Homeಮುಖಪುಟಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಆಡಳಿತಾರೂಢ ಬಿಜೆಪಿ ಭಾರತದಲ್ಲಿ "ರಾಜ" ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ,  ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಪ್ರತಿಯೊಂದು ಬಂದರು, ಪ್ರತಿ ವಿಮಾನ ನಿಲ್ದಾಣ, ಟವರ್‌, ಪ್ರಸರಣ, ಗಣಿಗಾರಿಕೆ, ಹಸಿರು ಇಂಧನ, ಅನಿಲ ವಿತರಣೆ, ಖಾದ್ಯ ತೈಲ ಎಲ್ಲಾ ಒಬ್ಬ ವ್ಯಕ್ತಿ ಪಡೆಯುತ್ತಿದ್ದಾರೆ. ಎಲ್ಲೆಡೆ ಕೇವಲ ಅದಾನಿ ಇದ್ದಾರೆ. ದೇಶದ ಸಂಪೂರ್ಣ ಸಂಪತ್ತು ಆಯ್ದ ಕೆಲವರಿಗೆ ಮಾತ್ರ ಹೋಗುತ್ತಿದೆ. ಬಿಜೆಪಿ ಸರ್ಕಾರದಿಂದ ಕೆಲವೇ ಕೆಲವು ಕೈಗಾರಿಕೋದ್ಯಮಿಗಳು ಲಾಭ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ದೇಶದ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮುಂದುವರಿದು, “ಗಣರಾಜ್ಯೋತ್ಸವದಂದು ನಿಮಗೆ ಅತಿಥಿಯನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂದು ನೀವೇ ಕೇಳಿಕೊಳ್ಳಿ. ನಾವು ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದ್ದೇವೆ ಮತ್ತು ಸುತ್ತುವರೆದಿದ್ದೇವೆ. ನೀವು (ಬಿಜೆಪಿ) ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದಿದ್ದೀರಿ, ಇದು ದೇಶದ ಜನರಿಗೆ ನೀವು ಮಾಡಿದ ಅತಿ ದೊಡ್ಡ ಅಪರಾಧವಾಗಿದೆ” ಎಂದಿದ್ದಾರೆ.

“ರಾಷ್ಟ್ರವು ಹೊರಗಿನಿಂದಲೂ ಅಪಾಯದಲ್ಲಿದೆ, ರಾಷ್ಟ್ರವು ಒಳಗಿನಿಂದಲೂ ಅಪಾಯದಲ್ಲಿದೆ. ಇದು ತುಂಬಾ ಅಪಾಯಕಾರಿ ಸ್ಥಿತಿ. ನನ್ನ ದೇಶ ಹೊರಗೆ ಸಂಪೂರ್ಣವಾಗಿ ಪ್ರತ್ಯೇಕವಾಗಿದೆ. ಒಳಗೆ ಹೋರಾಡುತ್ತಿದೆ. ರಾಜ್ಯಗಳು ಒಬ್ಬರಿಗೊಬ್ಬರು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಇವೆಲ್ಲ ನನಗೆ ಚಿಂತೆಗೆ ದೂಡುತ್ತವೆ” ಎಂದು ಗಂಭೀರವಾದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಹುಲ್ ಮಾತುಗಳು ನಿಜಕ್ಕೂ ಅವರ ವಿವೇಚನೆಯನ್ನು ಪಣಕ್ಕಿಟ್ಟು ಬಂದ ಅಂತರಾಳದ ಮಾತುಗಳು ಎನ್ನಿಸಿದೆ! ಸರ್ಕಾರದ ವೈಫಲ್ಯವನ್ನು ಪ್ರಬುದ್ದ ಮಾತುಗಳಿಂದ ತೆರೆದಿಟ್ಟ ಅವರನ್ನು, ಅವರ ನಡೆಗಳನ್ನು ಮುಂದೆ ಗಮನಿಸಿ!

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...