Homeಮುಖಪುಟವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

ವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

- Advertisement -
- Advertisement -

ಭಾರತದ ಹೆಸರಾಂತ ಪುಸ್ತಕ ಪ್ರಕಾಶನ ಕಂಪನಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಮುಚ್ಚುವುದಾಗಿ ಅಮೆಜಾನ್ ಪ್ರಕಟಿಸಿದ್ದು, ಈ ನಿರ್ಧಾರವನ್ನು ಕಂಪನಿಯ ಹಿರಿಯ ಉದ್ಯೋಗಿಗಳಿಗೆ ಸಿಇಒ ಗೌತಮ್ ಪದ್ಮನಾಭನ್ ಮಂಗಳವಾರ ತಿಳಿಸಿದ್ದಾರೆ.

ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟ್ರೆಂಟ್ ಲಿಮಿಟೆಡ್‌ನಿಂದ ವೆಸ್ಟ್‌ಲ್ಯಾಂಡ್ ಬುಕ್ಸ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರ ಅಮೆಜಾನ್‌ ಪ್ರಕಟಿಸಿದ ಈ ತೀರ್ಮಾನ ಆಘಾತಕಾರಿ ಬೆಳವಣಿಗೆ ಎಂಬ ಅಭಿಪ್ರಾಯ ಪುಸ್ತಕ ಪ್ರೇಮಿಗಳು ಹಾಗೂ ಬರಹಗಾರರ ವಲಯದಲ್ಲಿ ವ್ಯಕ್ತವಾಗಿದೆ.

ಅಮೆಜಾನ್‌ 2016ರಲ್ಲಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಖರೀದಿಸಿದಾಗ ಜಾಗತಿಕವಾಗಿ ನಡೆಸುತ್ತಿರುವ ತನ್ನ ಅಮೆಜಾನ್‌ ಪಬ್ಲಿಷಿಂಗ್‌ನ ಅಡಿ ಇ-ಕಾಮರ್ಸ್ ಮತ್ತು ಇಂಟರ್ನೆಟ್ ಸೇವೆಯ ಮೂಲಕ ಇದರ ಪುಸ್ತಕ ಪ್ರಕಾಶನ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿತ್ತು.

ಅಮೆಜಾನ್, ವೆಸ್ಟ್‌ಲ್ಯಾಂಡ್‌ ಬುಕ್‌ ಪಬ್ಲಿಕೇಷನ್‌ ಅನ್ನು ಬೇರೆಯವರಿಗೆ ಮಾರಾಟ ಮಾಡದೇ ಮುಚ್ಚಲು ಉದ್ದೇಶಿಸಿರುವ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಅಲ್ಲದೇ ವೆಸ್ಟ್‌ಲ್ಯಾಂಡ್ ಬುಕ್ಸ್‌ನ ಉದ್ಯೋಗಿಗಳನ್ನು ಅಮೆಜಾನ್ ಸಂಸ್ಥೆಯ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಭಾರತ ಮೂಲದ ಪ್ರಕಾಶನ ಸಂಸ್ಥೆಯಾದ ವೆಸ್ಟ್‌ಲ್ಯಾಂಡ್‌ ಪಬ್ಲಿಕೇಶನ್‌ ರೂ. 30 ಕೋಟಿ ವಹಿವಾಟು ಹೊಂದಿತ್ತು. ಅಲ್ಲದೇ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಖ್ಯಾತ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರಾಂಡಮ್ ಹೌಸ್, ಹಾರ್ಪರ್‌ ಕಾಲಿನ್ಸ್ ಮತ್ತು ಹ್ಯಾಚೆಟ್ ಗ್ರೂಪ್‌ಗಳಿಗಿಂತ ವಿಭಿನ್ನವೆಂದು ಗುರ್ತಿಸಿಕೊಂಡಿತ್ತು.

