Homeಮುಖಪುಟಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿ, ಬಡವ-ಶ್ರೀಮಂತರ ಕುರಿತಂತೆ ತಾರತಮ್ಯದ ನೀತಿ ಮತ್ತು ಒಕ್ಕೂಟದ ಬದ್ಧತೆಗಳನ್ನು ನಿಭಾಯಿಸದೆ ಇರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಗಳನ್ನು ಟೀಕಿಸಿರುವ ರಾಹುಲ್ ಗಾಂಧಿ “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದಾರೆ.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

“ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ, “ಅಫ್ಘನ್ ಜೊತೆ ಸೌಹಾರ್ದ ಮತ್ತು ಸಹಕಾರ ಸಂಬಂಧಗಳನ್ನು ಭದ್ರಗೊಳಿಸಲು ನಾವು ಸಿದ್ದವಾಗಿದ್ದೇವೆ” ಎಂದು ಚೀನಾ ಹೇಳಿಕೊಂಡಿದೆ. ಇದಕ್ಕೆ ಅಫ್ಘನ್‌ನ ಹೊಸ ಸರ್ಕಾರದ ಔಪಚಾರಿಕ ಮನ್ನಣೆ ಶೀಘ್ರದಲ್ಲೇ ಸಂಭವಿಸಬಹುದು ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ.

ಇದು ಸಾಧ್ಯವಾದರೆ, ಪಾಕಿಸ್ತಾನದ ಗಡಿಯಲ್ಲಿನ ಕಾರ್ಯತಂತ್ರದ ಹೂಡಿಕೆಗಳನ್ನು ರಕ್ಷಿಸಲು ತಾಲಿಬಾನ್ ಚೀನಾಕ್ಕೆ ಸಹಾಯ ಮಾಡುತ್ತದೆ. ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳಲು ತಾಲಿಬಾನ್ ತರಬೇತಿಗೆ ಪಾಕಿಸ್ತಾನದ ಭದ್ರತಾ ಸಂಸ್ಥೆಯ ಸಹಾಯವನ್ನು ಪಡೆದಿದೆ ಎಂದು ಅನೇಕ ತಜ್ಞರು ನಂಬಿದ್ದಾರೆ. ಇವೆಲ್ಲವೂ ಸಾಮಾನ್ಯ ಬೆದರಿಕೆಗಳಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

“ಈ ವರ್ಷದ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಅತಿಥಿಗಳು ಬರಲಿಲ್ಲ. ಏಕೆಂದರೆ, ದೇಶವು ಸಂಪೂರ್ಣವಾಗಿ ಪ್ರತ್ಯೇಕವಾಗಿದೆ ಮತ್ತು ಶತ್ರುಗಳಿಂದ ಸುತ್ತುವರಿದಿದೆ, ನಾವು ನೇಪಾಳ, ಅಫ್ಘಾನಿಸ್ತಾನ, ಚೀನಾದಿಂದ ಸುತ್ತುವರೆದಿದ್ದೇವೆ. ಮಾತ್ರವಲ್ಲದೆ, ಭಾರತ ಸರ್ಕಾರವು ದೇಶದ ಜನರ ವಿರುದ್ಧವೇ ಕೆಲಸ ಮಾಡುತ್ತಿದೆ. ಇದು ದೊಡ್ಡ ಅಪರಾಧ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಹಿಂತೆಗೆದುಕೊಂಡಿದ್ದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ನಾವು ಜಮ್ಮು ಕಾಶ್ಮೀರದಲ್ಲಿ ಒಂದು ದೊಡ್ಡ ಕಾರ್ಯತಂತ್ರವನ್ನು ಜಾರಿಗೊಳಿಸಿ ತಪ್ಪನ್ನು ಮಾಡಿದ್ದೇವೆ. ಗಡಿ ರಾಜ್ಯಗಳಲ್ಲೂ ಸಂಘರ್ಷಗಳು ಹೆಚ್ಚುತ್ತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಜೈಶಂಕರ್ ಸ್ಪಷ್ಟನೆ

ರಾಹುಲ್ ಗಾಂಧಿ ಅವರ ಆರೋಪಕ್ಕೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ಒಕ್ಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಕೆಲಸ ಮಾಡಿದ ನಾಲ್ಕು ಉದಾಹರಣೆಗಳನ್ನು ಪಟ್ಟಿ ಮಾಡಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

• 1963ರಲ್ಲಿ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತ್ತು.

• 1970 ರ ದಶಕದಲ್ಲಿ ಚೀನಾ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.

• 1970 ರ ದಶಕದಿಂದಲೇ ಉಭಯ ದೇಶಗಳು ನಿಕಟ ಪರಮಾಣು ಸಹಯೋಗವನ್ನು ಹೊಂದಿವೆ.

• 2013 ರಲ್ಲಿ, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭವಾಯಿತು ಎಂದು ಜೈಶಂಕರ್ ಉಲ್ಲೇಖಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಗಣರಾಜ್ಯೋತ್ಸವದ ರಾಷ್ಟ್ರೀಯ ಅತಿಥಿ ಇರಲಿಲ್ಲವೆನ್ನುವ ಟೀಕೆಗೆ ಉತ್ತರಿಸಿದ ಅವರು, “ನಾವು ಸಾಂಕ್ರಾಮಿಕ ರೋಗದ ಮಧ್ಯದಲ್ಲಿದ್ದೇವೆ. ವಿದೇಶಿ ಅತಿಥಿಗಳು ಗಣರಾಜ್ಯೋತ್ಸವ ಆಚರಣೆಯಲ್ಲಿ ಭೌತಿಕವಾಗಿ ಜೊತೆಗಿರಲಿಲ್ಲ. ಆದರೆ, ಕಾರ್ಯಕ್ರಮಕ್ಕೆ ಬರಬೇಕಿದ್ದ 5 ಮಧ್ಯ ಏಷ್ಯಾ ರಾಷ್ಟ್ರಗಳ ಅಧ್ಯಕ್ಷರು ಜನವರಿ 27 ರಂದು ನಡೆದ ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಇದನ್ನು ರಾಹುಲ್ ಗಾಂಧಿ ಮರೆತಿದ್ದಾರೆಯೇ?” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....