Homeಮುಖಪುಟಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಆಡಳಿತಾರೂಢ ಬಿಜೆಪಿ ಭಾರತದಲ್ಲಿ "ರಾಜ" ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ,  ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಪ್ರತಿಯೊಂದು ಬಂದರು, ಪ್ರತಿ ವಿಮಾನ ನಿಲ್ದಾಣ, ಟವರ್‌, ಪ್ರಸರಣ, ಗಣಿಗಾರಿಕೆ, ಹಸಿರು ಇಂಧನ, ಅನಿಲ ವಿತರಣೆ, ಖಾದ್ಯ ತೈಲ ಎಲ್ಲಾ ಒಬ್ಬ ವ್ಯಕ್ತಿ ಪಡೆಯುತ್ತಿದ್ದಾರೆ. ಎಲ್ಲೆಡೆ ಕೇವಲ ಅದಾನಿ ಇದ್ದಾರೆ. ದೇಶದ ಸಂಪೂರ್ಣ ಸಂಪತ್ತು ಆಯ್ದ ಕೆಲವರಿಗೆ ಮಾತ್ರ ಹೋಗುತ್ತಿದೆ. ಬಿಜೆಪಿ ಸರ್ಕಾರದಿಂದ ಕೆಲವೇ ಕೆಲವು ಕೈಗಾರಿಕೋದ್ಯಮಿಗಳು ಲಾಭ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ದೇಶದ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮುಂದುವರಿದು, “ಗಣರಾಜ್ಯೋತ್ಸವದಂದು ನಿಮಗೆ ಅತಿಥಿಯನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂದು ನೀವೇ ಕೇಳಿಕೊಳ್ಳಿ. ನಾವು ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದ್ದೇವೆ ಮತ್ತು ಸುತ್ತುವರೆದಿದ್ದೇವೆ. ನೀವು (ಬಿಜೆಪಿ) ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದಿದ್ದೀರಿ, ಇದು ದೇಶದ ಜನರಿಗೆ ನೀವು ಮಾಡಿದ ಅತಿ ದೊಡ್ಡ ಅಪರಾಧವಾಗಿದೆ” ಎಂದಿದ್ದಾರೆ.

“ರಾಷ್ಟ್ರವು ಹೊರಗಿನಿಂದಲೂ ಅಪಾಯದಲ್ಲಿದೆ, ರಾಷ್ಟ್ರವು ಒಳಗಿನಿಂದಲೂ ಅಪಾಯದಲ್ಲಿದೆ. ಇದು ತುಂಬಾ ಅಪಾಯಕಾರಿ ಸ್ಥಿತಿ. ನನ್ನ ದೇಶ ಹೊರಗೆ ಸಂಪೂರ್ಣವಾಗಿ ಪ್ರತ್ಯೇಕವಾಗಿದೆ. ಒಳಗೆ ಹೋರಾಡುತ್ತಿದೆ. ರಾಜ್ಯಗಳು ಒಬ್ಬರಿಗೊಬ್ಬರು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಇವೆಲ್ಲ ನನಗೆ ಚಿಂತೆಗೆ ದೂಡುತ್ತವೆ” ಎಂದು ಗಂಭೀರವಾದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಹುಲ್ ಮಾತುಗಳು ನಿಜಕ್ಕೂ ಅವರ ವಿವೇಚನೆಯನ್ನು ಪಣಕ್ಕಿಟ್ಟು ಬಂದ ಅಂತರಾಳದ ಮಾತುಗಳು ಎನ್ನಿಸಿದೆ! ಸರ್ಕಾರದ ವೈಫಲ್ಯವನ್ನು ಪ್ರಬುದ್ದ ಮಾತುಗಳಿಂದ ತೆರೆದಿಟ್ಟ ಅವರನ್ನು, ಅವರ ನಡೆಗಳನ್ನು ಮುಂದೆ ಗಮನಿಸಿ!

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...