ವೆಸ್ಟ್‌ಲ್ಯಾಂಡ್‌ ಪ್ರಕಾಶನ ಚೇತನ್ ಭಗತ್ ಮತ್ತು ಅಮಿಶ್ ತ್ರಿಪಾಠಿಯವರಂಥ ಹಲವು ಖ್ಯಾತ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಈ ಲೇಖಕರ ಸ್ಥಳೀಯ ಭಾಷೆಯಲ್ಲಿ ಮುದ್ರಣಗೊಂಡ ಪುಸ್ತಕಗಳು ಅತಿ ಹೆಚ್ಚು ಮಾರಾಟವಾದ ನಿದರ್ಶನಗಳಿವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದ ಅಧ್ಯಯನ ಆಧಾರಿತ ಕೃತಿಗಳ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆ ಮೇಲೆ ರಾಜಕೀಯ ಒತ್ತಡ ಸೃಷ್ಟಿಯಾಗಲು ಕಾರಣವಿರಬಹುದು ಎಂಬ ವಾದವು ಕೇಳಿಬಂದಿದೆ.

ಕಂಪ್ಯೂಟರ್‌ ವಿಜ್ಞಾನಿ ಅರವಿಂದ್‌ ನಾರಾಯಣ್‌ ಅವರ ಇಂಡಿಯಾಸ್‌ ಅನ್‌ ಡಿಕ್ಲೇರ್ಡ್‌ ಎಮೆರ್ಜೆನ್ಸಿ, ಆಕಾರ್‌ ಪಟೇಲ್‌ ಅವರ ಅವರ್‌ ಹಿಂದು ರಾಷ್ಟ್ರ, ಪ್ರೈಸ್‌ ಆಫ್‌ ದಿ ಮೋದಿ ಇಯರ್ಸ್‌, ಜೋಸಿ ಜೋಸೆಫ್‌ ಅವರ ದಿ ಸೈಲೆಂಟ್‌ ಕೂಪ್‌, ಕ್ರಿಸ್ಟೋಫ್‌ ಜಾಫರ್‌ ಲಾಟ್‌ ಅವರ ಮೋದೀಸ್‌ ಇಂಡಿಯಾ ಕೃತಿಗಳು ಪ್ರಸ್ತುತ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿಲುವುಗಳನ್ನು ಟೀಕಿಸಿದ್ದು ಪರೋಕ್ಷವಾಗಿ ಅಮೆಜಾನ್‌ ಈ ನಿರ್ಧಾರಕ್ಕೆ ಬರಲು ಕಾರಣವಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆಯೊಂದಿಗೆ ಉತ್ತಮ ಸ್ನೇಹವಿಟ್ಟುಕೊಂಡಿದ್ದ ಹಲವು ಲೇಖಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಲೇಖಕ ಆಕಾರ್‌ ಪಟೇಲ್‌ ಎಂಟುಎಂ ಮೀಡಿಯಾದೊಂದಿಗೆ ಮಾತನಾಡಿ, “ಹೌದು. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ ಮುಚ್ಚುತ್ತಿರುವುದು ನಿಜ. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ಗೆ ನಾನು ಪುಸ್ತಕವನ್ನು ಬರೆದಿದ್ದೇನೆ. ಸಂಸ್ಥೆಯೊಂದಿಗೆ ಉತ್ತಮ ಒಡನಾಟವಿತ್ತು. ಆದರೆ ಯಾವ ಕಾರಣಕ್ಕೆ ಪಬ್ಲಿಕೇಷನ್‌ ಅನ್ನು ಮುಚ್ಚುತ್ತಿದ್ದಾರೆಂಬುದು ನನಗೆ ತಿಳಿಸಿಲ್ಲ. ಆದರೆ ಸೂಕ್ತ ಕಾರಣಕ್ಕೆ ಮುಚ್ಚುತ್ತಿದ್ದಾರೆಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.

