Homeಕರ್ನಾಟಕಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ಮೈಸೂರು ವಿವಿಯ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ‘ದೀಪು ಬುದ್ಧೆ’ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರು ತಮ್ಮ ಜೀವನದ ಹೋರಾಟವನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ಲಿಂಗತ್ವ ಸಂಖ್ಯಾತ ಮಹಿಳೆ ಎಂಬುದು ಹೊರ ಜಗತ್ತಿಗೆ ತಿಳಿದ ಬಳಿಕ ಸಮಾಜ ನೋಡುವ ದೃಷ್ಟಿಕೋನ ಬದಲಾಯಿತು. ಆ ವೇಳೆಗಾಗಲೇ ಡಿಗ್ರಿ ಮುಗಿಸಿದ್ದ ನಾನು ಮಧ್ಯದಲ್ಲೇ ಓದು ನಿಲ್ಲಿಸಿದೆ. ನನ್ನನ್ನು ಮತ್ತೆ ಓದಿಗೆ ಪ್ರೇರೇಪಿಸಿದ್ದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿಚಾರಗಳು…”

ಹೀಗೆ ತಮ್ಮ ಬದುಕಿನ ಬಗ್ಗೆ ಹೇಳುತ್ತಾ ಹೋಗುತ್ತಾರೆ ಮೈಸೂರು ವಿವಿಯ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಪಿಎಚ್‌ಡಿ ಮಾಡುತ್ತಿರುವ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ದೀಪು ಬುದ್ಧೆ.

ಚಾಮರಾಜನಗರ ಜಿಲ್ಲೆ ಸಂತೇಮಾರಳ್ಳಿ ಹೋಬಳಿ ವ್ಯಾಪ್ತಿಯ ಹೆಗ್ಗವಾಡಿಪುರ ಗ್ರಾಮದವರು ದೀಪು ಬುದ್ಧೆ. ಮೂಲ ಹೆಸರು ಗುರುಸ್ವಾಮಿ. ಏಳು, ಎಂಟನೇ ತರಗತಿಯ ವೇಳೆಗೆ ತನ್ನೊಳಗಿನ ಹೆಣ್ತತನಗಳ ಭಾವನೆಗಳನ್ನು ಅರ್ಥಮಾಡಿಕೊಂಡ ಅವರು, ಪಿಯುಸಿ ಮುಗಿಯುವವರೆಗೂ ತನ್ನ ಅಸ್ಮಿತೆಯ ಬಗ್ಗೆ ಹೇಳಿಕೊಳ್ಳಲಾಗದೆ ಒದ್ದಾಡಿದರು.

ಮನೆಯಲ್ಲಿ ಐದು ಜನ ಮಕ್ಕಳು. ನಾಲ್ಕು ಜನ ಹೆಣ್ಣು ಮಕ್ಕಳು. ಐದನೆಯವರು ಗುರುಸ್ವಾಮಿ. ಮನೆಯಲ್ಲಿ ಗಂಡು ಮಕ್ಕಳು ಇರಲಿಲ್ಲ. ಗುರುಸ್ವಾಮಿಯವರನ್ನು ಎಲ್ಲರೂ ಪ್ರೀತಿಯಿಂದ ಸಾಕಿದರು. ಈಗಲೂ ಅವರನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ.

“ನಾನು ಪಿಯುಸಿ ಓದುವವರೆಗೂ ಆ ಭಾವನೆಗಳನ್ನು ಎಲ್ಲಿಯೂ ತೋರಿಸಿಕೊಳ್ಳದಂತೆ ಯತ್ನಿಸಿದೆ. ಆದರೆ ನನ್ನ ಭಾವನೆಗಳಿಗೆ ಪುಷ್ಟೀಕರಣ ನೀಡಬೇಕು ಎಂದು ಪಿಯುಸಿ ಮುಗಿದ ಮೇಲೆ ನನ್ನ ಸಮುದಾಯವನ್ನು ಸೇರಿಕೊಂಡೆ. ಸ್ವಲ್ಪ ದಿನಗಳ ಕಾಲ ಮನೆಯವರಿಗೂ ಗೊತ್ತಿರಲಿಲ್ಲ. ಗೊತ್ತಿಲ್ಲದ ರೀತಿಯಲ್ಲಿ ಕಾಪಾಡಿಕೊಂಡು ಹೋಗುತ್ತಿದ್ದೆ. ಆಮೇಲೆ ತದನಂತರದ ಗೊತ್ತಾಯಿತು” ಎನ್ನುತ್ತಾರೆ ದೀಪು ಬುದ್ಧೆ.

