Homeಮುಖಪುಟಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಲಖಿಂಪುರ್‌ ಖೇರಿನಲ್ಲಿ ಕಾರು ಹರಿಸಿ ರೈತರ ಹತ್ಯಾಕಾಂಡ ನಡೆಸಲಾಗಿತ್ತು. ಈ ಹತ್ಯಾಕಾಂಡದಿಂದ ಮೃತಪಟ್ಟ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ರೈತರು, ಚುನಾವಣೆಯಲ್ಲಿ ’ನೋಟಾ’ಕ್ಕೆ ಮತ ನೀಡುವುದಾಗಿ ತಿಳಿಸಿದ್ದಾರೆ.

ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಒತ್ತಡಗಳ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿದೆ. ಆದರೆ, ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಟ್ಟಿಲ್ಲ. ಇದರಿಂದ ಅಸಮಾಧಾನಗೊಂಡಿರುವ ರೈತರು, ವಿವಿಧ ರಾಜಕೀಯ ಪಕ್ಷಗಳಿಂದ ತಾವು ಮೋಸ ಹೋಗಿದ್ದೇವೆ ಎಂದಿದ್ದಾರೆ.

ತೆರಾಯ್ ಬೆಲ್ಟ್‌ನಲ್ಲಿರುವ ಲಖಿಂಪುರ್‌ ಖೇರಿ ಜಿಲ್ಲೆಯ ಜನಸಂಖ್ಯೆಯಲ್ಲಿ ಬಹುಪಾಲು ರೈತರೇ ಇದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

“ಬಿಜೆಪಿ, ಎಸ್‌ಪಿ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷಗಳು ನಮಗೆ ಸುಳ್ಳು ಆಶ್ವಾಸನೆಗಳನ್ನು ನೀಡಿದ್ದು, ಚುನಾವಣೆಯ ಸಂದರ್ಭದಲ್ಲಿ ನಮ್ಮನ್ನು ‘ಸರಕಾಗಿ ಬಳಸಿಕೊಳ್ಳಲು’ ಬಯಸುತ್ತಿವೆ. ಹೀಗಾಗಿ ಯಾವುದೇ ರಾಜಕೀಯ ಪಕ್ಷದ ಮೇಲೆ ನಮಗೆ ಭರವಸೆ ಇಲ್ಲ” ಎಂದು ಸ್ಥಳೀಯ ರೈತ ಗುರ್ವಿಂದರ್ ಸಿಂಗ್ ಹೇಳಿದ್ದಾರೆ.

ಎಸ್‌ಪಿ ಮತ್ತು ಬಿಜೆಪಿ ರೈತರಿಗೆ ಮೋಸ ಮಾಡಿದೆ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆಯ ಮುಖ್ಯಸ್ಥ ವಿ.ಎಂ. ಸಿಂಗ್ ಆರೋಪಿಸಿದ್ದಾರೆ. “ಎಸ್‌ಪಿ- ರಾಷ್ಟ್ರೀಯ ಲೋಕದಳ ಮೈತ್ರಿಕೂಟ ಮತ್ತು ಬಿಜೆಪಿ ರೈತರನ್ನು ಮೂರ್ಖರನ್ನಾಗಿಸುತ್ತಿವೆ, ನಾವು ಅವರಿಬ್ಬರನ್ನು ಏಕೆ ಬೆಂಬಲಿಸಬೇಕು?” ಎಂದು ಪ್ರಶ್ನಿಸಿದ್ದಾರೆ.

’ಅಕ್ಟೋಬರ್ 3 ರ ಘಟನೆಯ ನಂತರ ನಾವು ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ. ಕಬ್ಬು ಗಿರಣಿ ಮಾಲೀಕರು ಸಾಗುವಳಿದಾರರಿಗೆ ಪಾವತಿಸಬೇಕಾದ 2,000 ಕೋಟಿ ರೂಪಾಯಿಗಳ ಬಡ್ಡಿಯನ್ನು ಮನ್ನಾ ಮಾಡಿದ ಸಮಾಜವಾದಿ ಪಕ್ಷವನ್ನು ಬೆಂಬಲಿಸಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

1966ರ ಕಬ್ಬು ನಿಯಂತ್ರಣ ಆದೇಶದ ಪ್ರಕಾರ ಕಬ್ಬಿನ ಬಾಕಿ ಬೆಲೆಯನ್ನು 14 ದಿನಗಳೊಳಗೆ ಪಾವತಿಸದಿದ್ದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಶೇ.15ರಷ್ಟು ಬಡ್ಡಿ ನೀಡಬೇಕು. ಆದರೆ, ಸಕ್ಕರೆ ಉದ್ಯಮವು ಸಂಕಷ್ಟದಲ್ಲಿದೆ ಎಂದಿದ್ದ ಆಗಿನ ಎಸ್‌ಪಿ ಸರ್ಕಾರ ರೈತರಿಗೆ ಬರಬೇಕಿದ್ದ ಸುಮಾರು 2,000 ಕೋಟಿ ರೂ. ಮನ್ನಾ ಮಾಡಿತ್ತು.

ಮತ್ತೊಬ್ಬ ರೈತ ರಾಜ್ ಸಿಂಗ್ ಮಾತನಾಡಿ, ‘ನಮ್ಮ ಮಕ್ಕಳು ಓದಲು, ಮದುವೆಯಾಗಲು ಸಾಧ್ಯವಾಗುತ್ತಿಲ್ಲ, ನಾವು ಯಾವುದೇ ಪಕ್ಷಕ್ಕೆ ಮತ ಹಾಕಲು ಬಯಸುವುದಿಲ್ಲ ಮತ್ತು ನೋಟಾ ಆಯ್ಕೆಯನ್ನು ಬಳಸುತ್ತೇವೆ’ ಎಂದಿದ್ದಾರೆ.

ಈ ಹಿಂದೆ, ಶಾಮ್ಲಿ ಜಿಲ್ಲೆಯ ಕಶ್ಯಪ್ ಸಮುದಾಯದ ಪಂಚಾಯತ್, 17 ಹಿಂದಿರುಳಿದ ವರ್ಗಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ವರ್ಗಾಯಿಸುವ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಕಾರಣ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸದಸ್ಯರು ಯಾವುದೇ ಅಭ್ಯರ್ಥಿಗೆ ಮತ ಹಾಕುವುದಿಲ್ಲ. ನೋಟಾಗೆ ಮತ ನೀಡುವುದಾಗಿ ಘೋಷಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...