Homeಅಂಕಣಗಳುಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಬಜೆಟ್ ಮಂಗಳವಾರ ಲೋಕಸಭೆಯಲ್ಲಿ ಅನಾವರಣಗೊಂಡಿತು. ದೇಶದ ಷೇರುಪೇಟೆ ಉತ್ಸಾಹದಿಂದ ಕುಣಿದು ಕುಪ್ಪಳಿಸಿತು. ಮಾಧ್ಯಮಲೋಕ ಈ ಉತ್ಸಾಹವನ್ನೇ ಬಜೆಟ್‌ನ ಅಳತೆಗೋಲು ಎಂಬಂತೆ ಬಿಂಬಿಸಿದೆ.

ಷೇರುಪೇಟೆಯ ಜಿಗಿತ-ಕುಸಿತದಲ್ಲಿ ಪ್ರತಿಫಲಿಸುವುದು ಶೇ.4ರಷ್ಟು ಭಾರತ ಮಾತ್ರ. ಉಳಿದ ಶೇ.96ರಷ್ಟು ಭಾರತದ ಪಾಲಿಗೆ ಈ ಬಜೆಟ್ ಎಷ್ಟು ಪ್ರಸ್ತುತ ಅಥವಾ ಅಪ್ರಸ್ತುತ ಎಂಬುದೇ ಅಸಲು ಸಂಗತಿ.

ಅಂಕಿಅಂಶಗಳ ಮಾಯಾಜಾಲವನ್ನು ಹರಿದು ನೋಡುವುದಾದರೆ ಬಡವರನ್ನು ಬಡವರನ್ನಾಗಿಯೇ ಉಳಿಸಿ, ಧನಿಕರನ್ನು ಇನ್ನಷ್ಟು ಧನಿಕರನ್ನಾಗಿಸುವ ಯಥಾಸ್ಥಿತಿವಾದಿ ಬಜೆಟ್ ಇದು. ನಿರುದ್ಯೋಗ, ಸಮಾಜ ಕಲ್ಯಾಣ, ವಿತ್ತೀಯ ಸ್ಥಿತಿಗತಿಯಲ್ಲೂ ನಿರಾಶೆಯನ್ನೇ ಧರಿಸಿರುವ ಮುಂಗಡಪತ್ರ.

ಪೆಟ್ರೋಲ್ ಎಂಬುದು ಮೋದಿ ಸರ್ಕಾರದ ಪಾಲಿಗೆ ತೆರಿಗೆ ಸಂಗ್ರಹದ ಕಾಮಧೇನು-ಕಲ್ಪವೃಕ್ಷ. ಜನಸಾಮಾನ್ಯರ ಪಾಲಿಗೆ ನಡು ಮುರಿದು ನೆಲಕ್ಕೆ ಕೆಡವಿರುವ ಭಯಂಕರ ಬಡಿಗೆ. ಅನ್‌ಬ್ಲೆಂಡೆಡ್ ಪೆಟ್ರೋಲ್ ಮೇಲೆ ಲೀಟರಿಗೆ ಎರಡು ರೂಪಾಯಿಯ ಹೊಸ ತೆರಿಗೆಯನ್ನು ಬಜೆಟ್ಟಿನಲ್ಲಿ ಹೇರಲಾಗಿದೆ. ಈ ಹೊಸ ಭಾರವನ್ನು ಜನಸಾಮಾನ್ಯರೇ ಹೊರಬೇಕಿದೆ. ವಿಶ್ವಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಈಗಾಗಲೆ ಏರುಮುಖವಾಗಿದೆ. ಮುಂದಿನ ತಿಂಗಳುಗಳಲ್ಲಿ ಈ ತೈಲದ ಬೆಲೆ ಇನ್ನಷ್ಟು ಏರಿಕೆಯ ಒಜ್ಜೆ ಹೊರಲು ಭಾರತದೇಶವಾಸಿಗಳು ತಯಾರಾಗಬೇಕಿದೆ.

