Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...