Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...