ಮೋದಿಯಂತಹ ಮೋದಿಯವರೇ ಮಂಡಿಯೂರಿರುವಂತಹ ಪ್ರಬಲ ರೈತ ಚಳವಳಿ ವರ್ಷದೊಪ್ಪತ್ತು ನಡೆದದ್ದನ್ನು ವಿಶ್ವವೇ ಎದ್ದು ಕುಳಿತು ನೋಡಿತು. ಆದರೆ ಈ ಬಜೆಟ್ಟಿನಲ್ಲಿ ಅಸಲಿ ಕೃಷಿಯ ವಿಷಯವನ್ನು ಭೂತಗಾಜು ಹಾಕಿ ಹುಡುಕಬೇಕಿದೆ.

ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯ ಎಲ್ಲ ರೈತರ ಉತ್ಪನ್ನಗಳಿಗೂ ದೊರೆಯಬೇಕೆಂಬ ರೈತ ಆಂದೋಲನದ ಬೇಡಿಕೆಗೆ ಕೇಂದ್ರ ಸರ್ಕಾರ ಯಾವ ಕಿಮ್ಮತ್ತನ್ನೂ ನೀಡಿಲ್ಲ. ಕಳೆದ ವರ್ಷದ (2021) ಬಜೆಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ತೆತ್ತು ಕೃಷಿ ಉತ್ಪನ್ನಗಳ ಖರೀದಿಗೆ ತೆಗೆದಿರಿಸಿದ್ದ ಮೊತ್ತ 2.48 ಲಕ್ಷ ಕೋಟಿ ರುಪಾಯಿ. ಇಂದು ಮಂಡಿಸಿದ ಬಜೆಟ್ಟಿನಲ್ಲಿ ಈ ಮೊತ್ತ 2.37 ಲಕ್ಷ ಕೋಟಿ ರುಪಾಯಿ.

ರಸಗೊಬ್ಬರಗಳ ಮೇಲಿನ ಸಬ್ಸಿಡಿಯ ಮೊತ್ತವನ್ನು 1.40 ಲಕ್ಷ ಕೋಟಿ ರುಪಾಯಿಗಳಿಂದ 1.05 ಕೋಟಿ ರುಪಾಯಿಗಳಿಗೆ ಖೋತಾ ಮಾಡಲಾಗಿದೆ. ಇದೇ ರೀತಿ ಬಡಜನಸಮುದಾಯಗಳಿಗೆ ನೀಡಲಾಗುವ ಆಹಾರ ಸಬ್ಸಿಡಿ ಕೂಡ 2.9 ಲಕ್ಷ ಕೋಟಿ ರುಪಾಯಿಗಳಿಂದ 2.1 ಲಕ್ಷ ಕೋಟಿಗೆ ಇಳಿದಿದೆ. ರಾಷ್ಟ್ರೀಯ ಹಸಿರು ಕ್ರಾಂತಿ ಯೋಜನೆಗೆ ಕಳೆದ ಬಜೆಟ್‌ನಲ್ಲಿ 13 ಸಾವಿರ ಕೋಟಿ ತೆಗೆದಿರಿಸಲಾಗಿತ್ತು. ಈ ಬಾರಿ ಅದರ ಪ್ರಸ್ತಾಪವೇ ಇಲ್ಲ.