ಡೆಸ್ಪೈಟ್‌ ದ ಸ್ಟೇಟ್‌ ಪುಸ್ತಕದ ಲೇಖಕ ಎಂ.ರಾಜಶೇಖರ್ ತಮ್ಮ ಟ್ವೀಟ್‌ನಲ್ಲಿ “ವ್ಯವಹಾರ ಲಾಭದಾಯಕವಾಗಿರದಿದ್ದರೆ ಇದಕ್ಕೆ ಬೇಕಿರುವ ಇತರ ಮಾರ್ಗಗಳನ್ನು ಕಂಡುಕೊಳ್ಳಬಹುದಿತ್ತು. ಅಥವಾ ಖರೀದಿದಾರರನ್ನು ಹುಡುಕಬಹುದಿತ್ತು. ಹೀಗೆ ವೆಸ್ಟ್‌ಲ್ಯಾಂಡ್‌ನ್ನು ಮುಚ್ಚುತ್ತಿರುವುದು ಸರಿಯಲ್ಲ. ಬೇಸರದ ಸಂಗತಿಯಾಗಿದ್ದು, ಒಂದು ರೀತಿಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಮತ್ತು ಹಲವು ಯೋಜನೆಗಳನ್ನು ಹಾಳು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಶೋನಿ ಎಂಬ ಲೇಖಕಿ, “ವೆಸ್ಟ್‌ಲ್ಯಾಂಡ್‌ ಬಂದ್‌ ವಿಚಾರ ಬೇಸರದ ಸಂಗತಿ. ಇದು ಭಾರತದ ಪ್ರಕಾಶನ ಕ್ಷೇತ್ರಕ್ಕಾಗುತ್ತಿರುವ ದೊಡ್ಡ ಹಾನಿ. ನನ್ನ 6 ಪುಸ್ತಕಗಳನ್ನು ಸಂಸ್ಥೆಯೊಂದಿಗೆ ಹೊರತರುವ ನಿರೀಕ್ಷೆಯಲ್ಲಿದ್ದೆ. ಆದರೆ ವೆಸ್ಟ್ ಲ್ಯಾಂಡ್ ತಂಡದೊಂದಿಗೆ ಕೆಲವು ಅದ್ಭುತ ನೆನಪುಗಳಿವೆ. ಅವರು ಬೇರೆ ಸಂಸ್ಥೆಗೆ ಹೋಗುವುದನ್ನು ಊಹಿಸಲು ಕಷ್ಟವಾಗುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮನು ಪಿಳ್ಳೈ ಎಂಬ ಲೇಖಕರು “ವೆಸ್ಟ್‌ಲ್ಯಾಂಡ್‌ ಹೊರತಂದ ಉತ್ತಮ ಪುಸ್ತಕಗಳ ದೊಡ್ಡ ಪಟ್ಟಿಯೇ ಇದ್ದು, ಆ ತಂಡದೊಂದಿಗೆ ಕೆಲಸ ಮಾಡಲು ಸಂತಸವಾಗುತ್ತಿತ್ತು. ಇಂಥ ಯಶಸ್ವಿ ಸಂಸ್ಥೆಯನ್ನು ಮುಚ್ಚುತ್ತಿರುವ ನಿಜವಾದ ಕಾರಣಗಳ ಹಿಂದಿರುವ ಸತ್ಯಗಳು ದೇವರಿಗಷ್ಟೇ ತಿಳಿದಿರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ಇಂಗ್ಲಿಷ್‌ ಪ್ರಕಾಶನ ಸಂಸ್ಥೆಗಳ ಪೈಕಿ ಇದೇ ಮೊದಲ ಬಾರಿಗೆ ಮಾರಾಟ ಮಾಡದೇ ಶಾಶ್ವತವಾಗಿ ಮುಚ್ಚುತ್ತಿರುವುದು ಅಚ್ಚರಿ ಮೂಡಿಸಿದೆ. ಹಲವು ಜನಪ್ರಿಯ, ಮೆಚ್ಚುಗೆ ಪಡೆದ, ವಿಮರ್ಶಾತ್ಮಕ ಬರಹಗಳನ್ನೊಳಗೊಂಡ, ಗೌರವ ಮತ್ತು ಪ್ರಶಸ್ತಿ ಪಡೆದ ಕಾದಂಬರಿಗಳು, ಸಾಹಿತ್ಯ, ರಾಜಕೀಯ, ಸಮಾಜ, ಕಲೆ ಆಧಾರಿತ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿಗೆ ಸಂಸ್ಥೆಗಿದೆ. ಅಮೆಜಾನ್‌ನ ದಿಢೀರ್‌ ನಿರ್ಧಾರವನ್ನು ಪುಸ್ತಕ ಲೋಕದ ಓದುಗ ಮತ್ತು ಲೇಖಕ ವರ್ಗ ಅರಗಿಸಿಕೊಳ್ಳಲು ಯತ್ನಿಸುತ್ತಿದೆ.

– ಅನಿತಾ


ಇದನ್ನೂ ಓದಿರಿ: ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...