Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

- Advertisement -
- Advertisement -

ನಾಸಿಕ್‌ನ ಮುಸ್ಲಿಮರನ್ನು ಆರೆಸ್ಸೆಸ್‌‌ನವರು ಹೊರ ಹಾಕುತ್ತಿದ್ದಾರೆ ಎಂಬ ಸಂದೇಶದೊಂದಿಗೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಮಾತನಾಡುತ್ತಿರುವ ವ್ಯಕ್ತಿ, ‘‘ಆರೆಸ್ಸೆಸ್‌ನ ಕಾರ್ಯಕರ್ತರು ದಾಳಿ ಮಾಡಿರುವುದರಿಂದ ಊರಿನ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ. ಮುಸ್ಲಿಮರು ಮತ್ತು ಮಾಧ್ಯಮಗಳು ನಮಗೆ ಸಹಾಯ ಮಾಡಬೇಕು’’ ಎಂದು ವಿನಂತಿಸುತ್ತಾರೆ.

ಹೆಚ್ಚಾಗಿ ಈ ವಿಡಿಯೊ ವಾಟ್ಸಪ್‌‌‌ನಲ್ಲಿ ಹರಿದಾಡುತ್ತಿದೆ. “ನಾಸಿಕ್‌ನಲ್ಲಿ ಮುಸ್ಲಿಮರನ್ನು ಗ್ರಾಮದಿಂದ ಹೊರಹಾಕುತ್ತಿರುವ ಆರ್‌ಎಸ್‌ಎಸ್ ಭಯೋತ್ಪಾದಕರು. ನಿಮ್ಮ ಮನೆ ಬಾಗಿಲಿಗೂ ಆರ್‌ಎಸ್‌ಎಸ್‌ ಮತ್ತು ಸಂಘಪರಿವಾರದ ಗೂಂಡಾಗಳು ನುಗ್ಗುವ ಮುನ್ನ ಪ್ರತಿರೋಧಕ್ಕೆ ಸಿದ್ಧರಾಗಿ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ವಾಸ್ತವದಲ್ಲಿ, ವಿಡಿಯೊವನ್ನು ಗಮನವಿಟ್ಟು ಕೇಳಿಸಿಕೊಂಡರೆ ಅದರಲ್ಲಿ ಮಾತನಾಡುತ್ತಿರುವ ವ್ಯಕ್ತಿಯು ತನ್ನ ಹೆಸರು ‘ನಾಸಿರ್‌ ಶೇಕ್‌’ ಎಂದು ಹೇಳುತ್ತಿರುವುದು ಕೇಳುತ್ತದೆ. ಆದರೆ ಈ ವಿಡಿಯೊವನ್ನು ವೈರಲ್ ಮಾಡಿರುವವರು ಮತ್ತು ಇದರ ಬಗ್ಗೆ ತಪ್ಪಾದ ಸಂದೇಶ ಬರೆದವರು ಇದನ್ನು ಸರಿಯಾಗಿ ಕೇಳಿಸಿಕೊಳ್ಳದೆ, ಅದನ್ನು ‘ನಾಸಿಕ್‌’ ಎಂದು ಗ್ರಹಿಸಿ, ‘ನಾಸಿಕ್ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ’ ಎಂದು ವೈರಲ್ ಮಾಡಿದ್ದಾರೆ.

ವೈರಲ್ ವಿಡಿಯೊ

ವೈರಲ್ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾತನಾಡುತ್ತ  ಹೀಗೆ ಹೇಳುತ್ತಾರೆ: “ನಾನು ನಾಸಿರ್‌ ಶೇಕ್ , ಇಲ್ಲಿ ನೋಡಿ ಇಡೀ ಫಿರಾನಾ ಗ್ರಾಮವೇ ಭಯದಿಂದ ವಲಸೆ ಹೋಗ್ತಿದೆ. ಗ್ರಾಮದಲ್ಲಿರುವ ಒಂದು ದರ್ಗದ ಬಗ್ಗೆ ಮಾತಾಡ್ತಿದ್ದೀನಿ, ಇಲ್ಲಿ ಸುಮಾರು 300 ರಿಂದ 400 ಜನ RSS ಕಾರ್ಯಕರ್ತರು ಫಿರಾನ ಗ್ರಾಮದ ದರ್ಗಾ ವಿಚಾರವಾಗಿ ಅಲ್ಲಿಯ ಮುಸಲ್ಮಾನರ ಮೇಲೆ ದಾಳಿ ನಡೆಸಲು ಮುಂದಾದಾಗ ಗ್ರಾಮದ ಮುಸ್ಲಿಮರು ಹೆದರಿ ಊರನ್ನು ತೊರೆದು ಹೊರಹೋಗುತ್ತಿದ್ದಾರೆ. ನಾನು ಇಡೀ ಗುಜರಾತಿನ ನಾಗರಿಕರಿಗೆ ಮನವಿ ಮಾಡುತ್ತ ನಿಮ್ಮಲ್ಲಿ ಸಹಾಯ ಬೇಡುತ್ತಿದ್ದೇನೆ. ದಯಮಾಡಿ ನೀವು ನಮಗೆ ಸಹಾಯ ಮಾಡಿ” ಎಂದು ಹೇಳುತ್ತ ಈ ವಿಡಿಯೊವನ್ನು ಎಲ್ಲರೂ ಶೇರ್ ಮಾಡಿ ಎಂದು ಮನವಿ ಮಾಡುತ್ತಾರೆ.