ಕೃಷಿ ಆದಾಯವನ್ನು ದುಪ್ಪಟ್ಟು ಮಾಡುವ ಭರವಸೆ ಕಾಗದದ ಮೇಲೆಯೇ ಉಳಿದಿದೆ. ಪ್ರಧಾನಮಂತ್ರಿ ರೈತ ಧನವೆಂದು ರೈತರಿಗೆ ಪ್ರತಿ ಮೂರು ತಿಂಗಳಿಗೆ ಎರಡು ಸಾವಿರದಂತೆ ವರ್ಷಕ್ಕೆ ಆರು ಸಾವಿರ ರುಪಾಯಿ ನೀಡಲಾಗುತ್ತಿದೆ. ಈ ಮೊತ್ತವನ್ನು ಹನ್ನೆರಡು ಸಾವಿರಕ್ಕೆ ಏರಿಸುವರೆಂಬ ನಿರೀಕ್ಷೆ ಹುಸಿಯಾಗಿದೆ. ಭೂರಹಿತ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ತಲಾ ಆರು ಸಾವಿರ ರೂಪಾಯಿ ನೀಡಿಕೆಯನ್ನು ಆರಂಭಿಸಬಹುದಿತ್ತು.

ರೈತಾಪಿಗಳ ಜನಸಂಖ್ಯೆ ಶೇ.50ಕ್ಕೂ ಹೆಚ್ಚು. ಇವರ ಕೈಗೆ ಹಣ ಹರಿಯುವುದೆಂದರೆ ಖರೀದಿ ಸಾಮರ್ಥ್ಯ
ಹೆಚ್ಚಿಸಿ ಸರಕು ಸರಂಜಾಮುಗಳ ಬೇಡಿಕೆಯನ್ನು ಹೆಚ್ಚಿಸಿದಂತೆ. ಬೇಡಿಕೆ ಹೆಚ್ಚಿಸಿದರೆ ಉತ್ಪಾದನೆ ಚುರುಕು ಪಡೆದು ಉದ್ಯೋಗಾವಕಾಶ ಕುದುರಿ ಅರ್ಥಸ್ಥಿತಿಯ ಆವರ್ತ ಜೀವಂತಗೊಳ್ಳುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಈ ಉಸಾಬರಿಗೆ ಹೋಗಿಲ್ಲ. ಸಂಬಳದಾರ ಮಧ್ಯಮವರ್ಗಗಳಿಗೆ ಆದಾಯ ತೆರಿಗೆಯ ಯಾವುದೇ ರಿಯಾಯಿತಿ ಈ ವರ್ಷವೂ ದೊರೆತಿಲ್ಲ.

ಗ್ರಾಮೀಣ ಬಡಜನರನ್ನು ತಕ್ಕಮಟ್ಟಿಗಾದರೂ ಹಸಿವಿನಿಂದ ಕಾಪಾಡುತ್ತ ಬಂದಿರುವುದು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ಕೋವಿಡ್ ಲಾಕ್‌ಡೌನ್‌ಗಳ ನಂತರ ಮಹಾನಗರಗಳಿಂದ ಹಳ್ಳಿಗಳಿಗೆ ನಡೆದ ಮಹಾವಲಸೆಯ ನಂತರ ಆ ಜನರಾಶಿಯನ್ನು ಪೊರೆದ ಯೋಜನೆ. ಗ್ರಾಮೀಣ ಬಡಜನರಿಂದ ಭಾರೀ ಬೇಡಿಕೆ ಇರುವ ಯೋಜನೆಯಿದು. ಆದರೆ ಈ ಯೋಜನೆಯ ಹಂಚಿಕೆಯನ್ನು 98,000 ಕೋಟಿ ರುಪಾಯಿಗಳಿಂದ 73,000 ಕೋಟಿ ರುಪಾಯಿಗಳಿಗೆ ಇಳಿಸಲಾಗಿದೆ!

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಪಾಲಿಗೆ ಎಂದಿನಂತೆ ನಿರಾಶಾದಾಯಕ ಬಜೆಟ್. ಆರೋಗ್ಯ ಮಂತ್ರಾಲಯಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು ಹಣ 86,200 ಕೋಟಿ ರುಪಾಯಿಗಳು. ಕಳೆದ ವರ್ಷದ ಪರಿಷ್ಕೃತ ಬಜೆಟ್ ಹಂಚಿಕೆಗೆ ಹೋಲಿಸಿದರೆ ಕೇವಲ 200 ಕೋಟಿ ರುಪಾಯಿಗಳ ಹೆಚ್ಚಳ!

