Homeಮುಖಪುಟವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

ವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

- Advertisement -
- Advertisement -

ಭಾರತದ ಹೆಸರಾಂತ ಪುಸ್ತಕ ಪ್ರಕಾಶನ ಕಂಪನಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಮುಚ್ಚುವುದಾಗಿ ಅಮೆಜಾನ್ ಪ್ರಕಟಿಸಿದ್ದು, ಈ ನಿರ್ಧಾರವನ್ನು ಕಂಪನಿಯ ಹಿರಿಯ ಉದ್ಯೋಗಿಗಳಿಗೆ ಸಿಇಒ ಗೌತಮ್ ಪದ್ಮನಾಭನ್ ಮಂಗಳವಾರ ತಿಳಿಸಿದ್ದಾರೆ.

ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟ್ರೆಂಟ್ ಲಿಮಿಟೆಡ್‌ನಿಂದ ವೆಸ್ಟ್‌ಲ್ಯಾಂಡ್ ಬುಕ್ಸ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರ ಅಮೆಜಾನ್‌ ಪ್ರಕಟಿಸಿದ ಈ ತೀರ್ಮಾನ ಆಘಾತಕಾರಿ ಬೆಳವಣಿಗೆ ಎಂಬ ಅಭಿಪ್ರಾಯ ಪುಸ್ತಕ ಪ್ರೇಮಿಗಳು ಹಾಗೂ ಬರಹಗಾರರ ವಲಯದಲ್ಲಿ ವ್ಯಕ್ತವಾಗಿದೆ.

ಅಮೆಜಾನ್‌ 2016ರಲ್ಲಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಖರೀದಿಸಿದಾಗ ಜಾಗತಿಕವಾಗಿ ನಡೆಸುತ್ತಿರುವ ತನ್ನ ಅಮೆಜಾನ್‌ ಪಬ್ಲಿಷಿಂಗ್‌ನ ಅಡಿ ಇ-ಕಾಮರ್ಸ್ ಮತ್ತು ಇಂಟರ್ನೆಟ್ ಸೇವೆಯ ಮೂಲಕ ಇದರ ಪುಸ್ತಕ ಪ್ರಕಾಶನ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿತ್ತು.

ಅಮೆಜಾನ್, ವೆಸ್ಟ್‌ಲ್ಯಾಂಡ್‌ ಬುಕ್‌ ಪಬ್ಲಿಕೇಷನ್‌ ಅನ್ನು ಬೇರೆಯವರಿಗೆ ಮಾರಾಟ ಮಾಡದೇ ಮುಚ್ಚಲು ಉದ್ದೇಶಿಸಿರುವ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಅಲ್ಲದೇ ವೆಸ್ಟ್‌ಲ್ಯಾಂಡ್ ಬುಕ್ಸ್‌ನ ಉದ್ಯೋಗಿಗಳನ್ನು ಅಮೆಜಾನ್ ಸಂಸ್ಥೆಯ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಭಾರತ ಮೂಲದ ಪ್ರಕಾಶನ ಸಂಸ್ಥೆಯಾದ ವೆಸ್ಟ್‌ಲ್ಯಾಂಡ್‌ ಪಬ್ಲಿಕೇಶನ್‌ ರೂ. 30 ಕೋಟಿ ವಹಿವಾಟು ಹೊಂದಿತ್ತು. ಅಲ್ಲದೇ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಖ್ಯಾತ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರಾಂಡಮ್ ಹೌಸ್, ಹಾರ್ಪರ್‌ ಕಾಲಿನ್ಸ್ ಮತ್ತು ಹ್ಯಾಚೆಟ್ ಗ್ರೂಪ್‌ಗಳಿಗಿಂತ ವಿಭಿನ್ನವೆಂದು ಗುರ್ತಿಸಿಕೊಂಡಿತ್ತು.