ತಮ್ಮ ಬದುಕಿನ ಪಯಣವನ್ನು ನಾನುಗೌರಿ.ಕಾಂ ಜೊತೆ ಬಿಚ್ಚಿಟ್ಟ ಅವರು, “ಪದವಿ ವೇಳೆಗೆ ನಾನು ಟ್ರಾನ್ಸ್‌ಜೆಂಡರ್‌ ಕಮ್ಯುನಿಟಿ ಜೊತೆಯಲ್ಲಿ ಇದ್ದೆ. ಟ್ರಾನ್ಸ್‌ಜೆಂಡರ್‌ ಆಗಿದ್ದರೂ ಅಧಿಕೃತ ದಾಖಲೆಗಳಲ್ಲಿ ಎಲ್ಲಿಯೂ ಅದನ್ನು ನಮೂದಿಸಿರಲಿಲ್ಲ. ‘ಪುರುಷ’ ಎಂದು ಹೇಳಿಕೊಂಡೇ ನಾನು 2015ರಲ್ಲಿ ಡಿಗ್ರಿ ಮುಗಿಸಿದೆ. ತದನಂತರ ನಾನು ಪರಿವರ್ತನಾ ಮಹಿಳೆ ಎಂಬುದು ಎಲ್ಲರಿಗೂ ಗೊತ್ತಾಯಿತು. ಕಾಲೇಜಿನಿಂದ ಹಿಡಿದು ಊರಿನವರೆಗೂ ನನ್ನ ಬಗ್ಗೆ ಸುದ್ದಿ ಹಬ್ಬಿತು. ನನಗೆ ಅವಮಾನಗಳು, ತೊಂದರೆಗಳು ಶುರುವಾದವು. ಹೀಗಾಗಿ ಶಿಕ್ಷಣವನ್ನು ನಿಲ್ಲಿಸಿಬಿಟ್ಟೆ” ಎಂದರು.

“ಚಾಮರಾಜನಗರದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆಯಾದ ‘ಸಮತ ಸೊಸೈಟಿ’ ಇದೆ. ಅದರಲ್ಲಿ ಒಂದು ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದೆ. ನಾನು ಮತ್ತೆ ಓದಬೇಕೆಂದು ನಿರ್ಧರಿಸಿದೆ. ನನ್ನ ಓದಿಗೆ ಮತ್ತೆ ಪ್ರೇರಣೆಯಾಗಿದ್ದು ಡಾ.ಬಿ.ಆರ್‌.ಅಂಬೇಡ್ಕರ್‌. ಅವರ ವಿಚಾರಗಳನ್ನು ಓದುತ್ತಾ ಸ್ಪೂರ್ತಿ ಪಡೆದೆ. 2018ರಲ್ಲಿ ಶಿಕ್ಷಣಕ್ಕೆ ಮರಳಿದೆ. ನನಗೆ ಓದಲಿಕ್ಕೆ ಹಣಕಾಸು ವ್ಯವಸ್ಥೆ ಮಾಡಿ, ನನಗೊಂದು ಉದ್ಯೋಗ ನೀಡಿದ್ದು ನಮ್ಮ ಸಮತ ಸೊಸೈಟಿ” ಎಂದು ಸಂತಸ ವ್ಯಕ್ತಪಡಿಸುತ್ತಾರೆ ದೀಪು.

“ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರಕ್ಕೆ ಪ್ರವೇಶಾತಿಗಾಗಿ ಬಂದೆ. ಕೇಂದ್ರದ ಸಂಯೋಜನಾಧಿಕಾರಿಯಾಗಿ ಡಾ.ಎಸ್.ನರೇಂದ್ರಕುಮಾರ್‌ ಇದ್ದರು. ಅವರಲ್ಲಿ ವಿಚಾರಿಸಿದಾಗ ನನಗೆ ಅವಕಾಶ ನೀಡುವುದಾಗಿ ಹೇಳಿದರು. ಪ್ರವೇಶಾತಿ ಅರ್ಜಿ ಬರೆಯುವಾಗ ಮತ್ತೊಂದು ಸಮಸ್ಯೆ ಎದುರಾಯಿತು. ಪುರುಷ ಮತ್ತು ಮಹಿಳೆ ಎಂಬ ಎರಡು ಕಾಲಂಗಳು ಮಾತ್ರ ಇದ್ದವು. ಅಲ್ಲಿ ಟ್ರಾನ್ಸ್‌ಜೆಂಡರ್‌ (ಟಿಜೆ) ಎಂದು ಬರೆದು ನಾನೇ ಟಿಕ್‌ ಹಾಕಿದೆ” ಎಂದು ತಮ್ಮ ಶೈಕ್ಷಣಿಕ ಬದುಕಿನ ಮತ್ತೊಂದು ಹೋರಾಟವನ್ನು ನೆನೆದರು.

