Homeಮುಖಪುಟವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

ವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

- Advertisement -
- Advertisement -

ಭಾರತದ ಹೆಸರಾಂತ ಪುಸ್ತಕ ಪ್ರಕಾಶನ ಕಂಪನಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಮುಚ್ಚುವುದಾಗಿ ಅಮೆಜಾನ್ ಪ್ರಕಟಿಸಿದ್ದು, ಈ ನಿರ್ಧಾರವನ್ನು ಕಂಪನಿಯ ಹಿರಿಯ ಉದ್ಯೋಗಿಗಳಿಗೆ ಸಿಇಒ ಗೌತಮ್ ಪದ್ಮನಾಭನ್ ಮಂಗಳವಾರ ತಿಳಿಸಿದ್ದಾರೆ.

ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟ್ರೆಂಟ್ ಲಿಮಿಟೆಡ್‌ನಿಂದ ವೆಸ್ಟ್‌ಲ್ಯಾಂಡ್ ಬುಕ್ಸ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರ ಅಮೆಜಾನ್‌ ಪ್ರಕಟಿಸಿದ ಈ ತೀರ್ಮಾನ ಆಘಾತಕಾರಿ ಬೆಳವಣಿಗೆ ಎಂಬ ಅಭಿಪ್ರಾಯ ಪುಸ್ತಕ ಪ್ರೇಮಿಗಳು ಹಾಗೂ ಬರಹಗಾರರ ವಲಯದಲ್ಲಿ ವ್ಯಕ್ತವಾಗಿದೆ.

ಅಮೆಜಾನ್‌ 2016ರಲ್ಲಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಖರೀದಿಸಿದಾಗ ಜಾಗತಿಕವಾಗಿ ನಡೆಸುತ್ತಿರುವ ತನ್ನ ಅಮೆಜಾನ್‌ ಪಬ್ಲಿಷಿಂಗ್‌ನ ಅಡಿ ಇ-ಕಾಮರ್ಸ್ ಮತ್ತು ಇಂಟರ್ನೆಟ್ ಸೇವೆಯ ಮೂಲಕ ಇದರ ಪುಸ್ತಕ ಪ್ರಕಾಶನ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿತ್ತು.

ಅಮೆಜಾನ್, ವೆಸ್ಟ್‌ಲ್ಯಾಂಡ್‌ ಬುಕ್‌ ಪಬ್ಲಿಕೇಷನ್‌ ಅನ್ನು ಬೇರೆಯವರಿಗೆ ಮಾರಾಟ ಮಾಡದೇ ಮುಚ್ಚಲು ಉದ್ದೇಶಿಸಿರುವ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಅಲ್ಲದೇ ವೆಸ್ಟ್‌ಲ್ಯಾಂಡ್ ಬುಕ್ಸ್‌ನ ಉದ್ಯೋಗಿಗಳನ್ನು ಅಮೆಜಾನ್ ಸಂಸ್ಥೆಯ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಭಾರತ ಮೂಲದ ಪ್ರಕಾಶನ ಸಂಸ್ಥೆಯಾದ ವೆಸ್ಟ್‌ಲ್ಯಾಂಡ್‌ ಪಬ್ಲಿಕೇಶನ್‌ ರೂ. 30 ಕೋಟಿ ವಹಿವಾಟು ಹೊಂದಿತ್ತು. ಅಲ್ಲದೇ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಖ್ಯಾತ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರಾಂಡಮ್ ಹೌಸ್, ಹಾರ್ಪರ್‌ ಕಾಲಿನ್ಸ್ ಮತ್ತು ಹ್ಯಾಚೆಟ್ ಗ್ರೂಪ್‌ಗಳಿಗಿಂತ ವಿಭಿನ್ನವೆಂದು ಗುರ್ತಿಸಿಕೊಂಡಿತ್ತು.

