Homeಮುಖಪುಟಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ" ಎಂದು ರಾವ್ ಹೇಳಿದ್ದಾರೆ.

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮತ ಹಾಕದಂತೆ ಕರೆ ನೀಡಿದ್ದಾರೆ. “ಬಿಜೆಪಿಯನ್ನು ಬಂಗಾಳ ಕೊಲ್ಲಿಗೆ ಎಸೆಯುವ ಅಗತ್ಯವಿದೆ” ಎಂದು ಅವರು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನು ಮಾಡದ ಹೊರತು ಈ ದೇಶವು ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ರಾವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬಿಜೆಪಿಯು ಧಾರ್ಮಿಕ ನೆಲೆಯಲ್ಲಿ ದ್ವೇಷವನ್ನು ಹರಡುತ್ತಿದೆ. ರಾಜಕೀಯ ಲಾಭಕ್ಕಾಗಿ ದೇಶವನ್ನು ಬಿಜೆಪಿ ವಿಭಜಿಸುತ್ತಿದೆ ಎಂದಿರುವ ಕೆ.ಚಂದ್ರಶೇಖರ್‌ ರಾವ್‌, ಬಿಜೆಪಿ ಈ ದೇಶದ ದೌರ್ಭಾಗ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ಅವರು, “ಪ್ರಜ್ಞಾಶೂನ್ಯ ಪಕ್ಷಗಳು ಮತ್ತು ನಾಯಕರಿಂದ ವಿಮೋಚನೆ ಅಗತ್ಯವಿದೆ. ದೇಶಕ್ಕೆ ಬದಲಾವಣೆಗೆ ಬೇಕಿದೆ. ದೇಶದ ನಾಗರಿಕರ ನಿರೀಕ್ಷೆಗಳನ್ನು ಈಡೇರಿಸಲು ಭಾರತದ ಸಂವಿಧಾನವನ್ನು ಪುನಃ ಬರೆಯುವ ಅಗತ್ಯವಿದೆ” ಎಂದು ಹೇಳಿರುವುದಾಗಿ ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ವಿಫಲವಾಗಿವೆ ಎಂದು ರಾವ್ ದೂರಿದ್ದಾರೆ.

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಹೊಸ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ. ಹೊಸ ಸಂವಿಧಾನ, ಹೊಸ ಚಿಂತನೆ, ಹೊಸ ದಿಕ್ಕು…. ಇದು ನಮ್ಮ ಘೋಷಣೆಯಾಗಲಿದೆ. ನೀವು ಕಾದು ನೋಡಿ” ಎಂದಿದ್ದಾರೆ.

ರಾವ್ ಅವರು 2018 ರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಮೈತ್ರಿಯನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದಾರೆ.

2019ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ರಾವ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವಾರು ರಾಜಕೀಯ ನಾಯಕರನ್ನು ಭೇಟಿಯಾಗಿದ್ದರು.

“ನಾನು ದೇಶದ ಅನೇಕ ಜನರೊಂದಿಗೆ ಮಾತನಾಡುತ್ತಿದ್ದೇನೆ. ಕೆಲವೇ ದಿನಗಳಲ್ಲಿ ನಾವು ನೀತಿಯನ್ನು ಘೋಷಿಸುತ್ತೇವೆ. 75 ವರ್ಷಗಳ ನಂತರ ಭಾರತಕ್ಕೆ ಹೊಸ ಕಾರ್ಯಸೂಚಿಯನ್ನು ಹೊಂದಿಸಬೇಕಾಗಿದೆ” ಎಂದಿದ್ದಾರೆ.

ಐಎಎಸ್‌ ನಿಯಮಗಳನ್ನು ತಿದ್ದುಪಡಿ ಮಾಡುವ ಕೇಂದ್ರದ ಪ್ರಸ್ತಾವನೆಯು ರಾಜ್ಯ ಸರ್ಕಾರಗಳ ವಿರುದ್ಧದ “ಪಿತೂರಿ” ಎಂದು ಅವರು ಆರೋಪಿಸಿದ್ದಾರೆ.

ಬದಲಾವಣೆಯನ್ನು ತರಲು ಇತರ ರಾಜಕೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.

ಈ ದೇಶದ ಒಳಿತಿಗಾಗಿ ನಾವು ಸೈನಿಕರಂತೆ ಹೋರಾಡುತ್ತಲೇ ಇರುತ್ತೇವೆ. ನಾನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧನಿದ್ದೇನೆ. ಹಗಲು ರಾತ್ರಿ ಬೊಗಳುತ್ತಲೇ ಇರುವ ಹುಚ್ಚು ನಾಯಿಗಳಿಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಸಂವಿಧಾನವನ್ನು ಬದಲಾಯಿಸಬೇಕು ಎನ್ನುವವರನ್ನು, ಈ ದೇಶದ ಅಹಿಂದ ವರ್ಗ ಯಾವ ಕಾರಣಕ್ಕೂ ನಂಬಬಾರದು. ಏಕೆಂದರೆ ಇವರು ಗೋಮುಕ ವ್ಯಾಗ್ರಗಳು.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...