“ಅಂಬೇಡ್ಕರ್‌ ಅಧ್ಯಯನ ಸಂಸ್ಥೆಯಲ್ಲಿ ಒಳ್ಳೆಯ ಪ್ರೋತ್ಸಾಹ ಸಿಕ್ಕಿತು. ಸ್ನೇಹಿತರು, ಬೋಧಕರೆಲ್ಲ ಸಪೋರ್ಟ್ ಮಾಡಿದರು. ನನಗೆ ಮತ್ತೆ ಸಮಸ್ಯೆಯಾಗಿದ್ದು ಫಸ್ಟ್‌ ಸೆಮ್ ಪರೀಕ್ಷೆ ಬರೆಯಲು ಎಕ್ಸಾಂ ಅರ್ಜಿ ಬರೆಯುವಾಗ. ಅರ್ಜಿಯಲ್ಲಿ ಪುರುಷ ಮತ್ತು ಮಹಿಳೆ ಎಂಬ ಎರಡು ಕಾಲಂಗಳಷ್ಟೇ ಇದ್ದವು. ಈಗ ನನ್ನ ಪಿಎಚ್‌.ಡಿ. ಮಾರ್ಗದರ್ಶಕರಾಗಿರುವ ಪ್ರೊ.ಜೆ.ಸೋಮಶೇಖರ್‌ ಅವರು ಅಂದು ಮೈಸೂರು ವಿವಿಯ ಪರೀಕ್ಷಾಂಗ ಕುಲಸಚಿವರಾಗಿದ್ದರು. ಅವರಿಗೆ ನಮ್ಮ ತೊಂದರೆಯನ್ನು ತಿಳಿಸಿದೆ. ಅರ್ಜಿಯಲ್ಲಿ ಟ್ರಾನ್ಸ್‌ಜೆಂಡರ್ ಕಾಲಂ ಸೇರಿಸಲು ಅವರು ಕ್ರಮವಹಿಸಿದರು” ಎಂದು ಹೇಳಿದರು.

“ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿಯೇ ಓದು ಮುಂದುವರಿಸಬೇಕೆಂದು ನಿರ್ಧರಿಸಿದೆ. ಎಂಟ್ರೆನ್ಸ್‌ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಿದೆ. ನಮ್ಮ ಕೇಂದ್ರದಲ್ಲಿ ಹೆಚ್ಚು ಅಂಕಗಳನ್ನು ಪಡೆದು ರ್‍ಯಾಂಕ್‌ ಕೂಡ ಪಡೆದೆ. ಶೇ. 82ರಷ್ಟು ಅಂಕ ಪಡೆದಿದ್ದು ನನಗೆ ಸ್ಪೂರ್ತಿ ನೀಡಿತು. ಪಿಎಚ್‌ಡಿ ಪ್ರವೇಶಾತಿ ಪರೀಕ್ಷೆ ಬರೆದು ಅರ್ಹತೆ ಗಳಿಸಿದೆ” ಎಂದು ಮಾಹಿತಿ ನೀಡಿದರು.

