Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...