ವೆಸ್ಟ್‌ಲ್ಯಾಂಡ್‌ ಪ್ರಕಾಶನ ಚೇತನ್ ಭಗತ್ ಮತ್ತು ಅಮಿಶ್ ತ್ರಿಪಾಠಿಯವರಂಥ ಹಲವು ಖ್ಯಾತ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಈ ಲೇಖಕರ ಸ್ಥಳೀಯ ಭಾಷೆಯಲ್ಲಿ ಮುದ್ರಣಗೊಂಡ ಪುಸ್ತಕಗಳು ಅತಿ ಹೆಚ್ಚು ಮಾರಾಟವಾದ ನಿದರ್ಶನಗಳಿವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದ ಅಧ್ಯಯನ ಆಧಾರಿತ ಕೃತಿಗಳ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆ ಮೇಲೆ ರಾಜಕೀಯ ಒತ್ತಡ ಸೃಷ್ಟಿಯಾಗಲು ಕಾರಣವಿರಬಹುದು ಎಂಬ ವಾದವು ಕೇಳಿಬಂದಿದೆ.

ಕಂಪ್ಯೂಟರ್‌ ವಿಜ್ಞಾನಿ ಅರವಿಂದ್‌ ನಾರಾಯಣ್‌ ಅವರ ಇಂಡಿಯಾಸ್‌ ಅನ್‌ ಡಿಕ್ಲೇರ್ಡ್‌ ಎಮೆರ್ಜೆನ್ಸಿ, ಆಕಾರ್‌ ಪಟೇಲ್‌ ಅವರ ಅವರ್‌ ಹಿಂದು ರಾಷ್ಟ್ರ, ಪ್ರೈಸ್‌ ಆಫ್‌ ದಿ ಮೋದಿ ಇಯರ್ಸ್‌, ಜೋಸಿ ಜೋಸೆಫ್‌ ಅವರ ದಿ ಸೈಲೆಂಟ್‌ ಕೂಪ್‌, ಕ್ರಿಸ್ಟೋಫ್‌ ಜಾಫರ್‌ ಲಾಟ್‌ ಅವರ ಮೋದೀಸ್‌ ಇಂಡಿಯಾ ಕೃತಿಗಳು ಪ್ರಸ್ತುತ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿಲುವುಗಳನ್ನು ಟೀಕಿಸಿದ್ದು ಪರೋಕ್ಷವಾಗಿ ಅಮೆಜಾನ್‌ ಈ ನಿರ್ಧಾರಕ್ಕೆ ಬರಲು ಕಾರಣವಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆಯೊಂದಿಗೆ ಉತ್ತಮ ಸ್ನೇಹವಿಟ್ಟುಕೊಂಡಿದ್ದ ಹಲವು ಲೇಖಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಲೇಖಕ ಆಕಾರ್‌ ಪಟೇಲ್‌ ಎಂಟುಎಂ ಮೀಡಿಯಾದೊಂದಿಗೆ ಮಾತನಾಡಿ, “ಹೌದು. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ ಮುಚ್ಚುತ್ತಿರುವುದು ನಿಜ. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ಗೆ ನಾನು ಪುಸ್ತಕವನ್ನು ಬರೆದಿದ್ದೇನೆ. ಸಂಸ್ಥೆಯೊಂದಿಗೆ ಉತ್ತಮ ಒಡನಾಟವಿತ್ತು. ಆದರೆ ಯಾವ ಕಾರಣಕ್ಕೆ ಪಬ್ಲಿಕೇಷನ್‌ ಅನ್ನು ಮುಚ್ಚುತ್ತಿದ್ದಾರೆಂಬುದು ನನಗೆ ತಿಳಿಸಿಲ್ಲ. ಆದರೆ ಸೂಕ್ತ ಕಾರಣಕ್ಕೆ ಮುಚ್ಚುತ್ತಿದ್ದಾರೆಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.