“ಅಂಬೇಡ್ಕರ್‌ ಅಧ್ಯಯನ ಕೇಂದ್ರಕ್ಕೆ ಬಂದಿರುವ ಪ್ರೊ.ಜೆ.ಸೋಮಶೇಖರ್‌ ಅವರು ಮಾರ್ಗದರ್ಶಕರಾದರು. ‘ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಲಿಂಗತ್ವ ಅಲ್ಪಸಂಖ್ಯಾತರು ಜೀವನ ಮತ್ತು ಹೋರಾಟಗಳು: ಒಂದು ವಿಮರ್ಶಾತ್ಮಕ ಅಧ್ಯಯನ’ ಎಂಬ ವಿಷಯವನ್ನು ಆಯ್ದುಕೊಂಡಿದ್ದೇನೆ. ಒಂದು ಸಮುದಾಯದ ವ್ಯಕ್ತಿಯಾಗಿ ಇಲ್ಲಿನ ಜೀವನವನ್ನು ಹೇಗೆ ನೋಡಬಹುದು, ಹೋರಾಟಗಳು ಹೇಗಿವೆ, ಸರ್ಕಾರದಲ್ಲಿ, ಸಮಾಜದಲ್ಲಿ ಹಾಗೂ ಸಮುದಾಯದಲ್ಲಿ ಏನೆಲ್ಲ ಸಮಸ್ಯೆಗಳಿವೆ, ಯಾಕೆ ಸರ್ಕಾರ ನಮ್ಮ ಕಡೆ ಗಮನ ಹರಿಸುವುದಿಲ್ಲ, ಸಮಾಜದ ವ್ಯಕ್ತಿಗಳು ನಮ್ಮನ್ನು ಯಾವ ರೀತಿ ತುಚ್ಛವಾಗಿ ಕಾಣುತ್ತಾರೆ ಎಂಬ ವಿಚಾರಗಳನ್ನು ತಿಳಿಸಲು ಈ ವಿಷಯವನ್ನು ಆಯ್ದುಕೊಂಡೆ. ಟ್ರಾನ್ಸ್‌ಜೆಂಡರ್‌ ಸಮುದಾಯದ ಹೊರಗಿನ ವ್ಯಕ್ತಿಗಳು ನಮ್ಮ ಕಷ್ಟಗಳ ಕುರಿತು ಪಿಎಚ್‌.ಡಿ ಮಾಡಿದ್ದಾರೆ. ಆದರೆ ಅವರು ನೋಡುವ ದೃಷ್ಟಿಕೋನ ಬೇರೆ ಇರುತ್ತದೆ, ಸಮುದಾಯದ ವ್ಯಕ್ತಿಯಾಗಿ ನನ್ನ ದೃಷ್ಟಿಕೋನ ಬೇರೆ ಇರುತ್ತದೆ. ಹೀಗಾಗಿ ನನ್ನದೇ ಸಮುದಾಯದ ವಿಷಯವನ್ನು ನಾನು ಆಯ್ದುಕೊಂಡೆ” ಎಂದರು.

“ಮೈಸೂರು ವಿವಿಯಲ್ಲಿ ಪಿಎಚ್‌ಡಿ ಮಾಡುತ್ತಿರುವ ಮೊದಲ ಟ್ರಾನ್ಸ್‌ಜೆಂಡರ್‌‌ ಮಹಿಳೆ” ಎಂಬುದಾಗಿಯೂ  ‘ದೀಪು ಬುದ್ಧೆ’ ಗುರುತಿಸಿಕೊಂಡಿದ್ದಾರೆ. ಆದರೆ ತಮ್ಮ ಹಳೆಯ ಹೆಸರಿನಲ್ಲಿರುವ ಸರ್ಟಿಫಿಕೇಟ್‌ಗಳಿಂದಾಗಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ದಾಖಲೆಗಳಲ್ಲಿ ತಮ್ಮ ಹೆಸರನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ.

“ಟ್ರಾನ್ಸ್‌ಜೆಂಡರ್‌ ಎಂಬುದನ್ನು ಎಲ್ಲ ಕಡೆ ನಮೂದಿಸುತ್ತಿದ್ದೇನೆ. ‘ದೀಪ ಬುದ್ಧೆ’ ಎಂಬುದು ಕೆಲವು ದಾಖಲೆಗಳಲ್ಲಿ ಮಾತ್ರ ಇದೆ. ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಹೈಯರ್‌ ಎಜುಕೇಷನ್‌ವರೆಗಿನ ಸರ್ಟಿಫಿಕೇಟ್‌ಗಳವರೆಗೂ ಹೆಸರಿನ ಸಮಸ್ಯೆಯಾಗಿದೆ. ಯಾಕೆಂದರೆ ಮೂಲ ಹೆಸರೇ ಅವುಗಳಲ್ಲಿ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ಬದಲಾಯಿಸುವ ಪ್ರಯತ್ನಗಳು ನಡೆದಿವೆ” ಎಂದು ತಿಳಿಸಿದರು.

ದೀಪು ಬುದ್ಧೆಯವರ ಉನ್ನತ ವ್ಯಾಸಂಗದ ಬಗ್ಗೆ ‘ನಾನುಗೌರಿ.ಕಾಂ’ ಜೊತೆ ಸಂತಸ ವ್ಯಕ್ತಪಡಿಸಿದ ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿಯವರು, “ಈ ಹಿಂದೆಯೂ ಕೆಲವು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸಂಶೋಧನೆ ನಡೆಸಿದ್ದಾರೆ. ಆದರೆ ಅನೇಕರು ತಮ್ಮ ಐಡೆಂಟಿಟಿಯನ್ನು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ದೀಪು ಅವರು ತಮ್ಮ ಐಡೆಂಟಿಟಿಯನ್ನು ಹೇಳಿಕೊಂಡಿದ್ದಾರೆ” ಎಂದು ಪ್ರೋತ್ಸಾಹದ ನುಡಿಗಳನ್ನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...