ಶೇ.90ರಷ್ಟು ಉದ್ಯೋಗಾವಕಾಶಗಳನ್ನು ಒದಗಿಸುವ ಅಸಂಘಟಿತ ಕ್ಷೇತ್ರವನ್ನು ನೆಲಕಚ್ಚಿಸಲಾಗಿದೆ. ಹೀಗಾಗಿ ಈ ವಲಯಕ್ಕೆ ಪುನಶ್ಚೇತನ ನೀಡುವ ಮಾತನ್ನು ಬಜೆಟ್ಟಿನಲ್ಲಿ ನಿರೀಕ್ಷಿಸುವುದೂ ಮೂರ್ಖತನವಾದೀತು. ಹಣದುಬ್ಬರ ದರವನ್ನು ತಿರುಚಿ ತಗ್ಗಿಸಿ ಮಂಡಿಸಲಾಗಿದೆ.

ದೇಶದ ಅತಿ ಸಿರಿವಂತರ ಪ್ರಮಾಣ ಶೇ.10. ದೇಶದ ಶೇ.64.6ರಷ್ಟು ಸಂಪತ್ತು ಇವರ ಕೈಯಲ್ಲಿದೆ. ದೇಶವನ್ನು ಕಾಡಿದ ನೋಟು ರದ್ದು, ಕೋವಿಡ್ ಮಹಾ ಸಾಂಕ್ರಾಮಿಕ, ನಿರುದ್ಯೋಗ, ಬಡತನ, ಹಸಿವಿನ ಸಂಕಟಗಳು ಈ ವರ್ಗದ ಸಂಪತ್ತನ್ನು ಇನ್ನಷ್ಟು ಹೆಚ್ಚಿಸಿವೆ. ಭಾರತದ ಕೇವಲ ಹತ್ತು ಮಂದಿ ಅಪಾರ ಧನಿಕರ ಬಳಿ ಇರುವ ಸಂಪತ್ತಿನಿಂದ ದೇಶದ ಎಲ್ಲ ಮಕ್ಕಳ ಶಾಲಾ ಮತ್ತು ಪ್ರೌಢ ಶಿಕ್ಷಣವನ್ನು 25 ವರ್ಷಗಳ ಕಾಲ ನಡೆಸಬಹುದೆಂಬ ಅಂಕಿಅಂಶ ಎರಡು ವಾರಗಳ ಹಿಂದೆ ದಾವೋಸ್‌ನಲ್ಲಿ ಜರುಗಿದ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಮಂಡಿತವಾದವು. ದೇಶದ ಆರ್ಥಿಕ ಏಣಿಶ್ರೇಣಿಯ ಮೇಲ್ಭಾಗದ ಶೇ.10 ಮಂದಿ ದೇಶದ ಒಟ್ಟು ಸಂಪತ್ತಿನ ಶೇ.45ರಷ್ಟರ ಒಡೆತನ ಹೊಂದಿದ್ದರೆ ಕೆಳಭಾಗದ ಶೇ.50ರಷ್ಟು ಜನಸಂಖ್ಯೆಯು ದೇಶದ ಒಟ್ಟು ಸಂಪತ್ತಿನ ಶೇ.6ರಷ್ಟರಲ್ಲೇ ಒದ್ದಾಡಿದೆ. ಆಕ್ಸ್‌ಫ್ಯಾಮ್ ಇಂಡಿಯಾದ ಈ ಅಂಕಿ ಅಂಶಗಳ ಪ್ರಕಾರ ಈ ಶೇ.10ರಷ್ಟು ಅತಿ ಧನಿಕರ ಮೇಲೆ ವಿಧಿಸಲಾಗುವ ಶೇ.ಒಂದರಷ್ಟು ತೆರಿಗೆ ಕೂಡ 17.7 ಲಕ್ಷ ಹೆಚ್ಚುವರಿ ಆಮ್ಲಜನಕ ಸಿಲಿಂಡರುಗಳನ್ನು ಒದಗಿಸಬಲ್ಲದು. ಹಾಗೆಯೇ ಭಾರತದ 98 ಮಂದಿ ಶತಕೋಟ್ಯಾಧೀಶ ಕುಬೇರರ ಮೇಲೆ ವಿಧಿಸಲಾಗುವ ಶೇ.1ರಷ್ಟು ಸಂಪತ್ತು ತೆರಿಗೆ ಕೂಡ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿರುವ ಆಯುಷ್ಮಾನ್ ಭಾರತವನ್ನು ಏಳು ವರ್ಷಗಳಿಗೂ ಹೆಚ್ಚು ಕಾಲ ಸಾಕಬಲ್ಲದು.