ವೆಸ್ಟ್‌ಲ್ಯಾಂಡ್‌ ಪ್ರಕಾಶನ ಚೇತನ್ ಭಗತ್ ಮತ್ತು ಅಮಿಶ್ ತ್ರಿಪಾಠಿಯವರಂಥ ಹಲವು ಖ್ಯಾತ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಈ ಲೇಖಕರ ಸ್ಥಳೀಯ ಭಾಷೆಯಲ್ಲಿ ಮುದ್ರಣಗೊಂಡ ಪುಸ್ತಕಗಳು ಅತಿ ಹೆಚ್ಚು ಮಾರಾಟವಾದ ನಿದರ್ಶನಗಳಿವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದ ಅಧ್ಯಯನ ಆಧಾರಿತ ಕೃತಿಗಳ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆ ಮೇಲೆ ರಾಜಕೀಯ ಒತ್ತಡ ಸೃಷ್ಟಿಯಾಗಲು ಕಾರಣವಿರಬಹುದು ಎಂಬ ವಾದವು ಕೇಳಿಬಂದಿದೆ.

ಕಂಪ್ಯೂಟರ್‌ ವಿಜ್ಞಾನಿ ಅರವಿಂದ್‌ ನಾರಾಯಣ್‌ ಅವರ ಇಂಡಿಯಾಸ್‌ ಅನ್‌ ಡಿಕ್ಲೇರ್ಡ್‌ ಎಮೆರ್ಜೆನ್ಸಿ, ಆಕಾರ್‌ ಪಟೇಲ್‌ ಅವರ ಅವರ್‌ ಹಿಂದು ರಾಷ್ಟ್ರ, ಪ್ರೈಸ್‌ ಆಫ್‌ ದಿ ಮೋದಿ ಇಯರ್ಸ್‌, ಜೋಸಿ ಜೋಸೆಫ್‌ ಅವರ ದಿ ಸೈಲೆಂಟ್‌ ಕೂಪ್‌, ಕ್ರಿಸ್ಟೋಫ್‌ ಜಾಫರ್‌ ಲಾಟ್‌ ಅವರ ಮೋದೀಸ್‌ ಇಂಡಿಯಾ ಕೃತಿಗಳು ಪ್ರಸ್ತುತ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿಲುವುಗಳನ್ನು ಟೀಕಿಸಿದ್ದು ಪರೋಕ್ಷವಾಗಿ ಅಮೆಜಾನ್‌ ಈ ನಿರ್ಧಾರಕ್ಕೆ ಬರಲು ಕಾರಣವಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆಯೊಂದಿಗೆ ಉತ್ತಮ ಸ್ನೇಹವಿಟ್ಟುಕೊಂಡಿದ್ದ ಹಲವು ಲೇಖಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಲೇಖಕ ಆಕಾರ್‌ ಪಟೇಲ್‌ ಎಂಟುಎಂ ಮೀಡಿಯಾದೊಂದಿಗೆ ಮಾತನಾಡಿ, “ಹೌದು. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ ಮುಚ್ಚುತ್ತಿರುವುದು ನಿಜ. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ಗೆ ನಾನು ಪುಸ್ತಕವನ್ನು ಬರೆದಿದ್ದೇನೆ. ಸಂಸ್ಥೆಯೊಂದಿಗೆ ಉತ್ತಮ ಒಡನಾಟವಿತ್ತು. ಆದರೆ ಯಾವ ಕಾರಣಕ್ಕೆ ಪಬ್ಲಿಕೇಷನ್‌ ಅನ್ನು ಮುಚ್ಚುತ್ತಿದ್ದಾರೆಂಬುದು ನನಗೆ ತಿಳಿಸಿಲ್ಲ. ಆದರೆ ಸೂಕ್ತ ಕಾರಣಕ್ಕೆ ಮುಚ್ಚುತ್ತಿದ್ದಾರೆಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.

