Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

- Advertisement -
- Advertisement -

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿರಣ್ ರಿಜಿಜು ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಭಾಷಣಕ್ಕೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್‌ ತಮ್ಮ ನಾಯಕನ ಮಾತನ್ನು ಆಲಿಸುವಂತೆ ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಶ್ರೀಮಂತರು ಮತ್ತು ಬಡವರ ನಡುವೆ ಹೆಚ್ಚುತ್ತಿರುವ ಅಸಮಾನತೆ, ಹೆಚ್ಚುತ್ತಿರುವ ನಿರುದ್ಯೋಗ, ಪೆಗಾಸಸ್‌ ಪ್ರಕರಣದ ಬಗ್ಗೆ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದರು. ಬಿಜೆಪಿಗರು ರಾಜನ ಕಲ್ಪನೆ ಮುನ್ನಲೆಗೆ ತರುವ ಮೂಲಕ ಭಾರತದ ರಾಜ್ಯಗಳ ಒಕ್ಕೂಟದ ಕಲ್ಪನೆಯನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ ಗಾಂಧಿ ಮಾತುಗಳಿಗೆ ಕಿಡಿಕಾರಿದ್ದಾರೆ. ” ರಾಹುಲ್ ಗಾಂಧಿ, ಭಾರತವು ಒಂದು ರಾಷ್ಟ್ರವಲ್ಲ ಎಂದು ಹೇಳುವ ಗೊಂದಲಮಯ ಮತ್ತು ಬುದ್ದಿಹೀನ ನಾಯಕ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ರಾಜ ಎಂದು ಸೂಚಿಸಿದ್ದಾರೆ. ಆದರೆ, ಪ್ರಧಾನಿ ಮೋದಿ ಜನರ ಹೃದಯವನ್ನು ಗೆದ್ದಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಜನಪ್ರಿಯ ನಾಯಕರಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ರಾಜವಂಶದಿಂದಾಗಿ ಕಾಂಗ್ರೆಸ್ ನಾಯಕ ಮತ್ತು ಸಂಸದರಾಗಿದ್ದಾರೆ” ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, “ಭಾರತದ ಕಾನೂನು ಮಂತ್ರಿಯಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ಸಹ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಕೂಡಲೇ ಜನತೆ, ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಕ್ಷಮೆಯಾಚಿಸಬೇಕು” ಎಂದಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ರಾಹುಲ್ ಗಾಂಧಿ ಅವರ ’ಬಿಜೆಪಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತಂದಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, “ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ” ಎಂದಿದ್ದಾರೆ.

1963 ರಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಚೀನಾಕ್ಕೆ ಅಕ್ರಮವಾಗಿ ಹಸ್ತಾಂತರಿಸಿತು.1970 ರ ದಶಕದಲ್ಲಿ ಚೀನಾ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು. 2013 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸಿಪಿಇಸಿಯನ್ನು ಪ್ರಾರಂಭಿಸಲಾಯಿತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ನಾಯಕರ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುವ ಬಿಜೆಪಿ ನಾಯಕರು ಎಲ್ಲರೂ ಏಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಸಚಿವ ರಾಜೀವ್ ಶುಕ್ಲಾ ಟ್ವೀಟ್ ಮಾಡಿ, ” ಬಿಜೆಪಿಯ ಉನ್ನತ ನಾಯಕರು ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುತ್ತಾರೆ. ಆದರೆ, ಎಲ್ಲಾ ಮಂತ್ರಿಗಳು ಅವರ ಭಾಷಣಕ್ಕೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ. ಇದರರ್ಥ ಅವರು ವಿಚಲಿತರಾಗಿದ್ದಾರೆ ಮತ್ತು ಅವರ ಇಂದಿನ ಭಾಷಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

 

ಸಂಸದ ಶಶಿ ತರೂರ್‌ ಕೂಡ ರಾಹುಲ್ ಗಾಂಧಿ ಭಾಷಣವನ್ನು ಪವರ್‌ ಫುಲ್‌ ಮೆಸೇಜ್ ಎಂದಿದ್ದಾರೆ. “ಕಾಂಗ್ರೆಸ್ ದೇಶವು ಅದರ ಆಂತರಿಕ ಏಕತೆ, ಶಕ್ತಿ ಮತ್ತು ಅದರ ಬಾಹ್ಯ ರಾಷ್ಟ್ರೀಯ ಭದ್ರತೆ ಎರಡರಲ್ಲೂ ದುರ್ಬಲಗೊಂಡಿದೆ ಎಂದು ಹೇಳುತ್ತಿದ್ದೇವೆ. ಇದು ಅತ್ಯಂತ ಶಕ್ತಿಯುತ ಮತ್ತು ಪ್ರಮುಖ ಸಂದೇಶವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಪರಿಸ್ಥಿತಿಯ ಲಾಭವನ್ನು ಚೀನಾ ಪಡೆಯದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಯಾವಾಗಲೂ ನೋಡಿಕೊಂಡಿದ್ದರು. ಆದ್ದರಿಂದ ರಾಹುಲ್ ಗಾಂಧಿಯವರ ಮಾತುಗಳನ್ನು ಆಲಿಸುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ, ಪೆಗಾಸಸ್‌ ಪ್ರಕರಣ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.


ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರಾ ಗಾಂಧಿ ಯವರ ಪೀರೇಡನಲ್ಲಿ ಜೋಶಿಯವರ ಹೋಲಗಳೆನಾದರು ಹೋಗಿರಬಹುದು ಅದಕ್ಕೆ ರಾಹುಲ್ ಗಾಂಧಿ ಮಾತಾಡಿದರೆ ಇವರು ಉರಕೂಳತಾರೆ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...