ಆದರೂ ಕೇಂದ್ರ ಸರ್ಕಾರ ಇವರ ಮೇಲೆ ತೆರಿಗೆ ಹೆಚ್ಚಿಸುವ ಮನಸ್ಸು ಮಾಡುವುದಿಲ್ಲ. ಬದಲಿಗೆ ಇಂದು ಮಂಡಿಸಲಾಗಿರುವ ಬಜೆಟ್‌ನಲ್ಲಿ ಈ ಕುಬೇರರ ಸಮೂಹದ ಕಾರ್ಪೊರೇಟ್ ವಲಯದ ಮೇಲೆ ವಿಧಿಸಲಾಗಿರುವ ಕಾರ್ಪೊರೆಟ್ ಸರ್ಚಾರ್ಜ್ ತೆರಿಗೆಯನ್ನು ಶೇ.12ರಿಂದ ಶೇ.ಏಳಕ್ಕೆ ಇಳಿಸಲಾಗಿದೆ! ದಶಕಗಳಿಂದ ಮಾಡಿಟ್ಟಿದ್ದ ರೇಲ್ವೆ, ಬಂದರು, ವಿಮಾನಯಾನ ಸೇರಿದಂತೆ ಸಾರ್ವಜನಿಕ ವಲಯದ ಆಸ್ತಿಪಾಸ್ತಿಗಳನ್ನು ಅಗ್ಗದ ಬೆಲೆಗೆ ಕಾರ್ಪೊರೇಟುಗಳಿಗೆ ಮಾರಾಟ ಮಾಡಲಾಗುತ್ತಿದೆ.

ಇದು ಶೇ.80ರಷ್ಟು ಬಹುಜನ ಭಾರತದ ಅಣಕವಲ್ಲದೆ ಇನ್ನೇನು?

ಮುಕ್ಕಾಲುಪಾಲು ದೇಶವಾಸಿಗಳ ಬದುಕುಗಳು ನೋಟು ರದ್ದು, ಜಿ.ಎಸ್.ಟಿ., ಕೋವಿಡ್‌ನ ಕ್ರೂರ ಆಘಾತದಡಿ ಜರ್ಝರಿತವಾಗಿವೆ. ಆದರೆ ದೇಶದಲ್ಲಿ ಅಮೃತಕಾಲ ನಡೆಯುತ್ತಿದೆ… ಮುಂದಿನ 25 ವರ್ಷಗಳ ಕಾಲವೂ ಹಾಲಿ ಬಜೆಟ್ಟಿನ ದೂರದರ್ಶಿತ್ವ ವಿಸ್ತರಿಸಲಿದೆ ಎಂದು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರೊಟ್ಟಿ ಸಿಗದಿದ್ದರೆ ಕೇಕನ್ನು ತಿನ್ನಿ ಎಂದಿದ್ದ ಫ್ರಾನ್ಸಿನ ರಾಜಕುವರಿಯಂತೆ ಥೇಟು.


ಇದನ್ನೂ ಓದಿ: ಬಜೆಟ್‌ 2022-23: ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ವಂಚನೆ; ಖಾಸಗಿ ಪರ ಧೋರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...