ಡೆಸ್ಪೈಟ್‌ ದ ಸ್ಟೇಟ್‌ ಪುಸ್ತಕದ ಲೇಖಕ ಎಂ.ರಾಜಶೇಖರ್ ತಮ್ಮ ಟ್ವೀಟ್‌ನಲ್ಲಿ “ವ್ಯವಹಾರ ಲಾಭದಾಯಕವಾಗಿರದಿದ್ದರೆ ಇದಕ್ಕೆ ಬೇಕಿರುವ ಇತರ ಮಾರ್ಗಗಳನ್ನು ಕಂಡುಕೊಳ್ಳಬಹುದಿತ್ತು. ಅಥವಾ ಖರೀದಿದಾರರನ್ನು ಹುಡುಕಬಹುದಿತ್ತು. ಹೀಗೆ ವೆಸ್ಟ್‌ಲ್ಯಾಂಡ್‌ನ್ನು ಮುಚ್ಚುತ್ತಿರುವುದು ಸರಿಯಲ್ಲ. ಬೇಸರದ ಸಂಗತಿಯಾಗಿದ್ದು, ಒಂದು ರೀತಿಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಮತ್ತು ಹಲವು ಯೋಜನೆಗಳನ್ನು ಹಾಳು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಶೋನಿ ಎಂಬ ಲೇಖಕಿ, “ವೆಸ್ಟ್‌ಲ್ಯಾಂಡ್‌ ಬಂದ್‌ ವಿಚಾರ ಬೇಸರದ ಸಂಗತಿ. ಇದು ಭಾರತದ ಪ್ರಕಾಶನ ಕ್ಷೇತ್ರಕ್ಕಾಗುತ್ತಿರುವ ದೊಡ್ಡ ಹಾನಿ. ನನ್ನ 6 ಪುಸ್ತಕಗಳನ್ನು ಸಂಸ್ಥೆಯೊಂದಿಗೆ ಹೊರತರುವ ನಿರೀಕ್ಷೆಯಲ್ಲಿದ್ದೆ. ಆದರೆ ವೆಸ್ಟ್ ಲ್ಯಾಂಡ್ ತಂಡದೊಂದಿಗೆ ಕೆಲವು ಅದ್ಭುತ ನೆನಪುಗಳಿವೆ. ಅವರು ಬೇರೆ ಸಂಸ್ಥೆಗೆ ಹೋಗುವುದನ್ನು ಊಹಿಸಲು ಕಷ್ಟವಾಗುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮನು ಪಿಳ್ಳೈ ಎಂಬ ಲೇಖಕರು “ವೆಸ್ಟ್‌ಲ್ಯಾಂಡ್‌ ಹೊರತಂದ ಉತ್ತಮ ಪುಸ್ತಕಗಳ ದೊಡ್ಡ ಪಟ್ಟಿಯೇ ಇದ್ದು, ಆ ತಂಡದೊಂದಿಗೆ ಕೆಲಸ ಮಾಡಲು ಸಂತಸವಾಗುತ್ತಿತ್ತು. ಇಂಥ ಯಶಸ್ವಿ ಸಂಸ್ಥೆಯನ್ನು ಮುಚ್ಚುತ್ತಿರುವ ನಿಜವಾದ ಕಾರಣಗಳ ಹಿಂದಿರುವ ಸತ್ಯಗಳು ದೇವರಿಗಷ್ಟೇ ತಿಳಿದಿರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ಇಂಗ್ಲಿಷ್‌ ಪ್ರಕಾಶನ ಸಂಸ್ಥೆಗಳ ಪೈಕಿ ಇದೇ ಮೊದಲ ಬಾರಿಗೆ ಮಾರಾಟ ಮಾಡದೇ ಶಾಶ್ವತವಾಗಿ ಮುಚ್ಚುತ್ತಿರುವುದು ಅಚ್ಚರಿ ಮೂಡಿಸಿದೆ. ಹಲವು ಜನಪ್ರಿಯ, ಮೆಚ್ಚುಗೆ ಪಡೆದ, ವಿಮರ್ಶಾತ್ಮಕ ಬರಹಗಳನ್ನೊಳಗೊಂಡ, ಗೌರವ ಮತ್ತು ಪ್ರಶಸ್ತಿ ಪಡೆದ ಕಾದಂಬರಿಗಳು, ಸಾಹಿತ್ಯ, ರಾಜಕೀಯ, ಸಮಾಜ, ಕಲೆ ಆಧಾರಿತ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿಗೆ ಸಂಸ್ಥೆಗಿದೆ. ಅಮೆಜಾನ್‌ನ ದಿಢೀರ್‌ ನಿರ್ಧಾರವನ್ನು ಪುಸ್ತಕ ಲೋಕದ ಓದುಗ ಮತ್ತು ಲೇಖಕ ವರ್ಗ ಅರಗಿಸಿಕೊಳ್ಳಲು ಯತ್ನಿಸುತ್ತಿದೆ.

– ಅನಿತಾ


ಇದನ್ನೂ ಓದಿರಿ: ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...