ಡೆಸ್ಪೈಟ್‌ ದ ಸ್ಟೇಟ್‌ ಪುಸ್ತಕದ ಲೇಖಕ ಎಂ.ರಾಜಶೇಖರ್ ತಮ್ಮ ಟ್ವೀಟ್‌ನಲ್ಲಿ “ವ್ಯವಹಾರ ಲಾಭದಾಯಕವಾಗಿರದಿದ್ದರೆ ಇದಕ್ಕೆ ಬೇಕಿರುವ ಇತರ ಮಾರ್ಗಗಳನ್ನು ಕಂಡುಕೊಳ್ಳಬಹುದಿತ್ತು. ಅಥವಾ ಖರೀದಿದಾರರನ್ನು ಹುಡುಕಬಹುದಿತ್ತು. ಹೀಗೆ ವೆಸ್ಟ್‌ಲ್ಯಾಂಡ್‌ನ್ನು ಮುಚ್ಚುತ್ತಿರುವುದು ಸರಿಯಲ್ಲ. ಬೇಸರದ ಸಂಗತಿಯಾಗಿದ್ದು, ಒಂದು ರೀತಿಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಮತ್ತು ಹಲವು ಯೋಜನೆಗಳನ್ನು ಹಾಳು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಶೋನಿ ಎಂಬ ಲೇಖಕಿ, “ವೆಸ್ಟ್‌ಲ್ಯಾಂಡ್‌ ಬಂದ್‌ ವಿಚಾರ ಬೇಸರದ ಸಂಗತಿ. ಇದು ಭಾರತದ ಪ್ರಕಾಶನ ಕ್ಷೇತ್ರಕ್ಕಾಗುತ್ತಿರುವ ದೊಡ್ಡ ಹಾನಿ. ನನ್ನ 6 ಪುಸ್ತಕಗಳನ್ನು ಸಂಸ್ಥೆಯೊಂದಿಗೆ ಹೊರತರುವ ನಿರೀಕ್ಷೆಯಲ್ಲಿದ್ದೆ. ಆದರೆ ವೆಸ್ಟ್ ಲ್ಯಾಂಡ್ ತಂಡದೊಂದಿಗೆ ಕೆಲವು ಅದ್ಭುತ ನೆನಪುಗಳಿವೆ. ಅವರು ಬೇರೆ ಸಂಸ್ಥೆಗೆ ಹೋಗುವುದನ್ನು ಊಹಿಸಲು ಕಷ್ಟವಾಗುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮನು ಪಿಳ್ಳೈ ಎಂಬ ಲೇಖಕರು “ವೆಸ್ಟ್‌ಲ್ಯಾಂಡ್‌ ಹೊರತಂದ ಉತ್ತಮ ಪುಸ್ತಕಗಳ ದೊಡ್ಡ ಪಟ್ಟಿಯೇ ಇದ್ದು, ಆ ತಂಡದೊಂದಿಗೆ ಕೆಲಸ ಮಾಡಲು ಸಂತಸವಾಗುತ್ತಿತ್ತು. ಇಂಥ ಯಶಸ್ವಿ ಸಂಸ್ಥೆಯನ್ನು ಮುಚ್ಚುತ್ತಿರುವ ನಿಜವಾದ ಕಾರಣಗಳ ಹಿಂದಿರುವ ಸತ್ಯಗಳು ದೇವರಿಗಷ್ಟೇ ತಿಳಿದಿರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ಇಂಗ್ಲಿಷ್‌ ಪ್ರಕಾಶನ ಸಂಸ್ಥೆಗಳ ಪೈಕಿ ಇದೇ ಮೊದಲ ಬಾರಿಗೆ ಮಾರಾಟ ಮಾಡದೇ ಶಾಶ್ವತವಾಗಿ ಮುಚ್ಚುತ್ತಿರುವುದು ಅಚ್ಚರಿ ಮೂಡಿಸಿದೆ. ಹಲವು ಜನಪ್ರಿಯ, ಮೆಚ್ಚುಗೆ ಪಡೆದ, ವಿಮರ್ಶಾತ್ಮಕ ಬರಹಗಳನ್ನೊಳಗೊಂಡ, ಗೌರವ ಮತ್ತು ಪ್ರಶಸ್ತಿ ಪಡೆದ ಕಾದಂಬರಿಗಳು, ಸಾಹಿತ್ಯ, ರಾಜಕೀಯ, ಸಮಾಜ, ಕಲೆ ಆಧಾರಿತ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿಗೆ ಸಂಸ್ಥೆಗಿದೆ. ಅಮೆಜಾನ್‌ನ ದಿಢೀರ್‌ ನಿರ್ಧಾರವನ್ನು ಪುಸ್ತಕ ಲೋಕದ ಓದುಗ ಮತ್ತು ಲೇಖಕ ವರ್ಗ ಅರಗಿಸಿಕೊಳ್ಳಲು ಯತ್ನಿಸುತ್ತಿದೆ.

– ಅನಿತಾ


ಇದನ್ನೂ ಓದಿರಿ: ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...