನು ಪ್ರಸಾರ ಮಾಡಿದೆ. ಹುಸೇನ್ ಬಿಜೆಪಿ ಕಾರ್ಯಕರ್ತ ಆಗಿದ್ದು, ಪಕ್ಷದಲ್ಲಿ ಅಧಿಕೃತ ಹುದ್ದೆಯನ್ನು ಹೊಂದಿಲ್ಲ ಎಂದು ಅನ್ಸಾರಿ ಆಲ್ಟ್ ನ್ಯೂಸ್‌ಗೆ ತಿಳಿಸಿದ್ದಾರೆ.

15:17 ನಿಮಿಷದಲ್ಲಿ, ಮೊಹಮ್ಮದ್ ಮುಬಿನ್ ಅವರನ್ನು ಸಂದರ್ಶಿಸಲಾಗಿದೆ. ಮುಬಿನ್ ಸಹ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದು, ಆದರೆ ಪಕ್ಷದ ಅಧಿಕೃತ ಹುದ್ದೆಯನ್ನು ಹೊಂದಿಲ್ಲ ಎಂದು ಅನ್ಸಾರಿ ಆಲ್ಟ್ ನ್ಯೂಸ್‌ಗೆ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಟಿವಿ9 ಇನ್ನೂ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಮಾಡಿದೆ. ಆದರೆ ಅವರನ್ನು ಗುರುತಿಸಲು ಆಲ್ಟ್‌‌ನ್ಯೂಸ್‌ಗೆ ಸಾಧ್ಯವಾಗಿಲ್ಲ.

ಆದಾಗ್ಯೂ, ಟಿವಿ9 ಸಂದರ್ಶಿಸಿದ 11 “ಮುಸ್ಲಿಂ ಮತದಾರರಲ್ಲಿ” ಕನಿಷ್ಠ ಏಳು ಮಂದಿ ಬಿಜೆಪಿಯ ಸದಸ್ಯರು ಅಥವಾ ಕಾರ್ಯಕರ್ತರಾಗಿದ್ದಾರೆ. ಟಿವಿ ಭರತವರ್ಷ್, ಈ ವ್ಯಕ್ತಿಗಳನ್ನು ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಸಾಮಾನ್ಯ “ಮುಸ್ಲಿಂ ಧ್ವನಿಗಳು” ಎಂದು ಪ್ರಸ್ತುತಪಡಿಸಿದೆ.

ಕೃಪೆ: Alt News

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...