ಫ್ಯಾಕ್ಟ್ ಚೆಕ್:

ಈ ವಿಡಿಯೊದ ಸತ್ಯಾಸತ್ಯತೆಯ ಬಗ್ಗೆ ಪರಿಶೀಲಿಸುವಂತೆ ‘ನಾನುಗೌರಿ.ಕಾಂ’ಗೆ ಕೋರಿಕೆಗಳು ಬಂದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೊದ ಸ್ಕ್ರೀನ್‌ಶಾಟ್  ತೆಗೆದು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ವೈರಲ್  ಆದ ವಿಡಿಯೊ ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಕೀವರ್ಡ್‌ಗಳನ್ನು ಬಳಸಿಕೊಂಡು ಮತ್ತಷ್ಟು ಶೋಧ ನಡೆಸಿದಾಗ ಘಟನೆಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರವಾಗಿರುವ ವರದಿಗಳು ಲಭ್ಯವಾಗಿವೆ.

ವರದಿಗಳ ಪ್ರಕಾರ ಈ ಘಟನೆಯು ಗುಜರಾತಿನಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 20 ಕಿಮೀ ದೂರದಲ್ಲಿರುವ ಪಿರಾನ್ಹಾ ಎಂಬ ಗ್ರಾಮದಲ್ಲಿ ಒಂದು ದರ್ಗಾ, ಮಸೀದಿ ಮತ್ತು  ಸ್ಮಶಾನ ಇದ್ದು, ಇದೀಗ ಈ ಸ್ಥಳದಲ್ಲಿ ವಿವಾದ ಏರ್ಪಟ್ಟಿದೆ. ಪೀರ್ ಇಮಾಮ್ ಶಾ ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಗೋಡೆ ನಿರ್ಮಾಣ ಮಾಡಬಾರದು ಎಂದು ಪಿರಾನ್ಹಾ ಗ್ರಾಮದ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ. 13 ವರ್ಷದ ಹಳೆಯದಾದ ಬೇಲಿ ತೆರವು ಮಾಡಿ ಅದೇ ಜಾಗದಲ್ಲಿ ಕಾಂಕ್ರೀಟ್ ಗೋಡೆ ನಿರ್ಮಾಣ ಮಾಡಲು ತಯಾರಿ ನಡೆಸಲಾಗಿತ್ತು. ಗೋಡೆ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದರು.

ಘಟನೆಗೆ ಸಂಬಂಧಿಸಿದ ವರದಿಯನ್ನು Indian express ಮತ್ತು  Times of Indiaನಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಗೋಡೆ ನಿರ್ಮಾಣದ ವಿರೋದಕ್ಕೆ ಕಾರಣ ಏನು?

