Homeಮುಖಪುಟಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳದ ತಿರುವಾಂಕೂರು ದೇವಸ್ಥಾನ ಮಂಡಳಿ ನಕಲಿ ರಶೀದಿ ಸಲ್ಲಿಸುವ ಮೂಲಕ ದೊಡ್ಡ ಪ್ರಮಾಣದ ಭ್ರಷ್ಟಾಚಾರವಾಗಿರುವುದರಿಂದ ದೇವಸ್ಥಾನದ ವಿಚಕ್ಷಣಾ ದಳ ರದ್ದುಪಡಿಸಿರುವ ಕುರಿತು ಮಾಧ್ಯಮ ವರದಿಯನ್ನು ಆಧರಿಸಿ ಮಂಗಳವಾರ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ದೇವಸ್ಥಾನ ಮಂಡಳಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹಿರಿಯ ಅಧಿಕಾರಿಗಳು ದೇವಸ್ಥಾನದ ವಿಚಕ್ಷಣಾ ದಳವನ್ನು ರದ್ದುಪಡಿಸಿದ್ದಾರೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಲೆಯಾಳಂನ ದೈನಿಕ ಮಾತೃಭೂಮಿ ಮಾಡಿದ ವರದಿಯನ್ನು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಂಭೀರವಾಗಿ ಪರಿಗಣಿಸಿದೆ.

ಶಬರಿಮಲೆಯ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ನಕಲಿ ರಶೀದಿಗಳು ಮತ್ತು ಶೌಚಗೃಹ ನಿರ್ಮಿಸುವ ವಿಚಾರದಲ್ಲಿ ಎಸಗಿರುವ ಅಕ್ರಮಗಳು ಬೆಳಕಿಗೆ ಬಂದರೆ ಸಮಸ್ಯೆಯಾಗುತ್ತದೆ, ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ವಿಚಕ್ಷಣಾ ದಳ ರದ್ದುಪಡಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ದೇವಸ್ಥಾನದ ವಿಚಕ್ಷಣಾ ದಳದಿಂದ ಇಬ್ಬರು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ತೆಗೆದುಹಾಕಲಾಯಿತು. ಶೀಘ್ರದಲ್ಲೇ ನಿವೃತ್ತರಾಗಲಿರುವ ಪೊಲೀಸ್ ವರಿಷ್ಠಾಧಿಕಾರಿಯನ್ನಷ್ಟೇ ಉಳಿಸಿಕೊಂಡು ಉಳಿದವರನ್ನು ಪೊಲೀಸ್ ಇಲಾಖೆಗೆ ಕಳುಹಿಸಲಾಗಿದೆ. ಅತಿಥಿಗೃಹದಲ್ಲಿ ನೆಲೆಸಿದ್ದ ಗಣ್ಯರು ಮತ್ತು ಉನ್ನತಮಟ್ಟದ ಅಧಿಕಾರಿಗಳಿಗೆ ಪೂರೈಸಲಾದ ಆಹಾರಕ್ಕೆ ಸಂಬಂಧಿಸಿದಂತೆ ಅಪಾರ ಖರ್ಚು ಮಾಡಿರುವ ರಶೀದಿಗಳು ವಿಚಕ್ಷಣಾ ದಳಕ್ಕೆ ಸಿಕ್ಕ ಬಗ್ಗೆ ವರದಿಯಲ್ಲಿ ನೀಡಿದ ಮಾಹಿತಿಯನ್ನು ಪೀಠ ಗಣನೆಗೆ ತೆಗೆದುಕೊಂಡಿದೆ.

ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ತಿರುವಾಂಕೂರು ದೇವಸ್ವಂ ಮಂಡಳಿಯು ಈ ವಿಷಯವನ್ನು ರಾಜ್ಯ ವಿಜಿಲೆನ್ಸ್‌ಗೆ ರವಾನಿಸಿತು. ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದಿಂದ ಅಪರಾಧವನ್ನು ಐಪಿಸಿ ಸೆಕ್ಷನ್ 420, 468 ಮತ್ತು 471 ಮತ್ತು ಸೆಕ್ಷನ್ 13(2) ಅಡಿ ದಾಖಲಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1) (ಎ) ನಡಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಜಿಲೆನ್ಸ್ ವಿಭಾಗವು ಹಲವು ಅವ್ಯವಹಾರಗಳ ನಿದರ್ಶನಗಳನ್ನು ಪತ್ತೆಹಚ್ಚಿದೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರಸ್ತುತ, ಮಂಡಳಿಯ ವಿಚಕ್ಷಣ ದಳದ ಮುಖ್ಯ ವಿಚಕ್ಷಣ ದಳ ಅಧಿಕಾರಿ ಮತ್ತು ಸಬ್ ಇನ್ಸ್‌ಪೆಕ್ಟರ್ ಕೇಡರ್‌ನಲ್ಲಿ ಒಬ್ಬ ಅಧಿಕಾರಿಯನ್ನು ಒಳಗೊಂಡಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರು ಸೂಚಿಸಿದ್ದಾರೆ. ಶಬರಿಮಲೆಯ ವಿಶೇಷ ಆಯುಕ್ತರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ದೇವಸ್ಥಾನ ವಿಚಕ್ಷಣಾ ತನಿಖೆಯಿಂದ ಹಿರಿಯ ಅಧಿಕಾರಿಗಳಿಗೆ ಎದುರಾಗಬಹುದಾದ ಸಂಕಷ್ಟದಿಂದ ಅಳುಕುಗೊಂಡು ರಾಜ್ಯ ವಿಚಕ್ಷಣಾ ದಳಕ್ಕೆ ಪ್ರಕರಣವನ್ನು ವಹಿಸಲಾಗಿದೆ ಎಂಬುದನ್ನು ಪೀಠವು ಗಂಭೀರವಾಗಿ ಪರಿಗಣಿಸಿದೆ. ಫೆಬ್ರವರಿ 3ಕ್ಕೆ ವಿಚಾರಣೆ ಮುಂದೂಡಲಾಗಿದೆ.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...