Homeಮುಖಪುಟಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

ಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

- Advertisement -
- Advertisement -

ಪಂಜಾಬ್‌‌ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿರುವ ಚರಂಜಿತ್ ಸಿಂಗ್ ಚನ್ನಿ ಅಥವಾ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ತುಂಬಾ ಕಡಿಮೆ ಬೆಂಬಲ ಇದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ.

ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಆಂತರಿಕ ಸಮಾಲೋಚನೆಗಳನ್ನು ನಡೆಸುತ್ತಿದ್ದು, ಈ ವೇಳೆ ಜಾಖರ್‌ ಅವರು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

“ಕಳೆದ ವರ್ಷ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಪಕ್ಷವು ತನ್ನ ಎಲ್ಲಾ 79 ಶಾಸಕರನ್ನು ಕೇಳಿತ್ತು. ಆದರೆ ಈ ವೇಳೆ ಚನ್ನಿ ಮತ್ತು ನವಜೋತ್‌ ಸಿಧುಗೆ ಅತ್ಯಂತ ಕಡಿಮೆ ಮತಗಳು ಸಿಕ್ಕಿವೆ” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಈ ವೇಳೆ, ತನ್ನ ಪರವಾಗಿ 42 ಕಾಂಗ್ರೆಸ್‌ ಶಾಸಕರು ಮತನೀಡಿದ್ದಾಗಿ ಸುನಿಲ್ ಜಾಖರ್‌ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ. ಉಳಿದಂತೆ ಸುಖಜಿಂದರ್ ರಾಂಧವಾ ಅವರಿಗೆ 16 ಮತಗಳು ಮತ್ತು ಪ್ರಣೀತ್ ಕೌರ್ ಅವರಿಗೆ 12 ಶಾಸಕರು ಮತ ಸಿಕ್ಕಿದ್ದು, ನವಜೋತ್ ಸಿಧು ಮತ್ತು ಚರಂಜಿತ್ ಸಿಂಗ್ ಚನ್ನಿ ಅವರನ್ನು ಕ್ರಮವಾಗಿ ಆರು ಮತ್ತು ಇಬ್ಬರು ಶಾಸಕರು ಮಾತ್ರ ಇಷ್ಟಪಟ್ಟಿದ್ದಾರೆ ಎಂದು ಸುನೀಲ್ ಜಾಖರ್ ಅವರು ಅಬೋಹರ್ ಕ್ಷೇತ್ರದಲ್ಲಿ ತಮ್ಮ ಸಂಬಂಧಿ ಪರ ಪ್ರಚಾರ ಮಾಡುವಾಗ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

ತನಗೆ ಉನ್ನತ ಹುದ್ದೆಯನ್ನು ನಿರಾಕರಿಸಲಾಗಿದ್ದರೂ, ಹೆಚ್ಚಿನ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ. ಅತಿ ಹೆಚ್ಚು ಮತ ಪಡೆದರೂ ಉಪಮುಖ್ಯಮಂತ್ರಿ ಸ್ಥಾನ ನೀಡಿವುದಾಗಿ ಹೇಳಿದ್ದು ನನಗೆ ಅಸಮಾಧಾನ ತಂದಿತ್ತು ಎಂದು ಅವರು ತಿಳಿಸಿದ್ದಾರೆ.

“ನನ್ನ ವೃತ್ತಿ ಜೀವನದಲ್ಲಿ ನಾನು ಗಳಿಸಿದ್ದು ಇದನ್ನೇ. ನಾನು ಯಾವುದೆ ಹುದ್ದೆಯಲ್ಲಿ ಇಲ್ಲದಿದ್ದರೂ ಶಾಸಕರು ನನ್ನ ಪರವಾಗಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸುನೀಲ್ ಜಾಖರ್ ಸ್ಪರ್ಧಿಸಿಲ್ಲ.

ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...