ಒಂದೇ ಜಾಗಕ್ಕೆ ಹೊಂದಿಕೊಂಡಂತೆ ದರ್ಗಾ, ಮಸೀದಿ ಮತ್ತು ಸ್ಮಶಾನವಿದ್ದು, ದರ್ಗಾದಿಂದ ಮಸೀದಿ ಹಾಗೂ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗೋಡೆಯ ನಿರ್ಮಾಣದಿಂದ ಆವರಣದಲ್ಲಿರುವ ಮಸೀದಿ ಮತ್ತು ಸ್ಮಶಾನದಿಂದ ದರ್ಗಾಕ್ಕೆ ಇರುವ ಪ್ರವೇಶ ದ್ವಾರವನ್ನು ಮುಚ್ಚಿದಂತಾಗುತ್ತದೆ ಎಂದು ಆರೋಪಿಸಿ ಪಿರಾನಾ ಗ್ರಾಮದ ನಿವಾಸಿಗಳು, ಹೆಚ್ಚಾಗಿ ಸೈಯದ್ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಸ್ಲಾಲಿ ಪೊಲೀಸರು 64 ಮಹಿಳೆಯರು ಸೇರಿದಂತೆ ಒಟ್ಟು 133 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಗೋಡೆ ನಿರ್ಮಾಣ ವಿರೋಧಿಸಿ ಮುಸ್ಲಿಂ ಸಮುದಾಯದವರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ನಾಸಿರ್ ಶೇಕ್ ಎಂಬ ವ್ಯಕ್ತಿಯು ಮೆರವಣಿಗೆಯ ದೃಶ್ಯಗಳನ್ನು ಸೆರೆಹಿಡಿದು ಪ್ರತಿಭಟನಾ ಮರೆವಣಿಗೆಯನ್ನು ಸಾಮೂಹಿಕ ವಲಸೆ ಎಂದು ಹೇಳಿ ವಿಡಿಯೊವನ್ನು ಮಾಡಿದ್ದಾರೆ. ಆ ವಿಡಿಯೊದಲ್ಲಿ, “RSS ಕಾರ್ಯಕರ್ತರಿಂದ ಮುಸ್ಲಿಂ ಸಮುದಾಯದವರು ಗ್ರಾಮ ತೊರೆದು ವಲಸೆ ಹೋಗುತ್ತಿದ್ದಾರೆ” ಎಂದು ತಪ್ಪು ಹೇಳಿಕೆ ನೀಡಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನ ಪಿರಾನಾ ಗ್ರಾಮದಲ್ಲಿ ಸಾಮೂಹಿಕ ವಲಸೆಯ ಕುರಿತು ನಕಲಿ ಟ್ವೀಟ್ ಆತಂಕ ಮೂಡಿಸಿತ್ತು. ಅಲ್ಲಿ ಮಾತನಾಡಿರುವ ವ್ಯಕ್ತಿಯು ‘ಹಿಂದೂ ಭಯೋತ್ಪಾದಕರಿಂದಾಗಿ ಮುಸ್ಲಿಮರು ವಲಸೆ ಹೋಗುತ್ತಿದ್ದಾರೆ’ ಎಂದು ಹೇಳಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ಇದರ ನಂತರ, ವೈರಲ್ ವಿಡಿಯೊದಲ್ಲಿ ನಾಸಿರ್ ಶೇಕ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, “ಕೋಮು ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ” ಎಂದು ಪರಿಗಣಿಸಿ ಆತನನ್ನು ಬಂಧಿಸಿದ್ದರು. ನಂತರ ಆ ವ್ಯಕ್ತಿಯು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ.  ಕ್ಷಮೆಯಾಚಿಸುವ ವೀಡಿಯೊವನ್ನು ಕೆಲವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊದಲ್ಲಿ ತಾನು ಘಟನೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದನ್ನು ನಾಸಿರ್‌ ಶೇಕ್ ಒಪ್ಪಿಕೊಂಡಿದ್ದಾರೆ. ನಾಸಿರ್‌ ಶೇಕ್ ನನ್ನು ಪೊಲೀಸರು ಬಂಧಿಸಿದ ನಂತರ ಕ್ಷಮೆ ಕೇಳುತ್ತಿರುವ ವೀಡಿಯೋವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಇಷ್ಟೇ ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಇಮಾಮ್ ಶಾಯಿ ಸದಾತ್ ಕಮಿಟಿಯು ಪತ್ರಿಕಾ ಹೇಳಿಕೆಯನ್ನು ಕೂಡಾ ಬಿಡುಗಡೆ ಮಾಡಿದೆ. ಅದರಲ್ಲಿ, “ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಯದ್ ಟ್ರಸ್ಟ್ ಮತ್ತು ಸತ್ಪಂಥಿ ಟ್ರಸ್ಟ್ ನಡುವೆ ವ್ಯಾಜ್ಯ ಇದ್ದು ಇದನ್ನು ಹಿಂದೂ ಮುಸ್ಲಿಂ ಘರ್ಷಣೆ ಎಂದು ಬಿಂಬಿಸುವುದು ಬೇಡ. ಪಿರಾನ ಗ್ರಾಮದಲ್ಲಿ ಎಲ್ಲರೂ ಸಾಮರಸ್ಯದಿಂದ ಇದ್ದೇವೆ. ಸುಳ್ಳು ಸುದ್ದಿಗಳನ್ನು ಹರಡಬೇಡಿ” ಎಂದು ವಿನಂತಿಸಿದೆ.

ಒಟ್ಟಾರೆಯಾಗಿ ವೈರಲ್ ವಿಡಿಯೊದಲ್ಲಿ ಹೇಳಲಾಗಿರುವಂತೆ, RSS ಮತ್ತು ಸಂಘಪರಿವಾದ ಭಯೋತ್ಪಾಧಕ ಗೂಂಡಾಗಳಿಂದ ಪಿರಾನ ಗ್ರಾಮದವರನ್ನು ರಕ್ಷಿಸಿ ಎಂದು ಹೇಳಿರುವ ಈ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ಘಟನೆಯು ದರ್ಗಾ ಮತ್ತು ಮಸೀದಿ ನಡುವೆ ಗೋಡೆ ನಿರ್ಮಾಣವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ.

ಕೋಮು ಸಾಮರಸ್ಯಕ್ಕೆ ದಕ್ಕೆಯುಂಟಾಗಿ ಅಶಾಂತಿಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ನಾಸಿರ್ ಶೇಕ್‌‌ನನ್ನು ಬಂಧಿಸಲಾಗಿದೆ.  ನಂತರ ಆತ ಕ್ಷಮೆ ಯಾಚಿಸಿದ್ದಾನೆ. ಹಾಗಾಗಿ ವೈರಲ್ ವಿಡಿಯೊದಲ್ಲಿ ಪ್ರತಿಪಾದಿಸಲಾಗಿರುವ ಹೇಳಿಕೆ ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...